Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಕ್ರಮ ಮದ್ಯ ಮಾರಾಟ : ಕಾನೂನು ಕ್ರಮಕ್ಕೆ ರೈತ ಸಂಘ ಹಾಗೂ ಮಹಿಳಾ ಸಂಘಟನೆಗಳ ಪ್ರತಿಭಟನೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕು ಕ್ಯಾತಗೊಂಡನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಮಹಿಳಾ ಸಂಘಟನೆಗಳು ಹಾಗೂ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕ್ಯಾತಗೊಂಡನಹಳ್ಳಿ ಗ್ರಾಮದ ಹತ್ತು ಅಂಗಡಿಗಳಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟವಾಗುತ್ತಿರುವುದರಿಂದ ಚಿಕ್ಕವರಿಂದ ಹಿಡಿದು ದೊಡ್ಡವರತನಕ ದಿನವೂ ಮದ್ಯ ಸೇವಿಸಿ ಗಲಾಟೆ ಮಾಡುವುದರಿಂದ ಗ್ರಾಮದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ದಿನವಿಡಿ ಕೂಲಿ ಮಾಡಿ ಬರುವ ಹಣದಿಂದ ಗಂಡಸರು ಮದ್ಯ ಸೇವಿಸಿ ರಾತ್ರಿ ವೇಳೆಯಲ್ಲಿ ಮನೆಯಲ್ಲಿ ಹೆಂಡತಿ ಮಕ್ಕಳ ಮೇಲೆ ಹಲ್ಲೆ ನಡೆಸುವುದು ಸರ್ವೆ ಸಾಮಾನ್ಯವಾಗಿಬಿಟ್ಟಿದೆ.

ಈ ಸಂಬಂಧ ಅಬಕಾರಿ ಹಾಗೂ ಪೊಲೀಸ್ ಇಲಾಖೆಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಇದುವರೆವಿಗೂ ಅಕ್ರಮ ಮದ್ಯ ಮಾರಾಟಗಾರರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಕ್ರಮ ಮದ್ಯ ಮಾರಾಟ ತಡೆಗಟ್ಟಿ ಗ್ರಾಮದಲ್ಲಿ ನೆಮ್ಮದಿ ನೆಲೆಸುವಂತೆ ಮಾಡಿ ಎಂದು ಮಹಿಳೆಯರು ಜಿಲ್ಲಾಧಿಕಾರಿಯವರಲ್ಲಿ ವಿನಂತಿಸಿದರು.

ಕೃಷ್ಣಮೂರ್ತಿ, ಡಿಂಗ್ರಿನಾಗರಾಜ್, ಪುಟ್ಟಕ್ಕ, ಶಿವಮ್ಮ, ರಮೇಶ್, ತಿಪ್ಪಮ್ಮ, ಶಿಲ್ಪ, ಮಲ್ಲಮ್ಮ, ಸುಮಲತ, ರೈತ ಮುಖಂಡ ಕೆ.ಪಿ.ಭೂತಯ್ಯ, ಶಿವಕುಮಾರ್, ರಾಜಣ್ಣ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!