Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ರಮ ಆಸ್ತಿ ಪ್ರಕರಣ : ಜಮೀರ್ ಅಹ್ಮದ್ ಅರ್ಜಿ ವಜಾ ಮಾಡಿದ ಹೈಕೋರ್ಟ್

---Advertisement---

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಹಿನ್ನಡೆಯಾಗಿದೆ.

 

87.44 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಗಳಿಕೆ ಸಂಬಂಧ ಲೋಕಾಯುಕ್ತ ಪೊಲೀಸರು ಜಮೀರ್ ವಿರುದ್ಧ ದೂರು ದಾಖಲಿದ್ದರು. ಈ ಪ್ರಕರಣ ರದ್ದು ಮಾಡುವಂತೆ, ಜಮೀರ್ ಅಹ್ಮದ್ ಖಾನ್ ಹೈಕೋರ್ಟ್ ಗೆ ಮನವಿ ಮಾಡಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿಯನ್ನು ರದ್ದುಗೊಳಿಸಿ, ಆದೇಶ ಹೊರಡಿಸಿದೆ.

 

30 ದಿನಗಳ ಕಾಲ ತನ್ನ ತೀರ್ಪನ್ನು ಅಮಾನತಿನಲ್ಲಿಟ್ಟಿದ್ದ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದೆ ಕೂಡ ಎಸಿಬಿ ತನಿಖೆಗೆ ತಡೆಯಾಜ್ಞೆ ನೀಡಲು ನಿರಾಕರಣೆ ಮಾಡಿತ್ತು. ಈ ಆದೇಶವನ್ನು ಜಮೀರ್ ಖಾನ್ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. 2019 ರ ಜೂನ್​ನಲ್ಲಿ, ಜಮೀರ್ ಮತ್ತು ಐ-ಮಾನಿಟರಿ ಅಡ್ವೈಸರಿ ಪ್ರೈವೇಟ್ ಲಿಮಿಟೆಡ್‌ನ ಪ್ರವರ್ತಕ ಮೊಹಮ್ಮದ್ ಮನ್ಸೂರ್ ಖಾನ್ ನಡುವಿನ ಕೆಲವು ವಹಿವಾಟಿನ ಕುರಿತು ಜಾರಿ ನಿರ್ದೇಶನಾಲಯದಿಂದ ವರದಿಯನ್ನು ಪಡೆದ ನಂತರ ಎಸಿಬಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment