ಸುದ್ದಿಒನ್, ಹಿರಿಯೂರು, ಡಿಸೆಂಬರ್.20 : ತಾಲ್ಲೂಕಿನ 103 ಗೇಟ್ ಬಳಿ ಈಚರ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಆಹಾರ ಸರಬರಾಜು ಶಿರಸ್ತೇದಾರ್ ಮತ್ತು ಇನ್ನಿತರ ಅಧಿಕಾರಿಗಳು ದಾಳಿ ನಡೆಸಿ, ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಕುಷ್ಟಗಿ ತಾಲೂಕಿನ ಎಂ. ಗೂಡದೂರು ಗ್ರಾಮದ 32 ವರ್ಷದ ಶಿವಪುತ್ರ ಎಂಬ ಲಾರಿ ಚಾಲಕ ತನ್ನ ಈಚರ್ ಲಾರಿಯಲ್ಲಿ 30ರಿಂದ 40 ಚೀಲಗಳಲ್ಲಿ ಅಕ್ಕಿ ಮತ್ತು ಗೋಧಿ ತುಂಬಿಕೊಂಡು ಬೇರೆಡೆಗೆ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ ಅನ್ನಭಾಗ್ಯ ಯೋಜನೆಯ ಅಕ್ಕಿ ಹಾಗೂ ಗೋಧಿಯಂತೆ ಕಂಡು ಬಂದ ಹಿನ್ನೆಲೆಯಲ್ಲಿ ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜೇಶ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಗೌಡ ಸೇರಿದಂತೆ ಮತ್ತಿತರರು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









