Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅನಾರೋಗ್ಯದ ಹಿನ್ನೆಲೆ : ಚೆನ್ನೈ ಆಸ್ಪತ್ರೆಗೆ ದಾಖಲಾದ ಕುಮಾರಸ್ವಾಮಿ

---Advertisement---

 

 

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದೀಗ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೇಂದ್ರ ಸಚಿವರಾದ ಮೇಲೆ ಓಡಾಟ ಹೆಚ್ಚು ಮಾಡಿದ್ದ ಕುಮಾರಸ್ವಾಮಿ ಅವರು, ಅನಾರೋಗ್ಯಕ್ಕೆ ಈಡಾಗಿದ್ದರು. ಹೀಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಟ್ರೀಟ್ಮೆಂಟ್ ಮುಗಿದ ಬಳಿಕ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ.

ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದಾಗಿನಿಂದ ಬಿಡುವಿಲ್ಲದಂತೆ ಓಡಾಟ ನಡೆಸುತ್ತಿದ್ದಾರೆ. ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಜನರ ನಡುವೆ ಬೆರೆತು ಅವರ ಕಷ್ಟ ಸುಖಗಳನ್ನ ಕೇಳುತ್ತಿದ್ದಾರೆ. ಹೀಗಾಗಿ ಬಿಡುವಿಲ್ಲದ ಓಡಾಟದಿಂದ ದೇಹ ಸುಸ್ತಾಗಿದೆ. ಹೀಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ನಿಗಧಿ ಮಾಡಿದ್ದ ಕಾರ್ಯಕ್ರಮಗಳೆಲ್ಲ ರದ್ದಾಗಿವೆ.

ಇದರ ನಡುವೆ ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಸಂಸದ ಡಾ. ಸಿ.ಎನ್.ಮಂಜುನಾಥ್ ಹಾಗೂ ಅವರ ಸಂಬಂಧಿಕರು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆಂದು ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಕಂದಾಯ ಇಲಾಖೆ ಹಾಗೂಮಾಪನ ಮತ್ತು ಭೂ ದಾಖಲೆಗಳ ಇಲಾಖೆ ಅಧಿಕಾರಿಗಳು ಕೂಡ ಜಮೀನಿಗೆ ಭೇಟಿ ನೀಡಿ ಸರ್ವೆ ಕೆಲಸ ಮಾಡುತ್ತಿದ್ದಾರೆ. ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಸುಮಾರು ಹತ್ತು ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದೆ ಎಂದು ಆರೋಪಿಸಿ ಎಸ್.ಆರ್.ಹಿರೇಮಠ ಅವರು ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದರಲ್ಲಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಡಿಸಿ ತಮ್ಮಣ್ಣ ಅವರ ಹೆಸರು ಕೂಡ ಉಲ್ಲೇಖ ಮಾಡಲಾಗಿದೆ. ಇದರ ವಿಚಾರಣೆಯನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದಲ್ಲಿ ವಿಭಾಗೀಯ ನ್ಯಾಯಪೀಠವೂ ನಡೆಸಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment