Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಂದಾಚಾರ ಮತ್ತು ಮೂಢನಂಬಿಕೆ ದೂರವಿರಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ : ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 30 : ಗ್ರಾಮೀಣ ಪ್ರದೇಶದ ಜನರು ಕಂದಾಚಾರ ಮತ್ತು ಮೂಢನಂಬಿಕೆಯಿಂದ ದೂರವಿರಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದರು.

ಭರಮಸಾಗರ ಸಮೀಪವಿರುವ ಬಸವನಶಿವನಕೆರೆ ಗ್ರಾಮದಲ್ಲಿ ಶಿವಯೋಗಿ ಸಿದ್ದರಾಮೇಶ್ವರರ ಕಂಚಿನ ಪ್ರತಿಮೆಯನ್ನು ಸೋಮವಾರ ಉದ್ಗಾಟಿಸಿ ಮಾತನಾಡಿದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ವಚನಗಳ ಅಭ್ಯಾಸದಿಂದ ವೈಜ್ಞಾನಿಕ ಪ್ರಜ್ಞಾವಂತರಾಗಿ, ಪ್ರಶ್ನಿಸುವ ಮನೋಭಾವದಿಂದ ಜ್ಞಾನ-ವಿಜ್ಞಾನ-ಸುಜ್ಞಾನವಂತರಾಗಿ. ಜೀವದೆಯ ಪರ ಮತ್ತು ಮೂಢನಂಬಿಕೆಗೆ ವಿರುದ್ದವಾದ ಚಿಂತನೆಗಳನ್ನು ಸಿದ್ದರಾಮೇಶ್ವರರ ವಚನಗಳಲ್ಲಿ ಏಕಕಾಲಕ್ಕೆ ಕಾಣಬಹುದು. ಬೇರೆಯವರ ಮನಸ್ಸನ್ನು ನೋಯಿಸಿ ಹಿಂಸೆಯನ್ನುಂಟು ಮಾಡಿ ಸಂತೋಷ ಪಡುವುದು ವಿಘ್ನ ಸಂತೋಷಿಗಳ ಕುಕೃತ್ಯವಾಗಿದೆ. ಇಂತಹ ನಿರ್ಧಯಿಗಳು ನೂರೆಂಟು ಪಾಪ ಕೃತ್ಯಗಳನ್ನು ಎಸಗಿದ ನಂತರ ಪ್ರಾಯಶ್ಚಿತಕ್ಕಾಗಿ ಕಾಶಿಗೆ ಹೋಗಿ ಗಂಗಾ ನದಿಯಲ್ಲಿ ಮುಳುಗಿ ವಿಶ್ವನಾಥನ ದರ್ಶನ ಪಡೆದರೆ ಪಾಪ ಪರಿಹಾರವಾಗುವುದೆ ಎಂದು ಸಿದ್ದರಾಮೇಶ್ವರರು ಪ್ರಶ್ನಿಸಿದ್ದಾರೆಂದು ಹೇಳಿದರು.

ಹುಣ್ಣಿಮೆ ದಿನ ಪೂರ್ಣಚಂದ್ರ ಗಂಗಾನದಿಯಲ್ಲಿ ಥಳಥಳನೆ ಹೊಳೆಯುತ್ತಿರುತ್ತಾನೆ. ಆದರೆ ಚಂದ್ರನ ಜೊತೆ ಆತನ ಕಲೆಗಳು ಎದ್ದು ಕಾಣುತ್ತಿರುತ್ತವೆ. ಧರ್ಮ, ನೀತಿ
ತತ್ವಜ್ಞಾನ ಮುಂತಾದವು ಮಾನವರಿಗೆ ಸಂಸ್ಕಾರ ಕೊಟ್ಟು ನಿಜಮಾನವರನ್ನಾಗಿಸುವ ಗುರಿಯನ್ನೆ ಹೊಂದಿವೆ. ಆದರೆ ಧಾರ್ಮಿಕ ವಿಧಿ, ವಿಧಾನಗಳು ಸುಳ್ಳು ಜ್ಯೋತಿಷಿಗಳು
ಭವಿಷ್ಯ ಹೇಳುವವರು ಪಾಪ ಪರಿಹಾರ ಮಾಡುತ್ತೇವೆಂದು ನಂಬಿಸಿ ಧರ್ಮದ ಹೆಸರಿನಲ್ಲಿ ಮೋಸ ಮಾಡುತ್ತಾರೆ. ಇದರಿಂದ ಅಪರಾಧಗಳು ಹೆಚ್ಚಾಗುತ್ತವೆ. ಪಾಪಕ್ಕೆ ಪರಿಹಾರವಿದೆ ಎಂದ ಮೇಲೆ ಪಾಪ ಮಾಡುವುದಕ್ಕೆ ಜನರು ಹಿಂಜರಿಯುವುದಿಲ್ಲ. ವಿವಿಧ ಪಾಪ ಕಾರ್ಯಗಳಿಗೆ ತಕ್ಕಂತೆ ಪರಿಹಾರವನ್ನೂ ಹುಸಿ ಧರ್ಮ ಪಂಡಿತರು ಸೂಚಿಸುತ್ತಾರೆ. ನಿಜವಾದ ಧರ್ಮ ಜ್ಞಾನಿಗೆ ಈ ಅವನತಿ ಹೊಂದುತ್ತಿರುವ ವ್ಯವಸ್ಥೆಯಲ್ಲಿ ಸ್ಥಾನವೇ ಇಲ್ಲದಂತಾಗಿ ತನ್ನೊಳಗಿನ ಆತ್ಮಸಾಕ್ಷಿ ಹೊರಗಿನ ಜೀವ ಜಗತ್ತಿನ ಬಗೆಗಿನ ಭೂತ ದಯೆ, ಧರ್ಮ, ದರ್ಶನ, ನೀತಿ, ಮೌಲ್ಯ ಮತ್ತು ಸಂಸ್ಕಾರದ ಮೂಲಕ ಪರಮ ಪಾವನವಾಗಿ ಯಾರ ಮನಸ್ಸನ್ನು ನೋಯಿಸದೆ, ಹಿಂಸೆ ಕೊಡದೆ ಬದುಕುವವನೆ ನಿಜವಾದ ಮಾನವ ಎಂದರು.
ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಚಿಕ್ಕಂದವಾಡಿ ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಡಿ.ತಿಮ್ಮಣ್ಣ, ಕಾರ್ಯದರ್ಶಿ ಹೆಚ್.ಲಕ್ಷ್ಮಣ್, ಬಸವನಶಿವನಕೆರೆ ಗ್ರಾಮ ಪಂಚಾಯಿತಿ ಸದಸ್ಯ
ರುಗಳಾದ ಚಂದ್ರಪ್ಪ, ದೇವೇಂದ್ರಪ್ಪ ಆರ್. ಕೆ.ಬಸವರಾಜಪ್ಪ ಬ್ಯಾಲಹಾಳ್, ಈಶ್ವರಪ್ಪ ಬೇಡರಶಿವನಕೆರೆ, ತಿಪ್ಪೇಸ್ವಾಮಿ, ಯಲ್ಲಪ್ಪ ಹಾಗೂ ಬೇಡರ ಶಿವನಕೆರೆ ಬಸವನಶಿವನಕೆರೆ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment