Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಡಿನ ಶಿಲ್ಪ ಪರಂಪರೆ ಜಗತ್ತಿಗೆ ಸಾರಿದ ಅಮರಶಿಲ್ಪಿ ಜಕಣಾಚಾರಿ : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್

---Advertisement---

ಚಿತ್ರದುರ್ಗ. ಜ.01:   ನಾಡಿನ ಶಿಲ್ಪ ಪರಂಪರೆಯನ್ನು ಜಗತ್ತಿಗೆ ಸಾರಿದ ಅಮರಶಿಲ್ಪಿ ಜಕಣಾಚಾರಿ, ಶಿಲ್ಪಕಲೆಯಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿ ಅಜರಾಮರವಾಗಿದ್ದಾರೆ ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು.

ಸೋಮವಾರ ನಗರದ ತರಾಸು ರಂಗಮಂದಿರಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಆಯೋಜಿಸಲಾದ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಶಿಲ್ಪಕಲೆ ಕೆತ್ತನೆಗೆ ಸೂಕ್ಷ್ಮ ಕುಸುರಿತನ ತಂದ ಅಮರಶಿಲ್ಪಿ ಜಕಣಾಚಾರಿ, ತಮ್ಮ ಸೃಜನಾತ್ಮಕತೆ ಮೂಲಕ ಉತ್ಕøಷ್ಟತೆಯನ್ನು ತಲುಪಿದರು. ಕಲ್ಯಾಣದ ಚಾಲುಕ್ಯರು ಹಾಗೂ ಹೊಯ್ಸಳರ ಕಾಲದಲ್ಲಿ ಅವರು ನಿರ್ಮಿಸಿದ ದೇವಾಲಯಗಳು ಇಂದಿಗೂ ಜನರ ಮನಸ್ಸನ್ನು ಸೆಳೆಯುತ್ತಿವೆ. 21ನೇ ಶತಮಾನದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸೃಜನಶೀಲತೆ ಅತಿ ಮುಖ್ಯವಾಗಿದೆ. ಕ್ರಿಯಾಶೀಲತೆ ಹಾಗೂ ಸೃಜನಶೀಲತೆ ಇದ್ದವರು ಮಾತ್ರ ಸ್ಪರ್ಧಾತ್ಮಕ ಯುಗದಲ್ಲಿ ಅಭಿವೃದ್ಧಿಯಾಗಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಬೆಂಗಳೂರಿನ ಎಂ.ಜಿ. ಸತೀಶ್ ಮುಳ್ಳೂರು ಜಕಣಾಚಾರಿ ಕುರಿತು ಉಪನ್ಯಾಸ ನೀಡಿ, ರಾಷ್ಟ್ರಕವಿ ಕುವೆಂಪು ನಾಡಗೀತೆಯಲ್ಲಿಯೇ ಕನ್ನಡ ನಾಡನ್ನು ‘ಡಂಕಣ ಜಕಣರ ನೆಚ್ಚಿನ ಬೀಡು’ ಎಂದು ಬಣ್ಣಿಸಿದ್ದಾರೆ. ವಿಶ್ವದಲ್ಲೇ ಬೇಲೂರು ಹಾಗೂ ಹಳೆಬೇಡು ಶಿಲ್ಪಕಲೆಗೆ ಹೆಸರುವಾಸಿಯಾಗಿವೆ. ಭಾರತೀಯ ಶಿಲ್ಪ ಕೆತ್ತನೆಯ ಪರಂಪರೆಯಲ್ಲಿ ಅಮರಶಿಲ್ಪ ಜಕಣಾಚಾರಿ ಸ್ಮರಣೀಯರಾಗಿದ್ದಾರೆ. ವಿಶ್ವಕರ್ಮ ಸಮಾಜಕ್ಕೆ ಮಾತ್ರ ಶಿಲ್ಪಿ ಜಕಣಾಚಾರಿ ಸೀಮಿತವಲ್ಲ. ನಾಡಿನ ಪ್ರತಿಯೊಬ್ಬರು ಜಕಣಾಚಾರಿ ಬಗ್ಗೆ ಹೆಮ್ಮೆ ಪಡಬೇಕು ಎಂದರು.
ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಕೆ.ಟಿ. ಸುರೇಶಾಚಾರ್ಯ ಮಾತನಾಡಿ, ವಿಶ್ವಕರ್ಮ ಸಮಾಜವು ಸಂಘಟನೆಯ ಮೂಲಕ ಒಗ್ಗೂಡಬೇಕಿದೆ. ನಮ್ಮ ಪರಂಪರೆಯನ್ನು ಮುಂದಿನ ಜನಾಂಗಕ್ಕೂ ತಿಳಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ರಾಂಪುರದ ಶಿಲ್ಪಿ ಮಂಜುನಾಥ ಆಚಾರ್ ಅವರನ್ನು ಸನ್ಮಾನಿಸಲಾಯಿತು. ಕಲಾವಿದ ಉಮೇಶ್ ಪತ್ತಾರ ತಂಡವು ಗೀತ ಗಾಯನ ಪ್ರಸುತಪಡಿಸಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ವಿಶ್ವಕರ್ಮ ಕಾಳಿಕಾಂಬ ಕಲ್ಯಾಣ ಮಂಟಪದ ಟ್ರಸ್ಟ್ ಅಧ್ಯಕ್ಷ ಎಂ.ಶಂಕರಾಚಾರ್, ನಿವೃತ್ತ ಪಿ.ಎಸ್.ಐ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment