Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುದ್ಧದ ಪರಿಣಾಮ : ನಿರ್ಮಾಣ ವಸ್ತುಗಳ ಬೆಲೆ ಏರಿಕೆ, ಮನೆ ಕಟ್ಟುವುದು ದುಬಾರಿ

---Advertisement---

ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿ, ವಿಶೇಷವಾಗಿ ಇರಾನ್ ಸಂಘರ್ಷದ ಪರಿಣಾಮವಾಗಿ ಭಾರತದ ನಿರ್ಮಾಣ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಕಾಣಿಸಿಕೊಂಡಿದೆ. ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ಅನಿಲ ಪೂರೈಕೆಯಲ್ಲಿ ಉಂಟಾದ ವ್ಯತ್ಯಯಗಳಿಂದ ಟೈಲ್ಸ್, ಪೇಂಟ್ಸ್, ಪಿವಿಸಿ ಸೇರಿದಂತೆ ಹಲವು ನಿರ್ಮಾಣ ವಸ್ತುಗಳ ದರಗಳು ಹೆಚ್ಚಾಗಿವೆ.

ಇದರಿಂದಾಗಿ ಸ್ವಂತ ಮನೆ ಕಟ್ಟುವ ಕನಸು ಕಾಣುವವರಿಗೆ ಹೆಚ್ಚುವರಿ ಹೊರೆ ಬೀಳುವ ಸಾಧ್ಯತೆ ಇದ್ದು, ಒಟ್ಟಾರೆ ನಿರ್ಮಾಣ ವೆಚ್ಚವು ಶೇಕಡಾ 10 ರಿಂದ 20ರವರೆಗೆ ಏರಿಕೆಯಾಗುವ ಅಂದಾಜು ವ್ಯಕ್ತವಾಗಿದೆ.

ಟೈಲ್ಸ್ ಕ್ಷೇತ್ರದ ಮೇಲೆ ಪರಿಣಾಮ :
ಗುಜರಾತ್‌ನ ಮೋರ್ಬಿ ಪ್ರದೇಶವು ವಿಶ್ವದ ಪ್ರಮುಖ ಸಿರಾಮಿಕ್ ಉತ್ಪಾದನಾ ಕೇಂದ್ರಗಳಲ್ಲಿ ಒಂದಾಗಿದೆ. ಇಲ್ಲಿ ಟೈಲ್ಸ್ ತಯಾರಿಕೆಗೆ ಅಗತ್ಯವಿರುವ ನೈಸರ್ಗಿಕ ಅನಿಲ ಪೂರೈಕೆ ಪಶ್ಚಿಮ ಏಷ್ಯಾ ದೇಶಗಳ ಮೇಲೆ ಅವಲಂಬಿತವಾಗಿದೆ. ಇತ್ತೀಚಿನ ಗ್ಯಾಸ್ ಕೊರತೆಯಿಂದ ಉತ್ಪಾದನೆ ಕುಂಠಿತಗೊಂಡಿದ್ದು, ಸುಮಾರು 700 ಘಟಕಗಳಲ್ಲಿ 450 ಕಾರ್ಖಾನೆಗಳು ಕಾರ್ಯನಿರ್ವಹಣೆ ನಿಲ್ಲಿಸಿರುವುದಾಗಿ ತಿಳಿದುಬಂದಿದೆ. ಇದರಿಂದ ಮಾರುಕಟ್ಟೆಯಲ್ಲಿ ಟೈಲ್ಸ್ ಕೊರತೆ ಉಂಟಾಗಿ, ಬೆಲೆಗಳು ಶೇಕಡಾ 7ರಿಂದ 15ರವರೆಗೆ ಏರಿಕೆಯಾಗುವ ಸಾಧ್ಯತೆ ಇದೆ.

ಪೇಂಟ್ಸ್ ಬೆಲೆಗಳ ಏರಿಕೆ :
ಪೇಂಟ್ ಉತ್ಪಾದನೆಗೆ ಬಳಸುವ ಕಚ್ಚಾ ವಸ್ತುಗಳು ಬಹುತೇಕ ಕಚ್ಚಾ ತೈಲದಿಂದ ತಯಾರಾಗುತ್ತವೆ. ಯುದ್ಧದ ಪರಿಣಾಮವಾಗಿ ತೈಲ ಬೆಲೆ ಏರಿಕೆಯಾಗಿ, ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ 2026ರ ಏಪ್ರಿಲ್ ವೇಳೆಗೆ ಪೇಂಟ್ಸ್ ದರಗಳು ಶೇಕಡಾ 2ರಿಂದ 5ರವರೆಗೆ ಏರಿಕೆಯಾಗಬಹುದು ಎಂದು ವಿಶ್ಲೇಷಕರು ಅಂದಾಜಿಸಿದ್ದಾರೆ.

ಇತರೆ ನಿರ್ಮಾಣ ವಸ್ತುಗಳ ಮೇಲೂ ಹೊರೆ :
ಪಿವಿಸಿ ಹಾಗೂ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದ್ದು, ಪಿವಿಸಿ ಬೋರ್ಡ್‌ಗಳು, ಡೋರ್ ಫ್ರೇಮ್‌ಗಳು ಮತ್ತು ಪೈಪ್‌ಗಳ ಬೆಲೆಗಳು ಈಗಾಗಲೇ ಶೇಕಡಾ 10ರಿಂದ 15ರವರೆಗೆ ಏರಿಕೆ ಕಂಡಿವೆ.
ಇದರ ಜೊತೆಗೆ ಅಂತರಾಷ್ಟ್ರೀಯ ಸಾಗಾಟ ಮಾರ್ಗಗಳಲ್ಲಿ ಉಂಟಾದ ಉದ್ವಿಗ್ನತೆ, ವಿಶೇಷವಾಗಿ ಹರ್ಮುಜ್ ಜಲಸಂಧಿ ಭಾಗದಲ್ಲಿ ಹೆಚ್ಚಿದ ಭದ್ರತಾ ವೆಚ್ಚ ಮತ್ತು ವಿಮಾ ಶುಲ್ಕಗಳಿಂದ ಸಾಗಾಟ ವೆಚ್ಚವೂ ಹೆಚ್ಚಾಗಿದೆ. ಇದರಿಂದ ನಿರ್ಮಾಣ ಕ್ಷೇತ್ರದ ಒಟ್ಟು ವೆಚ್ಚದ ಮೇಲೆ ಹೆಚ್ಚುವರಿ ಒತ್ತಡ ಉಂಟಾಗಿದೆ.

ಒಟ್ಟಾರೆ, ಜಾಗತಿಕ ರಾಜಕೀಯ ಉದ್ವಿಗ್ನತೆ ನೇರವಾಗಿ ಗೃಹ ನಿರ್ಮಾಣ ಕ್ಷೇತ್ರದ ಮೇಲೆ ಪರಿಣಾಮ ಬೀರುತ್ತಿದ್ದು, ಮುಂದಿನ ದಿನಗಳಲ್ಲಿ ಮನೆ ಕಟ್ಟುವುದು ಇನ್ನಷ್ಟು ದುಬಾರಿಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now