Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಆ.19ರಿಂದ 26ರವರೆಗೆ ಹಲವು ರೈಲುಗಳ ಸಂಚಾರ ರದ್ದು, ಈ ಮಾರ್ಗ ಬದಲಾವಣೆ

---Advertisement---

ಆಗಸ್ಟ್ 19ರಿಂದ 26ರವರೆಗೆ ರೈಲು ಪ್ರಯಾಣ ಯೋಜಿಸಿರುವವರಿಗೆ ನೈರುತ್ಯ ರೈಲ್ವೆ ಮಹತ್ವದ ಮಾಹಿತಿ ನೀಡಿದೆ. ಮಲ್ಲಸಂದ್ರ ಮತ್ತು ಗುಬ್ಬಿ ರೈಲು ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 48ರಲ್ಲಿ ಆರ್‌ಸಿಸಿ ಬಾಕ್ಸ್ ಅಳವಡಿಕೆ ಹಾಗೂ ಗರ್ಡರ್ ತೆರವು ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ ಹಾಗೂ ಸಮಯ ಪರಿಷ್ಕರಣೆ ಮಾಡಲಾಗಿದೆ.ಆಗಸ್ಟ್ 19 ಮತ್ತು 26ರಂದು ಸಂಚರಿಸಬೇಕಿದ್ದ ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್, ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್, ಕೆಎಸ್‌ಆರ್ ಬೆಂಗಳೂರು-ಮೈಸೂರು ಒಡೆಯರ್ ಎಕ್ಸ್‌ಪ್ರೆಸ್ ಹಾಗೂ ಬೆಂಗಳೂರು-ತುಮಕೂರು ಮೆಮು ರೈಲುಗಳ ಸಂಚಾರ ರದ್ದುಗೊಂಡಿದೆ.ಅದೇ ರೀತಿ, ಆಗಸ್ಟ್ 19, 22 ಮತ್ತು 26ರಂದು ಸಂಚರಿಸಬೇಕಿದ್ದ ಯಲಹಂಕ-ಅರಸೀಕೆರೆ ಹಾಗೂ ಅರಸೀಕೆರೆ-ಯಲಹಂಕ ಮೆಮು ರೈಲುಗಳ ಸೇವೆಯನ್ನೂ ರದ್ದುಪಡಿಸಲಾಗಿದೆ.

ಆಗಸ್ಟ್ 19, 22, 23 ಹಾಗೂ 26ರಂದು ಸಂಚರಿಸುವ ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಅರಸೀಕೆರೆ ನಿಲ್ದಾಣದಲ್ಲೇ ತನ್ನ ಸಂಚಾರವನ್ನು ಕೊನೆಗೊಳಿಸಲಿದೆ.ಇದೇ ಅವಧಿಯಲ್ಲಿ ಕೆಎಸ್‌ಆರ್ ಬೆಂಗಳೂರು-ಧಾರವಾಡ ಸಿದ್ಧಗಂಗಾ ಎಕ್ಸ್‌ಪ್ರೆಸ್ ರೈಲು ಬೆಂಗಳೂರಿನ ಬದಲಿಗೆ ಅರಸೀಕೆರೆಯಿಂದ ಸಂಚಾರ ಆರಂಭಿಸಲಿದೆ. ಧಾರವಾಡ-ಕೆಎಸ್‌ಆರ್ ಬೆಂಗಳೂರು ಸಿದ್ಧಗಂಗಾ ಎಕ್ಸ್‌ಪ್ರೆಸ್ ರೈಲು ಕೂಡ ಅರಸೀಕೆರೆ ನಿಲ್ದಾಣದಲ್ಲೇ ಸಂಚಾರ ಅಂತ್ಯಗೊಳಿಸಲಿದೆ. ವಿಶ್ವಮಾನವ ಎಕ್ಸ್‌ಪ್ರೆಸ್ ರೈಲು ಮೈಸೂರು-ಹೊಳೆನರಸೀಪುರ-ಹಾಸನ-ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಪಾಂಡವಪುರ ಮತ್ತು ತಿಪಟೂರು ನಡುವಿನ ಯಾವುದೇ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆ ಇರುವುದಿಲ್ಲ.

ವಾಸ್ಕೋ ಡ ಗಾಮ-ಯಶವಂತಪುರ ಹಾಗೂ ಯಶವಂತಪುರ-ಶಿವಮೊಗ್ಗ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲುಗಳು ಹಾಸನ-ನೆಲಮಂಗಲ ಮಾರ್ಗದ ಮೂಲಕ ಸಂಚರಿಸಲಿವೆ.ಉದಯಪುರ ಸಿಟಿ-ಮೈಸೂರು ಎಕ್ಸ್‌ಪ್ರೆಸ್ ರೈಲು 200 ನಿಮಿಷ ತಡವಾಗಿ ಹೊರಡಲಿದೆ. ಶ್ರೀ ಗಂಗಾನಗರ-ತಿರುಚಿರಾಪಳ್ಳಿ ಎಕ್ಸ್‌ಪ್ರೆಸ್ ರೈಲು 150 ನಿಮಿಷ ತಡವಾಗಿ ಸಂಚರಿಸಲಿದೆ.ಯಶವಂತಪುರ-ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಹಾಗೂ ವಾಸ್ಕೋ ಡ ಗಾಮ-ಯಶವಂತಪುರ ರೈಲುಗಳನ್ನು ಮಾರ್ಗಮಧ್ಯೆ 15ರಿಂದ 20 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.
ಹೀಗಾಗಿ ಈ ಅವಧಿಯಲ್ಲಿ ರೈಲು ಪ್ರಯಾಣ ಕೈಗೊಳ್ಳುವ ಪ್ರಯಾಣಿಕರು ನಿಲ್ದಾಣಕ್ಕೆ ತೆರಳುವ ಮುನ್ನ ರೈಲಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಸಂಚಾರ ಸ್ಥಿತಿಯನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now