Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಷನ್ ಕಾರ್ಡ್‌ದಾರರಿಗೆ ಮಹತ್ವದ ಸೂಚನೆ; ಸೆ.30ರೊಳಗೆ e-KYC ಕಡ್ಡಾಯ, ಇಲ್ಲದಿದ್ದರೆ ಸಿಗಲ್ಲ ಅನ್ನಭಾಗ್ಯ ಹಣ!

---Advertisement---

ಬೆಂಗಳೂರು: ರಾಜ್ಯದ BPL, APL ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಸೂಚನೆ ನೀಡಿದೆ. ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಪ್ರತಿಯೊಬ್ಬ ಸದಸ್ಯರೂ ತಮ್ಮ ಆಧಾರ್ e-KYC ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಇಲಾಖೆ ತಿಳಿಸಿದೆ.

ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರ ಆಧಾರ್ ಸಂಖ್ಯೆಯೊಂದಿಗೆ e-KYC ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. 2026ರ ಸೆಪ್ಟೆಂಬರ್ 30 e-KYCಗೆ ಕೊನೆಯ ದಿನಾಂಕ ಎಂದು ತಿಳಿಸಲಾಗಿದ್ದು, ಈ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಸಂಬಂಧಪಟ್ಟ ಸದಸ್ಯರ ಹೆಸರನ್ನು ರೇಷನ್ ಕಾರ್ಡ್‌ನಿಂದ ತೆಗೆದುಹಾಕುವ ಸಾಧ್ಯತೆ ಇದೆ.ಅಲ್ಲದೆ, e-KYC ಪೂರ್ಣಗೊಳಿಸದ ಸದಸ್ಯರಿಗೆ ಸಿಗುವ ಪಡಿತರ ಸೌಲಭ್ಯ ಹಾಗೂ ಅನ್ನಭಾಗ್ಯ ಯೋಜನೆಯಡಿ ದೊರೆಯುವ ನಗದು ವರ್ಗಾವಣೆ ಹಣ ಸ್ಥಗಿತಗೊಳ್ಳುವ ಸಾಧ್ಯತೆಯೂ ಇದೆ ಎಂದು ಇಲಾಖೆ ಎಚ್ಚರಿಸಿದೆ.

ಆಫ್‌ಲೈನ್ ವಿಧಾನ:
ರೇಷನ್ ಕಾರ್ಡ್‌ದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ e-KYC ಮಾಡಿಸಬಹುದು. ಕುಟುಂಬದ ಸದಸ್ಯರು ತಮ್ಮ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ವಿವರಗಳನ್ನು ಕೊಂಡೊಯ್ಯಬೇಕು. ನ್ಯಾಯಬೆಲೆ ಅಂಗಡಿಯಲ್ಲಿರುವ ಅಧಿಕೃತ ವಿತರಕರು ಬಯೋಮೆಟ್ರಿಕ್ ದೃಢೀಕರಣದ ಮೂಲಕ e-KYC ಪ್ರಕ್ರಿಯೆ ಪೂರ್ಣಗೊಳಿಸಲು ಸಹಾಯ ಮಾಡುತ್ತಾರೆ.

ಮೊಬೈಲ್ ಮೂಲಕ ಆನ್‌ಲೈನ್ ವಿಧಾನ:
ಆಧಾರ್‌ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರುವವರು ಮೊಬೈಲ್ ಮೂಲಕವೂ e-KYC ಪ್ರಕ್ರಿಯೆ ಪೂರ್ಣಗೊಳಿಸಬಹುದು.
Google Play Storeನಿಂದ Mera Ration ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳಬೇಕು.
ಅಗತ್ಯವಿದ್ದಲ್ಲಿ Aadhaar FaceRD ಅಪ್ಲಿಕೇಶನ್‌ನ್ನೂ ಇನ್‌ಸ್ಟಾಲ್ ಮಾಡಿಕೊಳ್ಳಬೇಕು.
Mera Ration ಆ್ಯಪ್‌ನಲ್ಲಿ Aadhaar Seeding/e-KYC ಆಯ್ಕೆಯನ್ನು ಆರಿಸಬೇಕು.
ರೇಷನ್ ಕಾರ್ಡ್ ಹಾಗೂ ಆಧಾರ್‌ ಸಂಬಂಧಿತ ವಿವರಗಳನ್ನು ನಮೂದಿಸಬೇಕು.
OTP ಅಥವಾ Face Authentication ಮೂಲಕ ದೃಢೀಕರಣ ಪೂರ್ಣಗೊಳಿಸಬಹುದು.

ಗ್ರಾಹಕರು ತಮ್ಮ e-KYC ಸ್ಥಿತಿಯನ್ನು ಪರಿಶೀಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಯಾವುದೇ ತಾಂತ್ರಿಕ ಸಮಸ್ಯೆ ಅಥವಾ ದೂರುಗಳಿದ್ದಲ್ಲಿ 1967 ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now