Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ನಿವೇಶನ ಹೊಂದಿರುವವರಿಗೆ ಮಹತ್ವದ ಸೂಚನೆ : ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ

---Advertisement---

ಚಿತ್ರದುರ್ಗ. ಅ.04: ಚಿತ್ರದುರ್ಗ ನಗರಸಭೆಯ ವ್ಯಾಪ್ತಿಯಲ್ಲಿ ಇರುವ ಖಾಲಿ ನಿವೇಶನಗಳಿಗೆ ಫೆನ್ಸಿಂಗ್ ನಿರ್ಮಿಸಿಕೊಂಡು, ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತರು ಸೂಚನೆ ನೀಡಿದ್ದಾರೆ.

ನಗರ ವ್ಯಾಪ್ತಿಯಲ್ಲಿನ ಖಾಲಿ ನಿವೇಶನಗಳಲ್ಲಿ ಪಾರ್ಥೇನಿಯಂ, ಜಾಲಿ ಗಿಡ ಬೆಳೆದಿದ್ದು ಹಾಗೂ ಅಕ್ಕ-ಪಕ್ಕದ ಮನೆಗಳಿಂದ ಉತ್ವತ್ತಿಯಾಗುವ ತ್ಯಾಜ್ಯ(ಕಸ)ವನ್ನು ಖಾಲಿ ಇರುವ ನಿವೇಶನದಲ್ಲಿ ಸುರಿಯುತ್ತಿದ್ದು, ಅಲ್ಲಿ ಕಸ ಸಂಗ್ರಹವಾಗುತ್ತಿರುವುದು ಕಂಡುಬಂದಿದೆ, ಅಲ್ಲದೆ ಖಾಲಿ ಜಾಗಗಳು ಬಿಡಾಡಿ ದನಗಳು, ಹಂದಿಗಳು, ನಾಯಿಗಳು ಇತರೆ ವಿಷಜಂತುಗಳ ವಾಸಸ್ಥಾನವಾಗುತ್ತಿರುವುದು ಕಂಡುಬರುತ್ತಿದೆ.
ಖಾಲಿ ನಿವೇಶನಗಳಲ್ಲಿ ಮಳೆನೀರು ನಿಂತು ಸೊಳ್ಳೆಗಳು ಉತ್ವತ್ತಿಯಾಗಿ ಮಲೇರಿಯಾ, ಡೆಂಗ್ಯೂ, ಚಿಕನ್‍ಗುನ್ಯ ಸೇರಿದಂತೆ ಇನ್ನಿತರೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ, ಅಲ್ಲದೆ ಇದು ನಗರದ ಸೌಂದರ್ಯಕ್ಕೂ ಸಹ ಧಕ್ಕೆ ಉಂಟಾಗುತ್ತಿದೆ.

ಹೀಗಾಗಿ ಸಾರ್ವಜನಿಕರು ತಮ್ಮ ಖಾಲಿ ನಿವೇಶನಗಳಲ್ಲಿ ಇರುವಂತಹ ತ್ಯಾಜ್ಯವನ್ನು, ಗಿಡ ಗಂಟೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಬೇಕು. ಖಾಲಿ ನಿವೇಶನಕ್ಕೆ ಕಾಂಪೌಂಡ್, ಫೆನ್ಷಿಂಗ್ ನಿರ್ಮಿಸಿಕೊಳ್ಳಬೇಕು ತಪ್ಪಿದ್ದಲ್ಲಿ ಅಂತಹವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ 2020ರ ಅನ್ವಯ  ಕಾನೂನು ಕ್ರಮ ಜರುಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಆರೋಗ್ಯ ಶಾಖೆ ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತೆ ರೇಣುಕಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...