Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿಗೆ ಅಸಾಧ್ಯವಾದ ಭೇಟಿ ಹರಿಪ್ರಸಾದ್ ಗೆ ಸುಲಭವಾಗಿದ್ದೇಗೆ : ರಾಹುಲ್ ಗಾಂಧಿಗೆ ವರದಿ ಒಪ್ಪಿಸಿದರಾ..?

---Advertisement---

ಬೆಂಗಳೂರು: ರಾಜ್ಯ ರಾಜಕಾರಣ ದೆಹಲಿಯನ್ನು ತಲುಪಿದೆ. ಯಾಕಂದ್ರೆ ಅಷ್ಟು ದೊಡ್ಡ ಬೆಳವಣಿಗೆ ನಡೆಯುತ್ತಿದೆ. ಆದರೆ ಈ ಬೆಳವಣಿಗೆಯ ನಡುವೆ ಇತ್ತೀಚೆಗಷ್ಟೇ ಡಿಕೆ ಶಿವಕುಮಾರ್ ಅವರು, ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡುವುದಕ್ಕೆ ಹೋದಾಗ ಇಬ್ಬರ ಭೇಟಿ ಸಾಧ್ಯವಾಗಿರಲಿಲ್ಲ. ಆದರೆ ಎಂಎಲ್ಸಿ ಬಿಕೆ ಹರಿಪ್ರಸಾದ್ ಅವರಿಗೆ ಈ ಭೇಟಿ ಸಾಧ್ಯವಾಗಿದೆ. ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ, ವರದಿ ಒಪ್ಪಿಸಿ ಬಂದಿದ್ದಾರೆ.

ರಾಜ್ಯದಲ್ಲಿ ಖುರ್ಚಿ ಕದನ ಹೇಗೆಲ್ಲಾ ನಡೀತಾ ಇದೆ ಎಂಬುದು ರಾಜ್ಯದ ಜನತೆಯ ಅರಿವಿಗೂ ಬಂದಿದೆ. ಹೀಗಿರುವಾಗ ಮಂಗಳೂರು ಪ್ರವಾಸದಲ್ಲಿದ್ದ ಬಿಕೆ ಹರಿಪ್ರಸಾದ್ ದಿಢೀರನೇ ದೆಹಲಿಗೆ ತೆರಳಿದಾಗ ಅವರ ನಡೆ ಆಶ್ಚರ್ಯ ಉಂಟು ಮಾಡದೆ ಇರುತ್ತದೆಯೇ. ಸಹಜವಾಗಿಯೇ ರಾಜ್ಯ ರಾಜಕಾರಣದ ಪಡಸಾಲೆಯಲ್ಲಿ ಚರ್ಚಿತ ವಿಚಾರವಾಗಿದೆ. ಜೊತೆಗೆ ಪ್ರಸ್ತುತ ವಿಚಾರದ ಬಗ್ಗೆ ಬಿಕೆ ಹರಿಪ್ರಸಾದ್ ಅವರ ಬಳಿ ಮಾಹಿತಿಯನ್ನು ಹೈಕಮಾಂಡ್ ನಾಯಕರು ಪಡೆದಿದ್ದಾರೆ ಎನ್ನುತ್ತಿವೆ ಮೂಲಗಳು.

ಸದ್ಯಕ್ಕೆ ಡಿಕೆಶಿ ಅವರ ಬಣ ದೆಹಲಿಯಲ್ಲಿಯೇ ಬೀಡು ಬಿಟ್ಟಿದೆ. ಆದ ಕಾರಣ ಈ ಸಮಸ್ಯೆ ದೊಡ್ಡದಾದರೆ ಪಕ್ಷಕ್ಕೆ ಡ್ಯಾಮೇಜ್ ಆಗುವ ಸಾಧ್ಯತೆ ಇದೆ. ಹೀಗಾಗಿ ಹೈಕಮಾಂಡ್ ಮಧ್ಯಪ್ರವೇಶಿಸಿ ಮೊದಲು ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಯ ನಡುವೆ ನಾಳೆ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾಗುತ್ತಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದ ಖರ್ಗೆ ಅವರನ್ನು ಡಿಕೆಶಿ ಪರ ಬೆಂವಲಿಗರು ಭೇಟಿಯಾಗಿದ್ದಾರೆ. ಸಿದ್ದರಾಮಯ್ಯ ಅವರು ಭೇಟಿಯಾಗಿದ್ದಾರೆ. ಈ ಎಲ್ಲದರ ವರದಿ ಒಪ್ಪಿಸಿ, ಒಂದು ತೀರ್ಮಾನಕ್ಕೆ ಬರುವ ಸಾಧ್ಯತೆ ಇರುತ್ತದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now