Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹುಬ್ಬಳ್ಳಿ‌- ಧಾರವಾಡದ ಜೊತೆಗೆ ಉತ್ತರ ಕರ್ನಾಟಕ ಭಾಗದ ಜವಬ್ದಾರಿಯೂ ಶೆಟ್ಟರ್ ಹೆಗಲಿಗೆ : ರಾಹುಲ್ ಗಾಂಧಿ ನಡುವೆ ಚರ್ಚೆ ಆಗಿದ್ದೇನು..?

Facebook
Twitter
Telegram
WhatsApp

 

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ನಿಂದಾನೇ ಹುಬ್ಬಳ್ಳಿ – ಧಾರವಾಡ ಕೇಂದ್ರದಿಂದ ಸ್ಪರ್ಧೆ ನಡೆಸುತ್ತಿದ್ದಾರೆ. ಬಸವ ಜಯಂತಿ ಹಿನ್ನೆಲೆ ಇಂದು ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಿದ್ದಾರೆ. ಈ ವೇಳೆ ಜಗದೀಶ್ ಶೆಟ್ಟರ್ ಮತ್ತು ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಉತ್ತರ ಕರ್ನಾಟಕದ ಭಾಗದಲ್ಲೂ ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವ ಭರವಸೆ ನೀಡಿದ್ದಾರೆ.

ರಾಹುಲ್ ಗಾಂಧಿಗೆ ಆಶ್ವಾಸನೆ ನೀಡಿರುವ ಜಗದೀಶ್ ಶೆಟ್ಟರ್, ಈ ಬಾರಿ ಬಿಜೆಪಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ. ಹೀಗಾಗಿ ಲಿಂಗಾಯತ ಮತಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಗೆ ಸಿಗಲಿವೆ. ಚುನಾವಣೆ ಎದುರಿಸಲು ನಾಗಪುರದಿಂದ ವಿಸ್ತಾರಕರು, ಪ್ರಚಾರಕರನ್ನು ಕರೆಸಿದ್ದಾರಂತೆ. ಹೊರಗಿನಿಂದ ಯಾರು ಯಾರು ಬರುತ್ತಾರೋ ಬರಲಿ. ಬಂದವರು ಅರ್ಥ ಮಾಡಿಕೊಳ್ಳುವಷ್ಟರಲ್ಲಿ ಚುನಾವಣೆಯೇ ಮುಗಿದು ಹೋಗಿರುತ್ತದೆ. ಹೊರಗಿನಿಂದ ಬಂದವರು ಏನು ಮಾಡಲು ಆಗುವುದಿಲ್ಲ ಎಂದಿದ್ದಾರೆ.

ಇನ್ನು ರಾಹುಲ್ ಗಾಂಧಿಯವರು ಹುಬ್ಬಳ್ಳಿ ಜೊತೆಗೆ ಉತ್ತರ ಕರ್ನಾಟಕದ ಬೇರೆ ಬೇರೆ ಕ್ಷೇತ್ರಗಳ ಗೆಲುವಿಗೆ ಸಹಕಾರ ಕೇಳಿದ್ದಾರೆ. ಹೀಗಾಗಿ ಶೆಟ್ಟರ್ ಕೂಡ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ಗೆ ತಾನೂ ಸೇರಿದ್ದು ಯಾಕೆ ಎಂಬುದನ್ನು ರಾಹುಲ್ ಗಾಂಧಿ ಬಳಿ ತಿಳಿಸಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!