in

ಹುಬ್ಬಳ್ಳಿ‌- ಧಾರವಾಡದ ಜೊತೆಗೆ ಉತ್ತರ ಕರ್ನಾಟಕ ಭಾಗದ ಜವಬ್ದಾರಿಯೂ ಶೆಟ್ಟರ್ ಹೆಗಲಿಗೆ : ರಾಹುಲ್ ಗಾಂಧಿ ನಡುವೆ ಚರ್ಚೆ ಆಗಿದ್ದೇನು..?

suddione whatsapp group join

 

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ನಿಂದಾನೇ ಹುಬ್ಬಳ್ಳಿ – ಧಾರವಾಡ ಕೇಂದ್ರದಿಂದ ಸ್ಪರ್ಧೆ ನಡೆಸುತ್ತಿದ್ದಾರೆ. ಬಸವ ಜಯಂತಿ ಹಿನ್ನೆಲೆ ಇಂದು ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಿದ್ದಾರೆ. ಈ ವೇಳೆ ಜಗದೀಶ್ ಶೆಟ್ಟರ್ ಮತ್ತು ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಉತ್ತರ ಕರ್ನಾಟಕದ ಭಾಗದಲ್ಲೂ ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವ ಭರವಸೆ ನೀಡಿದ್ದಾರೆ.

ರಾಹುಲ್ ಗಾಂಧಿಗೆ ಆಶ್ವಾಸನೆ ನೀಡಿರುವ ಜಗದೀಶ್ ಶೆಟ್ಟರ್, ಈ ಬಾರಿ ಬಿಜೆಪಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ. ಹೀಗಾಗಿ ಲಿಂಗಾಯತ ಮತಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಗೆ ಸಿಗಲಿವೆ. ಚುನಾವಣೆ ಎದುರಿಸಲು ನಾಗಪುರದಿಂದ ವಿಸ್ತಾರಕರು, ಪ್ರಚಾರಕರನ್ನು ಕರೆಸಿದ್ದಾರಂತೆ. ಹೊರಗಿನಿಂದ ಯಾರು ಯಾರು ಬರುತ್ತಾರೋ ಬರಲಿ. ಬಂದವರು ಅರ್ಥ ಮಾಡಿಕೊಳ್ಳುವಷ್ಟರಲ್ಲಿ ಚುನಾವಣೆಯೇ ಮುಗಿದು ಹೋಗಿರುತ್ತದೆ. ಹೊರಗಿನಿಂದ ಬಂದವರು ಏನು ಮಾಡಲು ಆಗುವುದಿಲ್ಲ ಎಂದಿದ್ದಾರೆ.

ಇನ್ನು ರಾಹುಲ್ ಗಾಂಧಿಯವರು ಹುಬ್ಬಳ್ಳಿ ಜೊತೆಗೆ ಉತ್ತರ ಕರ್ನಾಟಕದ ಬೇರೆ ಬೇರೆ ಕ್ಷೇತ್ರಗಳ ಗೆಲುವಿಗೆ ಸಹಕಾರ ಕೇಳಿದ್ದಾರೆ. ಹೀಗಾಗಿ ಶೆಟ್ಟರ್ ಕೂಡ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ಗೆ ತಾನೂ ಸೇರಿದ್ದು ಯಾಕೆ ಎಂಬುದನ್ನು ರಾಹುಲ್ ಗಾಂಧಿ ಬಳಿ ತಿಳಿಸಿದ್ದಾರೆ ಎನ್ನಲಾಗಿದೆ.

What do you think?

-1 Points
Upvote Downvote

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಚಿತ್ರದುರ್ಗ :  ಡಿಸಿಸಿ ಕಚೇರಿಯಲ್ಲಿ ಬಸವಜಯಂತಿ ಆಚರಣೆ

ರಾಜ್ಯದಲ್ಲಿ ಇನ್ನು ಮೂರು ದಿನ ಬಾರಿ ಮಳೆ : ಎಲ್ಲೆಲ್ಲಿ ಎಂಬ ಮಾಹಿತಿ ಇಲ್ಲಿದೆ