Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಷ್ಮೆ ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,(ಜು.17) : ರೇಷ್ಮೆಗೂಡಿನ ದರ ತೀವ್ರ ಕುಸಿತಗೊಂಡಿರುವುದರಿಂದ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಕೆ.ಜಿ. 1ಕ್ಕೆ ರೂ.800/- ಕಡಿಮೆ ಇಲ್ಲದಂತೆ ನಿಗದಿ ಮಾಡಿ ಖರೀದಿ ಮಾಡಬೇಕು.  ಚಾಕಿ ಹುಳುವಿನ ದರ ಏರಿಕೆಯಾಗಿದ್ದು, ಚಾಕಿ ದರ ಕಡಿಮೆಗೊಳಿಸಿ ರೈತರಿಗೆ ಸಬ್ಸಿಡಿ ದರದ ರೂಪದಲ್ಲಿ ಚಾಕಿ ಹುಳುಗಳನ್ನು ವಿತರಿಸಬೇಕು, ಚಾಕಿ ಕೇಂದ್ರಗಳ ಗುಣಮಟ್ಟ ರಕ್ಷಣೆಗೆ ರೇಷ್ಮೆ ಇಲಾಖೆ ನಿಗವಹಿಸಬೇಕು ಸೇರಿದಂತೆ ಇತರೆ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಿದರು.

ಇತ್ತೀಚಿನ ವರ್ಷಗಳಲ್ಲಿ ನಮ್ಮ ಜಿಲ್ಲೆಯಲ್ಲಿ ವ್ಯಾಪಕವಾಗಿ ರೇಷ್ಮೆ ಕೃಷಿಯನ್ನು ಕೈಗೊಂಡಿದ್ದು, ಇದು ಅತ್ಯಂತ ಸೂಕ್ಷ್ಮ ಬೆಳೆಯಾಗಿದ್ದು, ಬಹಳ ಜೋಪಾನವಾಗಿ ವೈಜ್ಞಾನಿಕ ಕ್ರಮ ಅನುಸರಿಸಿ ಬೆಳೆ ಬೆಳೆಯಬೇಕಾಗಿರುತ್ತದೆ. ಇದುವರೆಗೂ ಬೈವೋಲ್ಟಿನ್ ತಳಿಯ ಬೆಳೆಗೆ ಕೆ.ಜಿ 1ಕ್ಕೆ ರೂ.800/- ಇದ್ದು, ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ಚೀನಾದಿಂದ ಹೆಚ್ಚಿನ ಪ್ರಮಾಣದಲ್ಲಿ ರೇಷ್ಮೆ ನೂಲು ಆಮದು ಮಾಡಿಕೊಂಡಿರುವುದರಿಂದ ಬೆಲೆ ಕುಸಿತ ಕಂಡಿರುತ್ತದೆ. ಸ್ಥಳೀಯ ಡೀಲರ್‍ಗಳು ರೇಷ್ಮೆ ಗೂಡಿಗೆ ಹೆಚ್ಚಿನ ಬೆಲೆಗೆ ಖರೀದಿ ಮಾಡುತ್ತಿಲ್ಲ. ಆದ್ದರಿಂದ ರೇಷ್ಮೆ ಬೆಳೆಗಾರರು ಕಾಂಗಲಾಗಿದ್ದು, ಉತ್ಪಾದನಾ ವೆಚ್ಚ ಅಧಿಕವಾದ ಕಾರಣ ರೇಷ್ಮೆ ಬೆಳೆಯನ್ನು ಕೈಬಿಡುವ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ಕರ್ನಾಟಕ ಸರ್ಕಾರ ಮಧ್ಯಪ್ರವೇಶಿಸಿ ರೇಷ್ಮೆ ಬೆಳೆಗಾರರ ಹಿತ ಕಾಪಾಡಬೇಕೆಂದು ಮನವಿ ಮಾಡಲಾಯಿತು.

ರೇಷ್ಮೆಗೂಡಿಗೆ ಕೆ.ಜಿ 1ಕ್ಕೆ ರೂ.50/- ಇದ್ದ ಪ್ರೋತ್ಸಾಹ ಧನ ನಿಲ್ಲಿಸಲಾಗಿದ್ದು, ಕೂಡಲೇ ಪುನಾರಂಭಿಸಿ ಕೆ.ಜಿ. ರೂ.200/- ಕಡಿಮೆ ಇಲ್ಲದಂತೆ ಪ್ರೋತ್ಸಾಹ ಧನ ಸರ್ಕಾರ ನಿಗದಿಗೊಳಿಸಬೇಕು ರೇಷ್ಮೆಗೂಡಿನ ಸಾಗಣಿಕೆ ವೆಚ್ಚವನ್ನು ಬೇರೆ ಜಿಲ್ಲೆಗಳಂತೆ ನಮ್ಮ ಜಿಲ್ಲೆಗೂ ವಿಸ್ತರಿಸಬೇಕು. 5. ರೇಷ್ಮೆ ಹುಳುವಿನ ಸಾಕಾಣಿಕೆ ಮನೆಯನ್ನು ನಿರ್ಮಿಸಲು ಈಗ ರೂ.3 ಲಕ್ಷ ಸಹಾಯಧನ ನೀಡುತ್ತಿದ್ದು, ಎಲ್ಲಾ ವಸ್ತುಗಳು ಮತ್ತು ನಿರ್ಮಾಣದ ವೆಚ್ಚ ಅಧಿಕವಾಗಿರುವುದರಿಂದ ರೂ.6 ಲಕ್ಷಕ್ಕೆ ಜಾಸ್ತಿ ಮಾಡಬೇಕು ಎಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್ ಬಾಬು, ತಾಲ್ಲೂಕು ಅಧ್ಯಕ್ಷ ಧನಂಜಯ, ಮುಖಂಡರಾದ ಭೂತಯ್ಯ, ಮಂಜಪ್ಪ ಶಿವನಕೆರೆ, ಸಿ.ನಾಗರಾಜು ಮುದ್ದಾಪುರ, ಎಸ್.ಟಿ.ಚಂದ್ರಪ್ಪ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಕ್ಲಹಳ್ಳಿ ರವಿಕುಮಾರ್, ಬೇಡರೆಡ್ಡಿ ಹಳ್ಳಿ ಬಸವರೆಡ್ಡಿ ಎಂ.ಬಿ.ತಿಪ್ಪೇಸ್ವಾಮಿ ಕಾಂತರಾಜು, ಮೂರ್ತಿ, ಮಹಂತಣ್ಣ, ಶಾಂತಣ್ಣ, ಮಲ್ಲಿಕಾರ್ಜನ ನಾಗರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!