Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ತುಂಬು ಗರ್ಭಿಣಿಗೆ ಯಶಸ್ವಿ ನೇತ್ರ ಶಸ್ತ್ರ ಚಿಕಿತ್ಸೆ

---Advertisement---

ಚಿತ್ರದುರ್ಗ.ಆಗಸ್ಟ್.03: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ನಾಯಕನಹಟ್ಟಿ ಗ್ರಾಮದ ತುಂಬು ಗರ್ಭಿಣಿಯೊಬ್ಬರಿಗೆ ಯಶಸ್ವಿಯಾಗಿ ನೇತ್ರ ಶಸ್ತçಚಿಕಿತ್ಸೆ ನಡೆಸಿದ್ದಾರೆ.  

ಎರಡು ಕಣ್ಣುಗಳು ಪೊರೆ ಬಂದು ದೃಷ್ಟಿ ದೋಷದಿಂದ ತೊಂದರೆ ಅನುಭವಿಸಿತ್ತಿದ್ದ ನಾಯಕನಹಟ್ಟಿ ಗ್ರಾಮದ ನಾಗವೇಣಿ ಕೋಂ ಮಹಂತೇಶ್ ಅಂಧ ಗರ್ಭಿಣಿಯನ್ನು ಮನೆ ಭೇಟಿಯಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಸುಕನ್ಯಾ, ಆರೋಗ್ಯ ನಿರೀಕ್ಷಣಾಧಿಕಾರಿ ಚೈತ್ರಾ ಅವರು ಪತ್ತೆಹಚ್ಚಿ ಜಿಲ್ಲಾ ಆಸ್ಪತ್ರೆ ನೇತ್ರ ತಜ್ಞರಾದ ಡಾ.ಬಿ.ಜಿ. ಪ್ರದೀಪ್ ಅವರ ನೇತೃತ್ವದಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆಸಿ ನಾಗವೇಣಿ ಅವರ ದೃಷ್ಟಿ ದೋಷ ನಿವಾರಣೆ ಮಾಡಿದ್ದಾರೆ.

ಚಿಕಿತ್ಸಾ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತçಚಿಕಿತ್ಸಕ ಡಾ. ರವೀಂದ್ರ , ಜಿಲ್ಲಾ ಆಸ್ಪತ್ರೆ ನೇತ್ರತಜ್ಞೆ ಡಾ.ಶಿಲ್ಪ, ನೇತ್ರಾಧಿಕಾರಿ ರಾಮು ಆಶಾ ಕಾರ್ಯಕರ್ತೆ ದಾಕ್ಷಾಯಣಿ, ಶುಶ್ರೂಷಕರಾದ ರವಿಕುಮಾರ್, ಲಕ್ಷ್ಮೀ ಇತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment