Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯಲ್ಲಿ ಈ ಬಾರಿ ಆರಕ್ಕೆ ಆರು ಕ್ಷೇತ್ರ ಗೆಲ್ಲುವ ಸಾಧ್ಯತೆ ಇದೆ : ಜಿ.ಹೆಚ್.ತಿಪ್ಪಾರೆಡ್ಡಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
                        ಸುರೇಶ್ ಪಟ್ಟಣ್,                         
ಮೊ : 87220 22817

ಚಿತ್ರದುರ್ಗ,(ಮೇ.10) : ಈ ಬಾರಿಯ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಆಧಿಕಾರವನ್ನು ಹಿಡಿಯಲಿದೆ ಎಂಬ ವಿಶ್ವಾಸವನ್ನು ಜಿ.ಹೆಚ್.ತಿಪ್ಪಾರೆಡ್ಡಿ ವ್ಯಕ್ತಪಡಿಸಿದ್ದಾರೆ.

ನಗರದ ಎಪಿಎಂಸಿ ಮಾರುಕಟ್ಟೆಯ ಮತದಾನ ಕೇಂದ್ರದಲ್ಲಿ ಮತದಾನವನ್ನು ನೇರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ಉತ್ತಮವಾದ ವಾತಾವರಣ ಇದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಗೆಲುವನ್ನು ಸಾಧಿಸುತ್ತೇನೆ ಎಂಬ ನಂಬಿಕೆ ಇದೆ.

ಉತ್ತಮವಾದ ಆಡಳಿತವನ್ನು ನೀಡಲಾಗುತ್ತದೆ. ಪೂರ್ಣ ಪ್ರಮಾಣದ ಬಹುಮತ ಬಂದಲ್ಲಿ ಪ್ರಧಾನಿಯವರ ರೀತಿಯಲ್ಲಿ ಉತ್ತಮವಾದ ಆಡಳಿತವನ್ನು ನೀಡಿ ಉತ್ತಮವಾದ ಕೆಲಸವನ್ನು ಮಾಡಲಿಕ್ಕೆ ಸಾಧ್ಯವಾಗುತ್ತದೆ. ಈ ಬಾರಿ ಕರ್ನಾಟಕದಲ್ಲಿ ಉತ್ತಮವಾದ ಫಲಿತಾಂಶವನ್ನು ನೀಡಲಿದ್ದಾರೆ ಎಂಬ ನೀರಿಕ್ಷೆ ಮತದಾರರಿಂದ ಇದೆ ಎಂದರು.

ಈ ಬಾರಿ ರಾಜ್ಯದಲ್ಲಿ 140 ಸೀಟುಗಳು ಬರುತ್ತವೆ ಎಂಬ ನಮ್ಮ ಸರ್ವೆ ತಿಳಿಸಿದೆ. ಇದರಿಂದ ಉತ್ತಮವಾದ ಸರ್ಕಾರವನ್ನು ರಚನೆ ಮಾಡುವುದರ ಮೂಲಕ ಜನತೆಗೆ ಉತ್ತಮವಾದ ಆಡಳಿತವನ್ನು ನೀಡಲಾಗುವುದು. ಜಿಲ್ಲೆಯ ಜೀವನಾಡಿಯಾದ ಅಪ್ಪರ್ ಭದ್ರಾ ಯೋಜನೆಯನ್ನು ಪೂರ್ಣಗೊಳಿಸಲಾಗುವುದು.

ಇದರೊಂದಿಗೆ ಚಿತ್ರದುರ್ಗದ ಮೆಡಿಕಲ್ ಕಾಲೇಜು ನಿರ್ಮಾಣವೂ ಸಹಾ ಶೀಘ್ರವಾಗಿ ಅಗಲಿದೆ. ಇದಕ್ಕೆಲ್ಲ ಬಹುಮತದ ಅಗತ್ಯ ಇದೆ. ಇದುವರೆವಿಗೂ ಚುನಾವಣೆಯ ಸಮಯದಲ್ಲಿ ಗಲಾಟೆಗಳು ನಡೆದಿರಲಿಲ್ಲ ಈಗ ಸಣ್ಣ-ಪುಟ್ಟ ಗಲಾಟೆಗಳು ನಡೆದಿವೆ ಈ ರೀತಿ ನಡೆಯಬಾರದು ಇದರ ಬಗ್ಗೆ ಪೋಲಿಸರು ಶೀಘ್ರವಾಗಿ ತನಿಖೆಯನ್ನು ನಡೆಸುವುದರ ಮೂಲಕ ನ್ಯಾಯವನ್ನು ನೀಡಬೇಕಿದೆ ಎಂದ ಅವರು ನಾನು ನೇರವಾಗಿ ಚುನಾವಣೆಯನ್ನು ಗೆಲ್ಲುತ್ತಾ ಬಂದಿನೆ, ಯಾವುದೇ ಮೋಸದಿಂದ ಗೆಲುವನ್ನು ಸಾಧಿಸಿಲ್ಲ ಮತದಾರರು ಸಹಾ ನನನ್ನ ಗೆಲ್ಲಿಸುತ್ತಾ ಬಂದಿದ್ದಾರೆ ಎಂದು ತಿಪ್ಪಾರೆಡ್ಡಿ ತಿಳಿಸಿದರು.

ಬಿಜೆಪಿಯಲ್ಲಿ ಮೂರು ಗುಂಪಾಗದಿದ್ದರೆ ಈ ವೇಳೆಗೆ ಕಾಂಗ್ರೆಸ್ ಮುಕ್ತ ಕರ್ನಾಟಕವಾಗಲಿದೆ ಮೋದಿಯವರು ಹೇಳಿದಂತೆ ಕಾಂಗ್ರೆಸ್ ಮುಕ್ತ ಭಾರತದಲ್ಲಿ ಕರ್ನಾಟಕವು ಸೇರುತ್ತಿತ್ತು ಎಂದು ತಿಳಿಸಿ, ಚಿತ್ರದುರ್ಗದಲ್ಲಿ ಈ ಭಾರಿ ಆರಕ್ಕೆ ಆರು ಸಹಾ ಗೆಲ್ಲುವ ಸಾಧ್ಯತೆ ಇದೆ. ಇಳೆದ ಬಾರಿ 5 ಸ್ಥಾನದಲ್ಲಿ ಮಾತ್ರ ಬಿಜೆಪಿ ಗೆಲುವನ್ನು ಸಾಧಿಸಿತ್ತು ಎಂದು ಹೇಳೀದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!