Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯಲ್ಲಿ 118 ಪೋಕ್ಸೋ ಕೇಸ್‍ಗಳಿವೆ : ಎಸ್‍ಪಿ ಪರಶುರಾಂ

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಅ.21) : ಜಿಲ್ಲೆಯಲ್ಲಿ
118 ಪೋಕ್ಸೋ ಕೇಸ್‍ಗಳಿವೆ. ಕಳೆದ ವರ್ಷ 82 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದವು, ಈ ಪೈಕಿ 5 ಸುಳ್ಳು ಪ್ರಕರಣಗಳಾಗಿದ್ದವು, 72 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ.  ಈ ವರ್ಷ 79 ಪೋಕ್ಸೋ ಕೇಸ್‍ಗಳು ದಾಖಲಾಗಿದ್ದು, ಈ ಪೈಕಿ 34 ತನಿಖೆಯಲ್ಲಿವೆ, 8 ಪ್ರಕರಣಗಳಲ್ಲಿ ಚಾರ್ಜ್ ಶೀಟ್ ಹಾಕಲು ಸಿದ್ಧಪಡಿಸಲಾಗಿದೆ.ಇವುಗಳಲ್ಲಿ ಅವಧಿ ಮೀರಿದ ಯಾವುದೇ ಪ್ರಕರಣಗಳು ಇಲ್ಲ
ಎಂದು ಎಸ್‍ಪಿ ಪರಶುರಾಂ ತಿಳಿಸಿದ್ದಾರೆ.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಜಯಶ್ರೀ ಅವರ ನೇತೃತ್ವದಲ್ಲಿ ನಡೆದ ಆರ್‍ಟಿಇ, ಪೋಕ್ಸೋ ಹಾಗೂ ಬಾಲನ್ಯಾಯ ಕಾಯ್ದೆ ಅನುಷ್ಠಾನ ಕುರಿತು ಮತ್ತು ಮಕ್ಕಳೂ ಎದುರಿಸುತ್ತಿರುವ ಇನ್ನಿತರೆ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆಯೋಗದ ಅಧ್ಯಕ್ಷರು ಪ್ರತಿಕ್ರಿಯಿಸಿ, ಕೋವಿಡ್ ಲಾಕ್‍ಡೌನ್ ಅವಧಿಯಲ್ಲಿ ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳು ಹೆಚ್ಚು ವರದಿಯಾಗಿವೆ. ಜಿಲ್ಲೆಯಲ್ಲಿ 2021 ರಲ್ಲಿ 136 ಹಾಗೂ ಈ ವರ್ಷ 71 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ.

ಪೋಕ್ಸೋ ಪ್ರಕರಣಗಳಲ್ಲಿ ಪೊಲೀಸರು 60 ದಿನಗಳ ಒಳಗಾಗಿ ಚಾರ್ಜ್ ಶೀಟ್ ಸಲ್ಲಿಸಬೇಕು.  ಬಾಲ್ಯ ವಿವಾಹ ಮಾಡಲು ಪ್ರಯತ್ನಿಸುವವರ ವಿರುದ್ಧ ಎಫ್‍ಐಆರ್ ದಾಖಲಿಸಬೇಕು ಎಂದು ಸೂಚನೆ ನೀಡಿದರು.

ಚಿತ್ರದುರ್ಗ ಮಠದ ಸ್ವಾಮೀಜಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಸಹಕಾರದಿಂದ ಉತ್ತಮವಾಗಿ ತನಿಖಾ ಕಾರ್ಯ ಕೈಗೊಳ್ಳಲು ಸಾಧ್ಯವಾಗಿದೆ ಎಂದು ಎಸ್‍ಪಿ ಅವರು ಹೇಳಿದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಡಾ. ಆರ್. ಪ್ರಭಾಕರ್ ಅವರು ಮಾತನಾಡಿ, ಮಠದ ಆವರಣದಲ್ಲಿನ ಹಾಸ್ಟೆಲ್‍ನಲ್ಲಿನ ಒಟ್ಟು 103 ಮಕ್ಕಳ ಪೈಕಿ 44 ಮಕ್ಕಳು ಚಿತ್ರದುರ್ಗ ಜಿಲ್ಲೆಯವರಾಗಿದ್ದು, 44 ಮಕ್ಕಳಿಗೂ ಮೂರು ಬಾರಿ ಆಪ್ತ ಸಮಾಲೋಚನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.  ಅಲ್ಲದೆ ಉಳಿದ ಜಿಲ್ಲೆಗಳಿಗೆ ಸಂಬಂಧಿಸಿದ ಮಕ್ಕಳಿಗೆ ಆಯಾ ಜಿಲ್ಲೆಯಲ್ಲಿಯೇ ಮಕ್ಕಳ ಕಲ್ಯಾಣ ಸಮಿತಿಯಿಂದ ಮೂರು ಬಾರಿ ಆಪ್ತ ಸಮಾಲೋಚನೆ ನಡೆಸಲು ನಿರ್ದೇಶನವಿದೆ ಎಂದರು.

ಎಸ್‍ಪಿ ಪರಶುರಾಮ್ ಅವರು ಮಾತನಾಡಿ, ಹಾಸ್ಟೆಲ್‍ನಲ್ಲಿದ್ದು, ಪ್ರಸ್ತುತ ಬೇರೆಡೆ ಹೋಗಿರುವ ಮಕ್ಕಳ ಪೈಕಿ, ಕಳೆದ 5 ವರ್ಷಗಳ ಅವಧಿಯಲ್ಲಿ ಹಾಸ್ಟೆಲ್‍ನಲ್ಲಿದ್ದು, ಬೇರೆಡೆ ಹೋಗಿರುವ ಮಕ್ಕಳ ವಿವರವನ್ನು ಒದಗಿಸಿದಲ್ಲಿ, ದೂರುಗಳ ಬಗ್ಗೆ ತನಿಖೆಗೆ ಅನುಕೂಲವಾಗಲಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಆಯೋಗದ ಅಧ್ಯಕ್ಷರು, ಮಕ್ಕಳ ಕಲ್ಯಾಣ ಸಮಿತಿಯ ನಿರ್ದೇಶನ ಪಡೆದು, ಬಳಿಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮಠದ ಹಾಸ್ಟೆಲ್‍ನಲ್ಲಿದ್ದ ಮಕ್ಕಳ ವಿವರ ಸಂಗ್ರಹಿಸಿ ಎಸ್‍ಪಿ ಅವರಿಗೆ ನೀಡಲು ಕ್ರಮ ವಹಿಸಬೇಕು.  ರಕ್ಷಣೆಯಲ್ಲಿರುವ ಮಕ್ಕಳ ಶಿಕ್ಷಣ ಅಬಾಧಿತವಾಗಿ ಮುಂದುವರೆಸಲು ಅನುಕೂಲವಾಗುವಂತೆ ಮಕ್ಕಳು ಕೋರುವ ಕಡೆ ಸರ್ಕಾರಿ ಹಾಸ್ಟೆಲ್‍ನಲ್ಲಿ ಪ್ರವೇಶಕ್ಕೆ ಅವಕಾಶ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಉಪಕಾರ್ಯದರ್ಶಿ ಅವರು ಮಕ್ಕಳ ವಿದ್ಯಾಭ್ಯಾಸಕ್ಕೆ ಸೂಕ್ತ ಹಾಸ್ಟಲ್ ವ್ಯವಸ್ಥೆ ಮಾಡಿ ಬಳಿಕ ಘಟನೋತ್ತರ ಅನುಮತಿ ಪಡೆಯಲಾಗುವುದು ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

error: Content is protected !!