Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್‌ಗೆ ಶ್ರದ್ಧಾಂಜಲಿ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್.25 : ಕ್ಯಾಪ್ಟನ್ ಪ್ರಾಂಜಲ್ ಅವರು ಸೇನೆ ಸೇರುವ  ಮೂಲಕ ದೇಶ ಸೇವೆ ಮಾಡಬೇಕು ಎಂಬ ಹೆಬ್ಬಯಕೆಯನ್ನು ಹೊಂದಿದ್ದರು ಎಂದು ಸ.ರಾ.ಲೇಪಾಕ್ಷ ಹೇಳಿದರು.

ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ (ಸ್ವಾಯತ್ತ) ಎನ್.ಸಿ.ಸಿ.ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್ ವಿಧ್ಯಾರ್ಥಿಗಳು ಆಯೋಜಿಸಿದ್ದ  ಕ್ಯಾಪ್ಟನ್ ಪ್ರಾಂಜಲ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ವಾರ ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ವೀರ ಮರಣ ಹೊಂದಿದ ಐದು ಯೋಧರಲ್ಲಿ ಕರ್ನಾಟಕದ  ಹೆಮ್ಮೆಯ ಪುತ್ರ ಕ್ಯಾಪ್ಟನ್ ಪ್ರಾಂಜಲ್ ಅವರು 29 ನೇ ವಯಸ್ಸಿನಲ್ಲಿ ವೀರ ಮರಣಹೊಂದಿದ್ದು, ತನ್ನ ವಯಸ್ಸಾದ ತಂದೆ, ತಾಯಿ, ಪತ್ನಿಯನ್ನು ಅಗಲಿದ್ದಾರೆ.

ದೆಹಲಿಯ ಪ್ರತಿಷ್ಠಿತ ಶಾಲೆಯಲ್ಲಿ ವಿಧ್ಯಾಭ್ಯಾಸ ಕಲಿತ ಇವರು ಸೇನೆಯಲ್ಲಿ ಅಧಿಕಾರಿಯಾಗುವ ಮೂಲಕ ಇನ್ನೂ ಹೆಚ್ಚು ಕಾಲ ವಿವಿಧ ಹುದ್ದೆಗಳನ್ನು ಅನುಭವಿಸುವ ಮೂಲಕ ಲಕ್ಷಾಂತರ ಯುವಕರಿಗೆ ಮಾದರಿಯಾಗುಬೇಕಿತ್ತು. ದುರಾದೃಷ್ಟವಶಾತ್ ಇವರು ಚಿಕ್ಕ ವಯಸ್ಸಿನಲ್ಲಿ ವೀರ ಮರಣ ಹೊಂದಿರುವುದು ದುಃಖದ ಸಂಗತಿಯಾಗಿದೆ, ಎನ್.ಸಿ.ಸಿ ಕೆಡೆಟ್‍ಗಳು ಹೆಚ್ಚು ಹೆಚ್ಚು ಸೇನೆ ಸೇರುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಪ್ರಭಾರೆ ಪ್ರಾಂಶುಪಾಲರಾದ  ಪ್ರೊ. ಎಲ್. ನಾಗರಾಜಪ್ಪ ವಿಧ್ಯಾರ್ಥಿಗಳನ್ನು ಕುರಿತು ಮಾತನಾಡಿ, ದೇಶ ಸೇವೆಯಲ್ಲಿ ಹೆಚ್ಚು ಯುವಕರು ತೊಡಗಿಕೊಳ್ಳಬೇಕು ಎಂದರು.

ಪ್ರತಾಪ್ ಜೋಗಿ ಮಾತನಾಡಿ ಕ್ಯಾಪ್ಟನ್ ಪ್ರಾ‌ಂಜಲ್ ಅಂತಹ ಸಾವಿರಾರು ಯುವಕರು ಚಿಕ್ಕ ವಯಸ್ಸಿನಲ್ಲಿಯೇ ಸೇನೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವುದು ದೇಶ ಹೆಮ್ಮೆ ಪಡುವ ವಿಷಯ. ಆದರೆ ಇವರ ವೀರ ಮರಣ ನೋವು ತಂದಿದೆ. ಇವರ ಮರಣ ಲಕ್ಷಾಂತರ ಯೋಧರ ರಕ್ತ ಕುದಿಯುವಂತೆ ಮಾಡಿದೆ ಎಂದರು.

ಈ ಸಂದರ್ಭದಲ್ಲಿ ಡಾ.ತಾರಿಣಿ ಶುಭದಾಯಿನಿ, ಡಾ.ಆರ್.ಗಂಗಾಧರ್, ಡಾ.ನಾಗವರ್ಮ, ಡಾ.ಪಿ.ಎಸ್.ಗಂಗಾಧರ್, ಪ್ರೊ.ಕೆ.ಎಲ್.ಶ್ರೀನಿವಾಸ್, ಪ್ರೊ.ಬಿ.ಕೆ.ಬಸವರಾಜ್, ಪ್ರೊ.ಜಿ.ಡಿ.ಸುರೇಶ್, ಪ್ರೊ.ನಯಾಜ್, ವೆಂಕಟೇಶ್, ಅಧಿಕ್ಷಕರು, ಹಾಗೂ ಸಿಬ್ಬಂದಿ ಮತ್ತು ವಿಧ್ಯಾರ್ಥಿಗಳು ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment