ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 14 : ನಗರದ ಪ್ರತಿಷ್ಠಿತ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಜ.15 ರಿಂದ 18 ರವರೆಗೆ ನಾಲ್ಕು ದಿನಗಳ ಕಾಲ ಡೆಸ್ಟಿನಿ-2025 ಸಾಂಸ್ಕೃತಿಕ ಉತ್ಸವ ನಡೆಯಲಿದೆ.
ಜ.15 ರಂದು ಸಂಜೆ ಆರು ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಾಂಸ್ಕೃತಿಕ ಉತ್ಸವ ಉದ್ಗಾಟಿಸಲಿದ್ದು, ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್, ಪ್ರಖ್ಯಾತ ನಗೆ ವಾಗ್ಮಿ ಹಾಗೂ ನಟ ಪ್ರೊ.ಕೃಷ್ಣೆಗೌಡ, ಹಾಸ್ಯ ಚಟಾಕಿಯಿಂದಲೆ ಮನೆ ಮಾತಾಗಿರುವ ಸುಧಾ ಬರಗೂರು ಇವರುಗಳು ಪಾಲ್ಗೊಳ್ಳಲಿದ್ದಾರೆ.
ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಕಲಾ ಡಾ.ಎಂ.ಚಂದ್ರಪ್ಪ, ಅಧ್ಯಕ್ಷೆ ಎಂ.ಸಿ.ಯಶಸ್ವಿನಿ ಕಿರಣ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಇವರುಗಳು ಗೌರವ ಅತಿಥಿಗಳಾಗಿ ಡೆಸ್ಟಿನಿ-2025 ಸಾಂಸ್ಕೃತಿಕ ಉತ್ಸವದಲ್ಲಿ ಭಾಗವಹಿಸಲಿದ್ದಾರೆ.
ಶಿಕ್ಷಣ ಸಂಸ್ಥೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಕಣ್ಮನ ಸೆಳೆಯುವ ರೀತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳೈಸಲಿವೆ. ನಂತರ ವಾದ್ಯ ಸಂಗೀತ ಗೋಷ್ಠಿ ನಡೆಯಲಿದೆ.
ಜ.16 ರಂದು ಪ್ರಖ್ಯಾತ ಗಾಯಕ ವಿಜಯಪ್ರಕಾಶ್, ಗಾಯಕಿ ಅನುರಾಧಭಟ್ ಮತ್ತು ತಂಡದವರಿಂದ ಸಂಗೀತ ರಸ ಸಂಜೆ ಉಣಬಡಿಸಲಾಗುವುದು.
ಜನವರಿ 17 ರಂದು ಖ್ಯಾತ ರ್ಯಾಪ್ ಗಾಯಕ ರಾಹುಲ್ ಡಿಟ್ಟೋ ಕೆ.ಜಿ.ಎಫ್.ಖ್ಯಾತಿಯ ಗಾಯಕ ವೆಂಕಿರವರಿಂದ ಗಾನಸುಧೆ.
ಜನವರಿ 18 ರಂದು ಪ್ರಖ್ಯಾತ ಡಿ.ಜೆ. ಬ್ಯಾಂಡ್ ಎಚ್.ಟು.ಓ. ತಂಡದಿಂದ ಡಿ.ಜೆ.ಕಾರ್ಯಕ್ರಮದೊಂದಿಗೆ ಸಾಂಸ್ಕೃತಿಕ ಉತ್ಸವ ಸಂಪನ್ನಗೊಳ್ಳಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.




















