Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾಷೆ, ನೆಲದ ವಿಚಾರದಲ್ಲಿ ತಮಿಳರನ್ನು ನೋಡಿ ಕಲಿಯಬೇಕು : ಮುಖ್ಯಮಂತ್ರಿ ಚಂದ್ರು

Facebook
Twitter
Telegram
WhatsApp

 

ಬೆಂಗಳೂರು: ಕಾವೇರಿ ಅನ್ನುವುದು ಸುಮ್ಮನೆ ಅಲ್ಲ. ಇಡೀ ರಾಜ್ಯಕ್ಕೆ ಕೃಷಿಗೆ ಹಾಗೂ ಕುಡಿಯುವುದಕ್ಕೆ ನೀರಿನ ಅಗತ್ಯ ತುಂಬಾನೇ ಇದೆ. ಆದರೆ ಕಾವೇರಿ ಹೋರಾಟ ಎಂದು ಬಂದಾಗ ನೀವೂ ಬನ್ನಿ ನೀವೂ ಬನ್ನಿ ಅಂತ ಕರೆಯಬೇಕು. ಆದರೆ ನೆಲ, ಜಲ, ಭಾಷೆ ಎಂದಾಗ ತಮಿಳರನ್ನು ನೋಡಿ ಕಲಿಯುವುದು ತುಂಬಾ ಇದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

‘ನಾನು‌ ಮೂಲತಃ ರೈತ. ಆಮೇಲೆ ಕಲಾವಿದ. ನಾನೀಗ ಒಂದು ಪಕ್ಷದ ಅಧ್ಯಕ್ಷನಾಗಿದ್ದರು‌ ಮೊದಲಿನಿಂದಲೂ ನಾಡು, ನುಡಿ ವಿಚಾರಕ್ಕೆ ಕಲಾವಿದರನ್ನು ಸೇರಿಸಿ ಹೋರಾಟ ಮಾಡಿದ್ದೇನೆ. ಪಕ್ಷ ಬೇಧ ಮರೆತು ಒಗ್ಗಟ್ಟಾಗಿ ಹೋರಾಟ‌ ಮಾಡುವುದನ್ನು ತಮಿಳರನ್ನು ನೋಡಿ ಕಲಿಯಬೇಕಿದೆ. ಸುಪ್ರೀಂ ಕೋರ್ಟ್ ಕಾವೇರಿ ತೀರ್ಪು ನೀಡುವಾಗ, ಹೋರಾಟ ಮಾಡಿದರೆ ಇಲ್ಲಿನ ಸಮಸ್ಯೆ ಅವರಿಗೆ ಅರಿವಾಗುತ್ತದೆ.

ಕಾವೇರಿ ನೀರಿಗಾಗಿ ಮಾತ್ರವಲ್ಲ ರಾಜ್ಯದ ಯಾವುದೇ ಭಾಗದಲ್ಲಿ ನಾಡು, ನುಡಿ, ಗಡಿ, ರೈತರಿಗೆ ಸಮಸ್ಯೆಯಾದಾಗ ಹೋರಾಟ ಮಾಡುತ್ತೇವೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ಬೆಂಗಳೂರು ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದೆ. ಮಾಧ್ಯಮಗಳು ಕೂಡ ಬಂದ್ ಯಶಸ್ವಿಯಾಗಲು ಕಾರಣ ಎಂದು ಧನ್ಯವಾದ ತಿಳಿಸಿದರು. ಯಾವುದೇ ಹಾನಿಯನ್ನು ಮಾಡದೇ ಶಾಂತಿಯುತವಾಗಿ ಬಂದ್ ಆಗಿದೆ. ಜನ ಸಂಪೂರ್ಣ ಸಹಕಾರ, ಬೆಂಬಲ ಕೊಟ್ಟರು ಎಂದು ಅವರು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

error: Content is protected !!