Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರ ಬಜೆಟ್ ನಲ್ಲಿ ಯಾವೆಲ್ಲ ವಸ್ತುಗಳ ಮೇಲೆ ಬೆಲೆ ಇಳಿಕೆ..?

---Advertisement---

 

2025ರ ಕೇಂದ್ರ ಬಜೆಟ್ ನಲ್ಲಿ ಹಲವು ವಸ್ತುಗಳ ಮೇಲೆ ಬೆಲೆ ಇಳಿಕೆಯಾಗಿದೆ. ಇದು ಮಧ್ಯಮವರ್ಗದವರಿಗೆ ಖುಷಿಯನ್ನು ತಂದು ಕೊಟ್ಟಿದೆ. ಪ್ರತಿ ಬಾರಿ ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ನಿರೀಕ್ಷಿಸಿದ ಬಜೆಟ್ ಮಂಡನೆಯಾಗುವುದಿಲ್ಲ, ಅದರಲ್ಲಿ ಮಧ್ಯಮವರ್ಗದವರಿಗೆ ಅಗತ್ಯವಾದದ್ದು ಇರಲ್ಲ ಅಂತಾನೇ ಆರೋಪವಿತ್ತು. ಇದೀಗ ಈ ಬಾರಿಯ ಬಜೆಟ್ ಮಧ್ಯಮ ವರ್ಗದವರಿಗೆ ಖುಷಿ ನೀಡಿದೆ. ಅಗತ್ಯ ವಸ್ತುಗಳ ಮೇಲೆ ಬೆಲೆ ಇಳಿಕೆಯಾಗಿದೆ.

ಅದರಲ್ಲೂ ಸ್ವದೇಶಿ ಬಟ್ಟೆಗಳು, ಎಲೆಕ್ಟ್ರಿಕ್ ಕಾರುಗಳು, ಚರ್ಮದ ಉತ್ಪನ್ನಗಳು, ಎಲ್ಇಡಿ ಟಿವಿ ಬೆಲೆ, ಕ್ಯಾನ್ಸರ್ ಔಷಧ, ಮೊಬೈಲ್ ಹಾಗೂ ಮೊಬೈಲ್ ಬಿಡಿ ಭಾಗಗಳ ಬೆಲೆ ಇಳಿಕೆಯಾಗಿದೆ. ಕರಕುಶಲ ವಸ್ತುಗಳು, ಚರ್ಮದ ಶೂ, ಬೆಲ್ಟ್, ಫ್ರೋಜನ್ ಫಿಶ್ ಸೇರಿದಂತೆ ಹಲವು ಉತ್ಪನ್ನಗಳ ಬೆಲೆ ಇಳಿಕೆಯನ್ನು ಮಾಡುವ ಮೂಲಕ ಮಧ್ಯಮ ವರ್ಗದವರಿಗೆ ಈ ಬಾರಿ ಬಂಪರ್ ಬಹುಮಾನವನ್ನೇ ನೀಡಿದೆ.

ಕೇಂದ್ರ ಬಜೆಟ್ ನಲ್ಲಿ ದುಬಾರಿಯಾದ ವಸ್ತುಗಳ ಬಗ್ಗೆಯೂ ತಿಳಿಸಲಾಗಿದೆ. ಈ ಬಾರಿಯ ಬಜೆಟ್ ನಲ್ಲಿ ದುಬಾರಿಯಾದ ವಸ್ತುಗಳು ಇವು, ಫ್ಲ್ಯಾಟ್ ಪ್ಯಾನೆಲ್ ಡಿಸ್ ಪ್ಲೇ, ಕೈಯಲ್ಲಿ ಹೆಣೆದ ಬಟ್ಟೆಗಳು, ತಂತ್ರಜ್ಞಾನ ಕ್ಷೇತ್ರದ ಸರಕುಗಳು, ಮೊಬೈಲ್ ರಿಚಾರ್ಜ್ ಮತ್ತು ಇಂಟರ್ ನೆಟ್ ಸೇವೆಗಳು, ವಿಮಾನ ಟಿಕೆಟ್ ದರ, ಹೈಟೆಕ್ ಎಲೆಕ್ಟ್ರಾನಿಕ್ಸ್, ಆಮದು ಕಾರುಗಳು, ತಂಬಾಕು ಮತ್ತು ಸಿಗರೇಟ್ ದುಬಾರಿಯಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment