Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಡೆಗಳಿಗೆಯಲ್ಲಿ ಪ್ರಜ್ವಲ್ ಜರ್ಮನಿಯಿಂದ ಬೆಂಗಳೂರಿಗೆ ಬರುವುದು ರದ್ದು..!

---Advertisement---

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸದ್ದಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ದಿಢೀರನೆ ಜರ್ಮನಿಗೆ ಹಾರಿದರು. ಇತ್ತ ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ರೇವಣ್ಣ ಲಾಕ್ ಆದರು, ಜೈಲು ಪಾಲಾದರು. ಆದರೂ ಪ್ರಜ್ವಲ್ ರೇವಣ್ಣರ ದರ್ಶನ ಮಾತ್ರ ಆಗುತ್ತಿಲ್ಲ. ರೇವಣ್ಣ ಅವರಿಗೆ ಸದ್ಯ ಜಾಮೀನು ಸಿಕ್ಕಿದ್ದು, ಜೈಲಿನಿಂದ ಬಿಡುಗಡೆಯಾಗಿದ್ದಾರೆ. ತಂದೆಯ ರಿಲೀಸ್ ಬಳಿಕವಾದರೂ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರಬಹುದು ಎಂಬ ನಿರೀಕ್ಷೆ ಇತ್ತು. ಅದು ಕೂಡ ಸುಳ್ಳಾಗಿದೆ.

 

ಪ್ರಜ್ವಲ್ ರೇವಣ್ಣ ಇಂದು ಬೆಂಗಳೂರಿಗೆ ಬರಬೇಕಿತ್ತು. ಟಿಕೆಟ್ ಕೂಡ ಬುಕ್ ಆಗಿತ್ತು. ಈ ಮಾಹಿತಿ ತಿಳಿದು ಎಸ್ಐಟಿ ಅಧಿಕಾರಿಗಳು ಸಹ ಏರ್ಪೋರ್ಟ್ ನಲ್ಲಿಯೇ ಕಾಯುತ್ತಿದ್ದರು. ಆದರೆ ಕೊನೆ ಕ್ಷಣದಲ್ಲಿ ಈ ಪ್ಲ್ಯಾನ್ ಕೂಡ ಕ್ಯಾನ್ಸಲ್ ಆಗಿದೆ. ಪ್ರಜ್ವಕ್ ರೇವಣ್ಣ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದೇ ಇಲ್ಲ‌. ವಿದೇಶದಲ್ಲಿದ್ದುಕೊಂಡೆ ಕಣ್ಣಾಮುಚ್ಚಾಲೆ ಆಟವಾಡುತ್ತಿರುವ ಪ್ರಜ್ವಲ್, ಎಸ್ಐಟಿ ಅಧಿಕಾರಿಗಳಿಗೇನೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದಾರೆ.

ಪ್ರಜ್ವಲ್ ರೇವಣ್ಣ ಈಗಾಗಲೇ ಒಂದು ಸಲ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿಕೊಂಡಿದ್ದರು. ಇದೀಗ ಮತ್ತೊಮ್ಮೆ ಅದೇ ರೀತಿ ಮಾಡಿದ್ದಾರೆ. ಜರ್ಮನಿಯಿಂದ ಬರುತ್ತಿದ್ದ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಹೆಸರಲ್ಲಿ ಟಿಕೆಟ್ ಬುಕ್ ಆಗಿತ್ತು. ಆದರೆ ಆ ಟಿಕೆಟ್ ಕೂಡ ರದ್ದಾಗಿದೆ. ವಿದೇಶದಲ್ಲಿಯೇ ವಕೀಲರ ಜೊತೆಗೆ ಪ್ರಜ್ವಲ್ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಇಲ್ಲಿನ ಪರಿಸ್ಥಿತಿಯನ್ನು ವಕೀಲರು ಪ್ರಜ್ವಲ್ ಗೆ ಅರ್ಥ ಮಾಡಿಸುತ್ತಿದ್ದು, ವಕೀಲರು ಹೇಳಿದ ಬಳಿಕವಷ್ಟೇ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಧ್ಯತೆ ಇದೆ. ಈಗ ಪ್ರಜ್ವಲ್ ಬೆಂಗಳೂರಿಗೆ ಬಂದರು, ಮೊದಲು ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಳ್ಳಲು ರೆಡಿಯಾಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment