Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸದನದಲ್ಲಿ ‘ಲೂಟಿಕೋರ’ ಪದದ ಗದ್ದಲ : ಏಕವಚನದಲ್ಲಿಯೇ ಬೈದಾಡಿದ ಬಿಜೆಪಿ-ಕಾಂಗ್ರೆಸ್ ನಾಯಕರು..!

---Advertisement---

 

ಬೆಂಗಳೂರು: ಇಂದು ಅಧಿವೇಶನದ ಎರಡನೇ ದಿನ, ಅಭಿವೃದ್ಧಿ, ಚರ್ಚೆ, ಮಾತುಕತೆಗಳು ಮುಂದುವರೆದಿವೆ. ಅದರಲ್ಲೂ ಆಡಳಿತ ಪಕ್ಷದ ನಾಯಕರು ಹಾಗೂ ವಿರೋಧ ಪಕ್ಷದ ನಾಯಕರ ನಡುವೆ ಲೂಟಿಕೋರ ಎಂಬ ಪದ ಜೋರು ಗದ್ದಲವನ್ನೇ ಉಂಟು ಮಾಡಿದೆ‌. ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿವಾಗ ಲೂಟಿಕೋರ ಎಂಬ ಪದವನ್ನು ಬಳಕೆ ಮಾಡಿದ್ದಾರೆ. ತಕ್ಷಣ ಅದಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ‌.

 

ಇತ್ತ ಕಾಂಗ್ರೆಸ್ ನಾಯಕರು ಒಗ್ಗೂಡಿದ್ದು, ಗೃಹ ಸಚಿವ ಪರಮೇಶ್ವರ್, ಸಚಿವ ಪ್ರಿಯಾಂಕ್ ಖರ್ಗೆ, ಸೇರಿದಂತೆ ಕಾಂಗ್ರೆಸ್ ನಾಯಕರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೇನೆ ಬೆಂಬಲ ನೀಡಿದ್ದಾರೆ. ಬಿಜೆಪಿ ನಾಯಕರಿಗೆ ಮಾತಿನಲ್ಲಿಯೇ ತಿರುಗೇಟು ನೀಡಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪಕ್ಷದ ನಾಯಕರು ಒಟ್ಟೊಟ್ಟಿಗೆ ಮಾತಾನಡುತ್ತಿದ್ದ ಕಾರಣ, ಯಾರು, ಯಾರಿಗೆ ಏನನ್ನು ಹೇಳಿದರು ಎಂಬುದೇ ಅರ್ಥವಾಗಲಿಲ್ಲ. ಆದರೂ ಜಗಳವಾಡಿದ್ದಂತೂ ಸ್ಪಷ್ಟವಾಗಿತ್ತು.

ಅದರಲ್ಲೂ ಡಿಕೆ ಶಿವಕುಮಾರ್ ಹಾಗೂ ಅಶ್ವತ್ಥ್ ನಾರಾಯಣ್ ಇಬ್ಬರು ಏಕವಚನದಲ್ಲಿಯೇ ಬೈದಾಡಿಕೊಂಡರು. ನೀನೇ ಲೂಟೊಕೋರ ಎಂದು ಡಿಕೆಶಿ ಹೇಳಿದರೆ, ಯಾವುದನ್ನು ಲೂಟಿ ಹೊಡೆದಿದ್ದೀನಿ. ಎಲ್ಲರದನ್ನು ಸರಿಯಾಗಿ ಹೇಳಿದರೆ ನಮಗೂ ಸಂತೋಷವೇ ಅಂತ ಅಶ್ವತ್ಥ್ ನಾರಾಯಣ್ ತಿರುಗೇಟು ನೀಡಿದರು. ಡಿಕೆಶಿ ಕೋಪದಲ್ಲಿ ಮಾತನಾಡುತ್ತಿದ್ದರೆ ಆ ಕಡೆಯಿಂದ ಬಿಜೆಪಿ ನಾಯಕರು ಇನ್ನಷ್ಟು ಕೋಪ ತರಿಸುವಂತೆ, ಟ್ರಿಗರ್ ಮಾಡುವ ರೀತಿ ನಗು ನಗುತ್ತಾ ಪ್ರಶ್ನೆಗಳನ್ನು ಕೇಳುತ್ತಿದ್ದರು‌. ಇವತ್ತಿನ ಸದನದಲ್ಲಿ ಆರಂಭದಲ್ಲಿಯೇ ಲೂಟಿಕೋರ ಪದ ಜೋರು ಸದ್ದು ಗದ್ದಲ ಮಾಡಿದೆ. ಕೆಲವೊಂದು ಸಮಸ್ಯೆಗಳ ಚರ್ಚೆಯೂ ನಡೆಯುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...