Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕಳೆದ 20 ವರ್ಷದಲ್ಲಿ ತಿರಪತಿಗೆ 1 ಬಾರಿ ಮಾತ್ರ ನಂದಿನಿ ತುಪ್ಪ ಪೂರೈಕೆಯಾಯ್ತಾ..? ಏನಿತು ಹೊಸ ಟ್ವಿಸ್ಟ್..?

---Advertisement---

 

ಕಳೆದ ಕೆಲವು ದಿನಗಳಿಂದ ತಿರಪತಿಗೆ ಪೂರೈಕೆಯಾಗುವ ನಂದಿನಿ ತುಪ್ಪದ ಬಗ್ಗೆಯೇ ಚರ್ಚೆಯಾಗುತ್ತಿದೆ. ಸದ್ಯ ಕೆಎಂಎಫ್ ನಂದಿನಿ ತುಪ್ಪವನ್ನು ಕಡಿಮೆ ದರದಲ್ಲಿ ನೀಡುವುದಿಲ್ಲ ಎಂದು ಹೇಳಿದೆ. ಹೀಗಾಗಿ ಇದು ಚರ್ಚೆಗೆ ಗ್ರಾಸವಾಗಿದೆ. ಆದ್ರೆ ಇದೀಗ ಹೊಸ ತಿರುವು ಸಿಕ್ಕಿದೆ.

ಕೆಎಂಎಫ್ ಕಳೆದ 20 ವರ್ಷಗಳಿಂದ ನಂದಿನಿ ತುಪ್ಪವನ್ನು ರಿಯಾಯಿತಿ ದರದಲ್ಲಿ ಪೂರೈಕೆ ಮಾಡಲಾಗುತ್ತಿದೆ ಎಂದೇ ಹೇಳಿತ್ತು‌. ಆದ್ರೆ ಈ ಮಾತು ಅಪ್ಪಟ ಸುಳ್ಳು ಎಂದು ಟಿಟಿಡಿ ದೇವಸ್ಥಾನದ ಕಾರ್ಯನಿರ್ವಾಹಕರಾದ ಎವಿ ಧರ್ಮಾರೆಡ್ಡಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಖಾಸಗಿ ಚಾನೆಲ್ ಒಂದಕ್ಕೆ ಮಾತನಾಡಿರುವ ಧರ್ಮಾರೆಡ್ಡಿ ಅವರು, ಕೆಎಂಎಫ್ ಕಳೆದ 20 ವರ್ಷಗಳಿಂದ ಟಿಟಿಡಿಗೆ ತುಪ್ಪವನ್ನು ನೀಡುತ್ತಿದ್ದೇವೆ ಎಂದು ತಿಳಿಸಿದೆ. ಇದೆಲ್ಲಾ ಸುಳ್ಳು ಆರೋಪ. ಕಳೆದ 20 ವರ್ಷಗಳಲ್ಲಿ ಒಂದು ಬಾರಿ ಮಾತ್ರ ನಂದಿನಿ ತುಪ್ಪವನ್ನು ಪೂರೈಕೆ ಮಾಡಿದೆ. ತಿಮ್ಮಪ್ಪನ ಸನ್ನಿಧಿಗೆ ರವಾನೆಯಾದ ಎಲ್ಲಾ ತುಪ್ಪದ ಮಾದರಿಯನ್ನು ಪರೀಕ್ಷೆ ಮಾಡಲಾಗುತ್ತದೆ. ಟೆಸ್ಟ್ ನಲ್ಲಿ ಪಾಸ್ ಆದರೆ ಮಾತ್ರ ಟ್ರಕ್ ನಲ್ಲಿ ತುಪ್ಪ ಹೊತ್ತು ಬಂದಿದ್ದಕ್ಕೆ ಒಳಗೆ ಪ್ರವೇಶ ನೀಡಲಾಗುತ್ತದೆ ಎಂದಿದ್ದಾರೆ.

ಇದರ ನಡುವೆಯೇ ಕೆಎಂಎಫ್ ಪತ್ರ ಬರೆದು, ನೀವು ಕೇಳಿರುವ ದರಕ್ಕೆ ತುಪ್ಪ ಸರಬರಾಜು ಮಾಡಲು ಸಾಧ್ಯವಿಲ್ಲ. ಕಳೆದ 20 ವರ್ಷಗಳಿಂದ ಕೆಎಂಎಫ್ ಟಿಟಿಡಿಗೆ ತುಪ್ಪ ನೀಡುತ್ತಿದೆ. ದರದ ವಿಚಾರಕ್ಕೆ ಸ್ಥಗಿತಗೊಂಡಿರೋ ಸರಬರಾಜು ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ನಿಮಗೆ ತುಪ್ಪ ನೀಡಲು ನಾವು ರೆಡಿ ಇದ್ದೇವೆ. ಗೊಂದಲ ಬಗೆಹರಿಕೆ ಬಗ್ಗೆ ಸಭೆ ನಡೆಸಲು ದಿನಾಂಕ ನೀಡುವಂತೆ ಟಿಟಿಡಿಗೆ ಕೇಳಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...