Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳೆದ 20 ವರ್ಷದಲ್ಲಿ ತಿರಪತಿಗೆ 1 ಬಾರಿ ಮಾತ್ರ ನಂದಿನಿ ತುಪ್ಪ ಪೂರೈಕೆಯಾಯ್ತಾ..? ಏನಿತು ಹೊಸ ಟ್ವಿಸ್ಟ್..?

Facebook
Twitter
Telegram
WhatsApp

 

ಕಳೆದ ಕೆಲವು ದಿನಗಳಿಂದ ತಿರಪತಿಗೆ ಪೂರೈಕೆಯಾಗುವ ನಂದಿನಿ ತುಪ್ಪದ ಬಗ್ಗೆಯೇ ಚರ್ಚೆಯಾಗುತ್ತಿದೆ. ಸದ್ಯ ಕೆಎಂಎಫ್ ನಂದಿನಿ ತುಪ್ಪವನ್ನು ಕಡಿಮೆ ದರದಲ್ಲಿ ನೀಡುವುದಿಲ್ಲ ಎಂದು ಹೇಳಿದೆ. ಹೀಗಾಗಿ ಇದು ಚರ್ಚೆಗೆ ಗ್ರಾಸವಾಗಿದೆ. ಆದ್ರೆ ಇದೀಗ ಹೊಸ ತಿರುವು ಸಿಕ್ಕಿದೆ.

ಕೆಎಂಎಫ್ ಕಳೆದ 20 ವರ್ಷಗಳಿಂದ ನಂದಿನಿ ತುಪ್ಪವನ್ನು ರಿಯಾಯಿತಿ ದರದಲ್ಲಿ ಪೂರೈಕೆ ಮಾಡಲಾಗುತ್ತಿದೆ ಎಂದೇ ಹೇಳಿತ್ತು‌. ಆದ್ರೆ ಈ ಮಾತು ಅಪ್ಪಟ ಸುಳ್ಳು ಎಂದು ಟಿಟಿಡಿ ದೇವಸ್ಥಾನದ ಕಾರ್ಯನಿರ್ವಾಹಕರಾದ ಎವಿ ಧರ್ಮಾರೆಡ್ಡಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಖಾಸಗಿ ಚಾನೆಲ್ ಒಂದಕ್ಕೆ ಮಾತನಾಡಿರುವ ಧರ್ಮಾರೆಡ್ಡಿ ಅವರು, ಕೆಎಂಎಫ್ ಕಳೆದ 20 ವರ್ಷಗಳಿಂದ ಟಿಟಿಡಿಗೆ ತುಪ್ಪವನ್ನು ನೀಡುತ್ತಿದ್ದೇವೆ ಎಂದು ತಿಳಿಸಿದೆ. ಇದೆಲ್ಲಾ ಸುಳ್ಳು ಆರೋಪ. ಕಳೆದ 20 ವರ್ಷಗಳಲ್ಲಿ ಒಂದು ಬಾರಿ ಮಾತ್ರ ನಂದಿನಿ ತುಪ್ಪವನ್ನು ಪೂರೈಕೆ ಮಾಡಿದೆ. ತಿಮ್ಮಪ್ಪನ ಸನ್ನಿಧಿಗೆ ರವಾನೆಯಾದ ಎಲ್ಲಾ ತುಪ್ಪದ ಮಾದರಿಯನ್ನು ಪರೀಕ್ಷೆ ಮಾಡಲಾಗುತ್ತದೆ. ಟೆಸ್ಟ್ ನಲ್ಲಿ ಪಾಸ್ ಆದರೆ ಮಾತ್ರ ಟ್ರಕ್ ನಲ್ಲಿ ತುಪ್ಪ ಹೊತ್ತು ಬಂದಿದ್ದಕ್ಕೆ ಒಳಗೆ ಪ್ರವೇಶ ನೀಡಲಾಗುತ್ತದೆ ಎಂದಿದ್ದಾರೆ.

ಇದರ ನಡುವೆಯೇ ಕೆಎಂಎಫ್ ಪತ್ರ ಬರೆದು, ನೀವು ಕೇಳಿರುವ ದರಕ್ಕೆ ತುಪ್ಪ ಸರಬರಾಜು ಮಾಡಲು ಸಾಧ್ಯವಿಲ್ಲ. ಕಳೆದ 20 ವರ್ಷಗಳಿಂದ ಕೆಎಂಎಫ್ ಟಿಟಿಡಿಗೆ ತುಪ್ಪ ನೀಡುತ್ತಿದೆ. ದರದ ವಿಚಾರಕ್ಕೆ ಸ್ಥಗಿತಗೊಂಡಿರೋ ಸರಬರಾಜು ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ನಿಮಗೆ ತುಪ್ಪ ನೀಡಲು ನಾವು ರೆಡಿ ಇದ್ದೇವೆ. ಗೊಂದಲ ಬಗೆಹರಿಕೆ ಬಗ್ಗೆ ಸಭೆ ನಡೆಸಲು ದಿನಾಂಕ ನೀಡುವಂತೆ ಟಿಟಿಡಿಗೆ ಕೇಳಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!