ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕೋಟಿ ಕೋಟಿ ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಚೈತ್ರಾ ಕುಂದಾಪುರ ಕೇಸ್ ಬಗೆದಷ್ಟು ಹೊಸ ಹೊಸ ವಿಚಾರಗಳು ತೆರೆದುಕೊಳ್ಳುತ್ತಿವೆ. ಇದೀಗ ಐಟಿ ಇಲಾಖೆಗೆ ಗೋವಿಂದ ಬಾಬು ಪೂಜಾರಿ ವಿರುದ್ಧವೇ ಚೈತ್ರಾ ಪತ್ರ ಬರೆದಿದ್ದರು ಎನ್ನಲಾಗಿದೆ. ಆ ಪತ್ರದಲ್ಲಿ ಸ್ವಾಮೀಜಿಯೊಬ್ಬರ ಹೆಸರನ್ನು ಉಲ್ಲೇಖ ಮಾಡಲಾಗಿತ್ತು ಎನ್ನಲಾಗಿದೆ.
ಐದು ಕೋಟಿ ನೀಡಿರುವ ಬಗ್ಗೆ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ. ಐಟಿ ಇಲಾಖೆಗೆ ಚೈತ್ರಾ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ, ಉದ್ಯಮಿಯದ್ದು ಅವ್ಯವಹಾರ ಎಂದು ಬಿಂಬಿಸುವ ಯತ್ನ ನಡೆಸಿದ್ದಾರೆ. ಇನ್ನು ಈ ಪತ್ರದಲ್ಲಿ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೆಸರು ಉಲ್ಲೇಖವಾಗಿದೆ.
ಪತ್ರದಲ್ಲಿ ಸ್ವಾಮೀಜಿ ಹೆಸರು ಉಲ್ಲೇಕವಾದ ಹಿನ್ನೆಲೆ ಸ್ವಾಮೀಜಿ ಮಾತನಾಡಿದ್ದು, ನನಗೂ ಇದಕ್ಕೂ ಸಂಬಂಧವೇ ಇಲ್ಲ. ಆದರೆ ಎಲ್ಲೋ ಇರುವ ನನ್ನ ಹೆಸರನ್ನ ಯಾಕೆ ಪ್ರಸ್ತಾಪ ಮಾಡಿದರು ತಿಳಿಯುತ್ತಿಲ್ಲ. ಇದು ಗೊತ್ತಾದ ಕೂಡಲೇ ನಾನು ಒಬ್ಬರಿಗೆ ಕರೆ ಮಾಡಿದೆ. ಆಗ ಅವರು ಹೇಳಿದರು, ಇದು ನೀವಲ್ಲ ತುಮಕೂರಿನ ಅಭಿನವಹಾಲ ಸ್ವಾಮೀಜಿ ಅಂತೆ ಅಂದರು. ಬಳಿಕ ಅವರಿಗೆ ಕರೆ ಮಾಡಿದ್ದೆ, ನಾನು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೇನೆ. ನೀವು ಎಚ್ಚರದಿಂದ ಇರಿ ಎಂದೇ ಅಭಿನವಹಾಲ ಸ್ವಾಮೀಜಿ ಹೇಳಿದ್ರು. ಬಳಿಕ ಚಕ್ರವರ್ತಿ ಸೂಲಿಬೆಲೆ ಅವರಿಗೂ ಕರೆ ಮಾಡಲಾಗಿತ್ತು. ನಾನು ಆ ಯುವತಿಗೆ ಎಚ್ಚರಿಕೆ ಕೂಡ ನೀಡಿದ್ದೆ. ಈ ವಿಚಾರವನ್ನು ಚರ್ಚೆ ಮಾಡುವುದಕ್ಕೆ ಹೋಗಿದ್ದಕ್ಕೆ ನನ್ನನ್ನು ತಗಲಾಕಿಸಿದ್ದಾರೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್