ಚೈತ್ರಾ ಬರೆದ ಪತ್ರದಲ್ಲಿ ವಜ್ರದೇಹಿ ಮಠದ ಸ್ವಾಮೀಜಿ ಹೆಸರು ಉಲ್ಲೇಖ..!

Facebook
Twitter
Telegram
WhatsApp

ಕೋಟಿ ಕೋಟಿ ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಚೈತ್ರಾ ಕುಂದಾಪುರ ಕೇಸ್ ಬಗೆದಷ್ಟು ಹೊಸ ಹೊಸ ವಿಚಾರಗಳು ತೆರೆದುಕೊಳ್ಳುತ್ತಿವೆ. ಇದೀಗ ಐಟಿ ಇಲಾಖೆಗೆ ಗೋವಿಂದ ಬಾಬು ಪೂಜಾರಿ ವಿರುದ್ಧವೇ ಚೈತ್ರಾ ಪತ್ರ ಬರೆದಿದ್ದರು ಎನ್ನಲಾಗಿದೆ. ಆ ಪತ್ರದಲ್ಲಿ ಸ್ವಾಮೀಜಿಯೊಬ್ಬರ ಹೆಸರನ್ನು ಉಲ್ಲೇಖ ಮಾಡಲಾಗಿತ್ತು ಎನ್ನಲಾಗಿದೆ.

ಐದು ಕೋಟಿ ನೀಡಿರುವ ಬಗ್ಗೆ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ. ಐಟಿ ಇಲಾಖೆಗೆ ಚೈತ್ರಾ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ, ಉದ್ಯಮಿಯದ್ದು ಅವ್ಯವಹಾರ ಎಂದು ಬಿಂಬಿಸುವ ಯತ್ನ ನಡೆಸಿದ್ದಾರೆ. ಇನ್ನು ಈ ಪತ್ರದಲ್ಲಿ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೆಸರು ಉಲ್ಲೇಖವಾಗಿದೆ.

ಪತ್ರದಲ್ಲಿ ಸ್ವಾಮೀಜಿ ಹೆಸರು ಉಲ್ಲೇಕವಾದ ಹಿನ್ನೆಲೆ ಸ್ವಾಮೀಜಿ ಮಾತನಾಡಿದ್ದು, ನನಗೂ ಇದಕ್ಕೂ ಸಂಬಂಧವೇ ಇಲ್ಲ. ಆದರೆ ಎಲ್ಲೋ ಇರುವ ನನ್ನ ಹೆಸರನ್ನ ಯಾಕೆ ಪ್ರಸ್ತಾಪ ಮಾಡಿದರು ತಿಳಿಯುತ್ತಿಲ್ಲ. ಇದು ಗೊತ್ತಾದ ಕೂಡಲೇ ನಾನು ಒಬ್ಬರಿಗೆ ಕರೆ ಮಾಡಿದೆ. ಆಗ ಅವರು ಹೇಳಿದರು, ಇದು ನೀವಲ್ಲ ತುಮಕೂರಿನ ಅಭಿನವಹಾಲ ಸ್ವಾಮೀಜಿ ಅಂತೆ ಅಂದರು. ಬಳಿಕ ಅವರಿಗೆ ಕರೆ ಮಾಡಿದ್ದೆ, ನಾನು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೇನೆ. ನೀವು ಎಚ್ಚರದಿಂದ ಇರಿ ಎಂದೇ ಅಭಿನವಹಾಲ ಸ್ವಾಮೀಜಿ ಹೇಳಿದ್ರು. ಬಳಿಕ ಚಕ್ರವರ್ತಿ ಸೂಲಿಬೆಲೆ ಅವರಿಗೂ ಕರೆ ಮಾಡಲಾಗಿತ್ತು. ನಾನು ಆ ಯುವತಿಗೆ ಎಚ್ಚರಿಕೆ ಕೂಡ ನೀಡಿದ್ದೆ. ಈ ವಿಚಾರವನ್ನು ಚರ್ಚೆ ಮಾಡುವುದಕ್ಕೆ ಹೋಗಿದ್ದಕ್ಕೆ ನನ್ನನ್ನು ತಗಲಾಕಿಸಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆ ಬೆಂಗಳೂರು ಬಂದ್ ಏನಿರುತ್ತೆ..? ಏನಿರಲ್ಲ..?

  ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ, ನಾಳೆ ಬೆಂಗಳೂರು ಬಂದ್ ಮಾಡಲು ರೈತ ಸಂಘಟನೆ, ಬಿಜೆಪಿ ನಾಯಕರು, ಕನ್ನಡಪರ ಸಂಘಟನೆ, ಜೆಡಿಎಸ್ ನಾಯಕರು ಸೇರಿದಂತೆ ಹಲವು ಸಂಘಟನೆಗಳು ನಿರ್ಧರಿಸಿವೆ. ಈಗಾಗಲೇ ಮಂಡ್ಯ

ವಯನಾಡ್ ಬದಲಿಗೆ ಹೈದರಾಬಾದ್ ನಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸವಾಲು

  ಸುದ್ದಿಒನ್, ಹೈದರಾಬಾದ್ : ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ವಯನಾಡ್ ಬದಲಿಗೆ ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸವಾಲು ಹಾಕಿದ್ದಾರೆ. ದೊಡ್ಡ ದೊಡ್ಡ

ಕುಂಚಿಟಿಗ ಜಾತಿಯನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲು ಶಿಫಾರಸು : ರಾಜ್ಯ ಸರ್ಕಾರ ಸೇರಿದಂತೆ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದ ಶ್ರೀ ಶಾಂತವೀರ ಮಹಾಸ್ವಾಮೀಜಿ

  ಸುದ್ದಿಒನ್, ಹೊಸದುರ್ಗ : ಕುಂಚಿಟಿಗ ಸಮಾಜದ  ಸಂಘಟನೆ ಸಂಸ್ಕಾರ ಸಾಮಾಜಿಕ ನ್ಯಾಯವನ್ನು ಮೀಸಲಾತಿ ಸೌಲಭ್ಯ ಕಲ್ಪಿಸುವ ಸಕಾರಾತ್ಮಕ ಸಂಕಲ್ಪದೊಂದಿಗೆ 1990 ರಿಂದ ಶ್ರೀ ಸಂಗಮೇಶ್ವರ ಜಯಂತ್ಯೋತ್ಸವ ಹಾಗೂ ಕುಂಚಿಟಿಗ ಸಮಾವೇಶ ನಡೆಸುತ್ತ ನಿರಂತರ

error: Content is protected !!