Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಥೇಟ್ ಸಿನಿಮಾ ಶೈಲಿಯಲ್ಲಿ ಬ್ಯಾಂಕ್ ದರೋಡೆ : 5 ನಿಮಿಷದಲ್ಲಿ 14 ಲಕ್ಷ ದೋಚಿ ಪರಾರಿ…! ವಿಡಿಯೋ ನೋಡಿ…!

---Advertisement---

 

 

ಗ್ರಾಹಕರು ಮತ್ತು ಉದ್ಯೋಗಿಗಳಿಂದ ಬ್ಯಾಂಕ್ ಕಿಕ್ಕಿರಿದು ತುಂಬಿತ್ತು. ಅಷ್ಟರಲ್ಲಿ ದುಷ್ಕರ್ಮಿಗಳು ಮಾಸ್ಕ್ ಧರಿಸಿ ಬಂದೂಕು ಹಿಡಿದು ಒಳ ಪ್ರವೇಶಿಸಿದ್ದಾರೆ. ಅಲ್ಲಿದ್ದ ಬ್ಯಾಂಕ್ ಸಿಬ್ಬಂದಿಗೆ ಆಯುಧಗಳಿಂದ ಬೆದರಿಸಿ ಹಣ ತೆಗೆದುಕೊಂಡು ತಕ್ಷಣ ಅಲ್ಲಿಂದ ಓಡಿ ಹೋಗಿದ್ದಾರೆ. ಇದು ಸಿನಿಮಾದ ಕಥೆಯಲ್ಲ. ಇದು ನಿಜವಾಗಿ ನಡೆದ ಘಟನೆ.

https://twitter.com/RitamappG/status/1689934091599372288?t=THaEPc3eVgzAQJU61K7_tg&s=19

ಶಸ್ತ್ರಸಜ್ಜಿತ ದರೋಡೆಕೋರರು ಹಗಲು ಹೊತ್ತಿನಲ್ಲಿ ಕಿಕ್ಕಿರಿದ ಬ್ಯಾಂಕ್‌ಗೆ ನುಗ್ಗಿ ಹಣ ದೋಚಿದ್ದಾರೆ. ಇದರಿಂದ ಅಲ್ಲಿದ್ದ ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರು ಬೆಚ್ಚಿ ಬಿದ್ದಿದ್ದಾರೆ. ದಾಳಿಕೋರರು ಹೋದ ನಂತರ ಬ್ಯಾಂಕ್ ಉದ್ಯೋಗಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಗುಜರಾತ್ ನಲ್ಲಿ ನಡೆದಿದೆ. ಇಡೀ ದರೋಡೆ ಘಟನೆ ಬ್ಯಾಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಇದೀಗ ಆ ದೃಶ್ಯಗಳು ಎಲ್ಲೆಡೆ ವೈರಲ್ ಆಗಿವೆ.

ಗುಜರಾತ್‌ನ ಸೂರತ್‌ನಲ್ಲಿ ಲೂಟಿಕೋರರು ಅಟ್ಟಹಾಸ ಮೆರೆದಿದ್ದಾರೆ. ಹಗಲು ಹೊತ್ತಿನಲ್ಲಿ ಎಲ್ಲರೂ ನೋಡುತ್ತಿರುವಾಗಲೇ ಬ್ಯಾಂಕ್‌ಗೆ ನುಗ್ಗಿ ಕಳ್ಳತನ ಮಾಡಿದ್ದಾರೆ.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸೂರತ್‌ನ ಬ್ಯಾಂಕ್ ಆಫ್ ಮಹಾರಾಷ್ಟ್ರ ಶಾಖೆಯಲ್ಲಿ ಈ  ದರೋಡೆ ಘಟನೆ ನಡೆದಿದೆ. ಐವರು ದುಷ್ಕರ್ಮಿಗಳು 2 ಬೈಕ್‌ಗಳಲ್ಲಿ ಬಂದು ಸಾಮಾನ್ಯ ಗ್ರಾಹಕರಂತೆ ನೇರವಾಗಿ ಬ್ಯಾಂಕ್‌ಗೆ ನುಗ್ಗಿದ್ದಾರೆ. ಅವರು ತಕ್ಷಣವೇ ತಮ್ಮ ಬಂದೂಕುಗಳನ್ನು ಮತ್ತು ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡು ಅಲ್ಲಿದ್ದ ಬ್ಯಾಂಕ್ ನೌಕರರು ಮತ್ತು ಗ್ರಾಹಕರಿಗೆ ಬೆದರಿಕೆ ಹಾಕಿದ್ದಾರೆ.

ಬ್ಯಾಂಕ್ ಸಿಬ್ಬಂದಿಗೆ ಬೆದರಿಸಿ ತಾವು ತಂದಿದ್ದ ಬ್ಯಾಗ್ ಗಳಲ್ಲಿ ಹಣ ತುಂಬುವಂತೆ ಹೇಳಿದ್ದಾರೆ. ಬ್ಯಾಗ್ ತುಂಬಿದ ಬಳಿಕ ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರನ್ನು ಅಲ್ಲಿದ್ದ ಒಂದು ಕೊಠಡಿಗೆ ಕಳುಹಿಸಿ ಹೊರಗಿನಿಂದ ಬೀಗ ಹಾಕಿದ್ದಾರೆ. ಬಳಿಕ ಹಣ ತುಂಬಿದ ಚೀಲಗಳನ್ನು ತೆಗೆದುಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಎಲ್ಲಾ ಕೆಲಸ ಕೇವಲ 5 ನಿಮಿಷಗಳಲ್ಲಿ ಮುಗಿದಿದೆ. ಈ ಘಟನೆಯಿಂದ ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರು ಭಯಭೀತರಾಗಿದ್ದರು.

ದರೋಡೆಕೋರರು ಹಣವನ್ನು ತೆಗೆದುಕೊಂಡು ಓಡಿಹೋದ ನಂತರ, ಬ್ಯಾಂಕ್ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ.  ಪೊಲೀಸರು ಕೂಡಲೇ ಘಟನೆ ನಡೆದ ಬ್ಯಾಂಕ್ ಆಫ್ ಮಹಾರಾಷ್ಟ್ರ ತಲುಪಿದ್ದಾರೆ. ಬಳಿಕ ಘಟನೆಯ ಕುರಿತು ತನಿಖೆ ಆರಂಭಿಸಿದರು. ದರೋಡೆಯ ಸಂಪೂರ್ಣ ದೃಶ್ಯ ಬ್ಯಾಂಕ್‌ನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಬಳಿಕ ಬ್ಯಾಂಕಿನಿಂದ ದುಷ್ಕರ್ಮಿಗಳು ತೆಗೆದುಕೊಂಡು ಹೋಗಿದ್ದ ಹಣವನ್ನು ಸಿಬ್ಬಂದಿ ಎಣಿಕೆ ಮಾಡಿದಾಗ 14 ಲಕ್ಷ ರೂಪಾಯಿ ಎಂದು ತಿಳಿದು ಬಂದಿದೆ.

ಬಳಿಕ ಬ್ಯಾಂಕ್ ಉದ್ಯೋಗಿಗಳ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ವಿಡಿಯೋಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...