ಹಿಂದುತ್ವದ ದೃಷ್ಟಿಯಲ್ಲಿ ಸಾಗೋಣ, ಹಿಂದೂತ್ವಕ್ಕಾಗಿ  ಸೇರೋಣ ;ಆರ್ ಎಸ್‍ಎಸ್ ಕರ್ನಾಟಕ ದಕ್ಷಿಣ ಪ್ರಾಂತ ಘೋಷ್ ಪ್ರಮುಖ್ ಗಿರೀಶ್ ಹೇಳಿಕೆ

1 Min Read

ಸುದ್ದಿಒನ್,ಚಿತ್ರದುರ್ಗ, (ಅ.02) : ನಾವೆಲ್ಲ ಹಿಂದುತ್ವದ ದೃಷ್ಟಿಯಿಂದ ಕೆಲಸ ಮಾಡಿದಾಗ ಮಾತ್ರ ಲವ್ ಜಿಹಾದ್, ಮತಾಂತರದ ಪಿಡುಗುಗಳನ್ನು ಕಿತ್ತೆಸೆಯಲು ಸಾಧ್ಯ ಎಂದು ಆರ್ ಎಸ್‍ಎಸ್ ಕರ್ನಾಟಕ ದಕ್ಷಿಣ ಪ್ರಾಂತ ಘೋಷ್ ಪ್ರಮುಖ್ ಗಿರೀಶ್ ಹೇಳಿದರು.

ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಮಾತನಾಡಿದ ಅವರು, ಇಂದು ದೇಶವನ್ನು ಈ ಎರಡು ಪಿಡುಗುಗಳು ಕಾಡುತ್ತಿವೆ. ಆದ್ದರಿಂದ ನಾವುಗಳು ಒಗ್ಗಾಟ್ಟಾಗಿ ಕೆಲಸ ಮಾಡಬೇಕು ಎಂದರು.

ಹಿಂದುತ್ವ ಒಂದು ಜಾತಿಯಲ್ಲ, ಮತ ಪಂಥವಲ್ಲ ಅದು ಮನುಷ್ಯನ ಜೀವನಕ್ಕೆ ಪೂರಕವಾದದ್ದು. ಇಲ್ಲಿ ನಾವು ಸೇರಿರುವುದು ಡಿಜೆಗಾಗಿ ಅಲ್ಲ. ಬದಲಾಗಿ ಹಿಂದೂತ್ವಕ್ಕೆ ಬಂದಿದ್ದೇವೆ ಎಂಬುದನ್ನು ತಿಳಿಯಬೇಕು ಎಂದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಕುಡಾ ಅಧ್ಯಕ್ಷ ಬದ್ರಿನಾಥ್, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಪ್ರಭು ಮಡಿವಾಳ ಮಾಚಿದೇವ ಸ್ವಾಮೀಜಿ, ಛಲವಾದಿ ಗುರುಪೀಠದ ಶ್ರೀ ಬಸವನಾಗೀದೇವ ಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ ಸೇವಾಲಾಲ್ ಸ್ವಾಮೀಜಿ, ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ, ತಮಿಳುನಾಡಿನ ಮಂಜುನಾಥ ಸ್ವಾಮೀಜಿ, ಕೆ.ಎಸ್.ನವೀನ್, ಜಿ.ಎಸ್.ಅನಿತ್ ಇತರರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *