ಸಂಕಷ್ಟದ ಸಮಯದಲ್ಲಿ ಆರ್ಯವೈಶ್ಯ ಸಮಾಜ ನೊಂದವರ ನೆರವಿಗೆ ಧಾವಿಸಿದೆ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಅನೇಕ ಸಂಕಷ್ಟದ ಸಮಯದಲ್ಲಿ ಆರ್ಯವೈಶ್ಯ ಜನಾಂಗ ನೊಂದವರ ನೆರವಿಗೆ ಧಾವಿಸಲಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಪ್ರಶಂಶಿಸಿದರು.

ವಾಸವಿ ಮಹಲ್‍ನಲ್ಲಿ ಭಾನುವಾರ ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ನ ಉದ್ಘಾಟನೆ ಹಾಗೂ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಖಜಾಂಚಿ ಹಾಗೂ ಸದಸ್ಯರುಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಬರಗಾಲ, ಪ್ರವಾಹ, ನೆರೆ ಹಾವಳಿ, ಭೂಕಂಪ, ಯುದ್ದಗಳಾದಂತ ತುರ್ತು ಸಮಯದಲ್ಲಿ ಆರ್ಯವೈಶ್ಯ ಜನಾಂಗ ಹಾಗೂ ವಾಸವಿ ಸಂಸ್ಥೆಗಳು ಹಿಂದಿನಿಂದಲೂ ನೊಂದವರಿಗೆ ನಿರಾಶ್ರಿತರಿಗೆ ಸಹಾಯ ಮಾಡಿಕೊಂಡು ಬರುತ್ತಿರುವುದನ್ನು ನೋಡಿದ್ದೇನೆ. ವಾಸವಿ ಕ್ಲಬ್ಸ್ ಇಂಟರ್‍ನ್ಯಾಷನಲ್ ಸಂಸ್ಥೆಯಾಗಿದ್ದು, ಅನೇಕ ಸಮಾಜಮುಖಿ ಕೆಲಸ ಮಾಡುವುದು ಈ ಸಂಸ್ಥೆಯ ಧ್ಯೇಯವಾಗಿದೆ.

ಆರ್ಯವೈಶ್ಯ ಜನಾಂಗ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವಲ್ಲಿ ಎಂದಿಗೂ ಮೀನಾಮೇಷ ಎಣಿಸುವುದಿಲ್ಲ. ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ, ವಿಕಲಚೇತನರಿಗೆ ಸಲಕರಣೆಗಳ ವಿತರಣೆ, ಹೀಗೆ ಹತ್ತು ಹಲವಾರು ಜನೋಪಯೋಗಿ ಕೆಲಸಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಚಿತ್ರದುರ್ಗದಲ್ಲಿರುವ ವಾಸವಿ ವಿದ್ಯಾಸಂಸ್ಥೆ ಅನೇಕ ಬಡ ಮಕ್ಕಳ ಶಿಕ್ಷಣಕ್ಕೂ ನೆರವಾಗಿದೆ ಎಂದು ಹೇಳಿದರು.

ಆರ್.ಶ್ರೀನಿವಾಸ್ ಡಿಸ್ಟ್ರಿಕ್ಟ್ ಗೌರ್ವನರ್ ವಾಸವಿ ಕ್ಲಬ್, ವಾಸವಿ ಕ್ಲಬ್ ಇಂಟರ್‍ನ್ಯಾಷನಲ್ ಉಪಾಧ್ಯಕ್ಷರಾದ ಸಿ.ಎಂ.ಎಲ್.ದಿಲೀಪ್, ಕರ್ನಾಟಕ ಆರ್ಯವೈಶ್ಯ ಡೆವಲಪ್‍ಮೆಂಟ್ ಕಾರ್ಪೊರೇಷನ್ ಸಂಸ್ಥಾಪಕ ಅಧ್ಯಕ್ಷ ಟಿ.ಎ.ಶರವಣ, ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್‍ನ ಅಧ್ಯಕ್ಷ ಕೆ.ಸೋಮನಾಥಶೆಟ್ಟಿ, ಕಾರ್ಯದರ್ಶಿ ಡಿ.ಆರ್.ವೇಣುಗೋಪಾಲಶೆಟ್ಟಿ, ಖಜಾಂಚಿ ಕೆ.ಎಸ್.ಚಂದ್ರಮೋಹನ್, ಕರ್ನಾಟಿಕ ಆರ್ಯವೈಶ್ಯ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ವಿ.ಅಮರೇಶ್ ಇವರುಗಳು ವೇದಿಕೆಯಲ್ಲಿದ್ದರು.

ಮಧುಗಿರಿ ವಾಸವಿ ಕ್ಲಬ್ ಅಧ್ಯಕ್ಷೆ ಲಕ್ಷ್ಮಿಮೂರ್ತಿ ಸ್ವಾಗತಿಸಿದರು. ದೊಂತಿ ವೇಣುಗೋಪಾಲ್ ವಂದಿಸಿದರು. ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ನಿರ್ದೇಶಕ ಎಂ.ಕೆ.ರವೀಂದ್ರ ನಿರೂಪಿಸಿದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago