Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜುಲೈ 29 ರಂದು ಜಾಗತಿಕ ಲಿಂಗಾಯಿತ ಮಹಾಸಭಾದ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಜಾಗತಿಕ ಲಿಂಗಾಯಿತ ಮಹಾಸಭಾ ಬೆಂಗಳೂರು, ಜಿಲ್ಲಾ ಘಟಕದ ಉದ್ಗಾಟನಾ ಹಾಗೂ ಪದಗ್ರಹಣ ಸಮಾರಂಭ ಜುಲೈ 29 ರಂದು ಬೆಳಿಗ್ಗೆ 10: 30 ಕ್ಕೆ
ತ.ರಾ.ಸು.ರಂಗಮಂದಿರಲ್ಲಿ ನಡೆಯಲಿದೆ ಎಂದು ಪ್ರಧಾನ ಸಂಚಾಲಕ ಜಿ.ಡಿ.ಕೆಂಚವೀರಪ್ಪ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಣೆಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿ, ಮುರುಘಾಮಠದ ಜಯಬಸವಕುಮಾರ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ನಿವೃತ್ತ ಐ.ಎ.ಎಸ್.ಅಧಿಕಾರಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಜಾಮದಾರ್ ಉದ್ಘಾಟಿಸುವರು.

ಬಸವಮಂಟಪದ ಮಾತೆ ದಾನೇಶ್ವರಿ ತಾಯಿ, ಮಹಾಸಭಾ ಬೆಳಗಾಂ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ, ಶ್ರೀಮತಿ ಪುಷ್ಪಲತಾ ಎಸ್.ವಿ. ಹನುಮೇಶ ಕಲಮಂಗಿ ಮಹಾದೇವಪ್ಪ ಇವರುಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ನಿವೃತ್ತ ಪ್ರಾಧ್ಯಾಪಕ ಹಾಗೂ ಆರ್ಥಿಕ ಚಿಂತಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿ.ಡಿ.ಕೆಂಚವೀರಪ್ಪ ಮನವಿ ಮಾಡಿದರು. ಜಿ.ಟಿ.ನಂದೀಶ್, ಧನಂಜಯ, ಎಲ್.ಬಸವರಾಜಪ್ಪ ಅಳಗವಾಡಿ, ಸಿದ್ದಪ್ಪ ಹಳಿಯೂರು ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿ ಸೈಬರ್ ವಂಚನೆ ಪ್ರಕರಣ : ವಂಚಕರ ಜಾಲ ಭೇದಿಸಿದ ಸಿಇಎನ್ ಪೊಲೀಸರು

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 : ನಗರದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿಯವರಿಗೆ ಕಳೆದ ತಿಂಗಳು ನಡೆದಿದ್ದ ಸೈಬರ್ ವಂಚನೆ ಪ್ರಕರಣವನ್ನು ಚಿತ್ರದುರ್ಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಭೇದಿಸಿದ್ದಾರೆ. ನಗರದ ಹಿರಿಯ ವೈದ್ಯರಾದ

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

error: Content is protected !!