ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಜಾಗತಿಕ ಲಿಂಗಾಯಿತ ಮಹಾಸಭಾ ಬೆಂಗಳೂರು, ಜಿಲ್ಲಾ ಘಟಕದ ಉದ್ಗಾಟನಾ ಹಾಗೂ ಪದಗ್ರಹಣ ಸಮಾರಂಭ ಜುಲೈ 29 ರಂದು ಬೆಳಿಗ್ಗೆ 10: 30 ಕ್ಕೆ
ತ.ರಾ.ಸು.ರಂಗಮಂದಿರಲ್ಲಿ ನಡೆಯಲಿದೆ ಎಂದು ಪ್ರಧಾನ ಸಂಚಾಲಕ ಜಿ.ಡಿ.ಕೆಂಚವೀರಪ್ಪ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಣೆಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿ, ಮುರುಘಾಮಠದ ಜಯಬಸವಕುಮಾರ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ನಿವೃತ್ತ ಐ.ಎ.ಎಸ್.ಅಧಿಕಾರಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಜಾಮದಾರ್ ಉದ್ಘಾಟಿಸುವರು.
ಬಸವಮಂಟಪದ ಮಾತೆ ದಾನೇಶ್ವರಿ ತಾಯಿ, ಮಹಾಸಭಾ ಬೆಳಗಾಂ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ, ಶ್ರೀಮತಿ ಪುಷ್ಪಲತಾ ಎಸ್.ವಿ. ಹನುಮೇಶ ಕಲಮಂಗಿ ಮಹಾದೇವಪ್ಪ ಇವರುಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ನಿವೃತ್ತ ಪ್ರಾಧ್ಯಾಪಕ ಹಾಗೂ ಆರ್ಥಿಕ ಚಿಂತಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿ.ಡಿ.ಕೆಂಚವೀರಪ್ಪ ಮನವಿ ಮಾಡಿದರು. ಜಿ.ಟಿ.ನಂದೀಶ್, ಧನಂಜಯ, ಎಲ್.ಬಸವರಾಜಪ್ಪ ಅಳಗವಾಡಿ, ಸಿದ್ದಪ್ಪ ಹಳಿಯೂರು ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















