Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನವೆಂಬರ್ 29ರಂದು ದಾವಣಗೆರೆ ವಿವಿ ಅಂತರ್ ಕಾಲೇಜುಗಳ ಹ್ಯಾಂಡ್‍ಬಾಲ್ ಪಂದ್ಯಾವಳಿ ಉದ್ಘಾಟನೆ

---Advertisement---

ಚಿತ್ರದುರ್ಗ. ನ.28: ಕಾಲೇಜು ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾನಿಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐಕ್ಯೂಎಸಿ ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಸಹಯೋಗದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ಅಂತರ್ ಕಾಲೇಜುಗಳ ಹ್ಯಾಂಡ್‍ಬಾಲ್ ಪಂದ್ಯಾವಳಿ ಹಾಗೂ ಪುರುಷ ಮತ್ತು ಮಹಿಳೆಯರ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಉದ್ಘಾಟನಾ ಸಮಾರಂಭ ಇದೇ ನವೆಂಬರ್ 29ರಂದು ಬೆಳಿಗ್ಗೆ 9.30ಕ್ಕೆ ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದೆ.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟಿಸುವರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿವಿ ದೈಹಿಕ ಶಿಕ್ಷಣ ವಿಭಾಗದ ಪ್ರಭಾರಿ ನಿರ್ದೇಶಕ ಡಾ.ವೆಂಕಟೇಶ್, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಜೆ.ಸಾಧಿಕ್ ಭಾಗವಹಿಸುವರು. ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ.ಬಿ.ಹೆಚ್.ಕುಮಾರಸ್ವಾಮಿ, ಸಾಂಸ್ಕøತಿಕ ಸಮಿತಿ ಸಂಚಾಲಕ ಡಾ.ಡಿ.ಓ.ಸಿದ್ದಪ್ಪ, ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ.ಪಿ.ಎನ್.ಮಧುಸೂದನ ಉಪಸ್ಥಿತಿವಹಿಸುವರು.

ಸಂಜೆ 4ಕ್ಕೆ ಸಮಾರೋಪ ಸಮಾರಂಭ: ದಾವಣಗೆರೆ ವಿವಿ ಅಂತರ್ ಕಾಲೇಜುಗಳ ಹ್ಯಾಂಡ್‍ಬಾಲ್ ಪಂದ್ಯಾವಳಿ ಹಾಗೂ ಪುರುಷ ಮತ್ತು ಮಹಿಳೆಯರ  ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಸಮಾರೋಪ ಸಮಾರಂಭ ನ.29ರಂದು ಸಂಜೆ 4ಕ್ಕೆ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ ಅಧ್ಯಕ್ಷತೆ ವಹಿಸುವರು. ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ ಬಹುಮಾನ ವಿತರಣೆ ಮಾಡುವರು.

ಮುಖ್ಯ ಅತಿಥಿಗಳಾಗಿ ರಾಜ್ಯ ಹ್ಯಾಂಡ್‍ಬಾಲ್ ಸಂಸ್ಥೆಯ ಹಿರಿಯ  ಉಪಾಧ್ಯಕ್ಷರು ಹಾಗೂ ಜಿಲ್ಲಾ ಹ್ಯಾಂಡ್‍ಬಾಲ್ ಅಸೋಶಿಯೇಷನ್ ಅಧ್ಯಕ್ಷ ಕೆ.ಹೆಚ್.ಶಿವರಾಂ, ದಾವಣಗೆರೆ ವಿವಿ ಕ್ರೀಡಾ ಅಧಿಕಾರಿ ಡಾ.ಬಿ.ಹೆಚ್.ವೀರಪ್ಪ, ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಹೆಚ್.ತಿಪ್ಪೇಸ್ವಾಮಿ ಭಾಗವಹಿಸುವರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಬಿ.ಮಂಜುನಾಥ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಿ.ಚನ್ನಕೇಶವ ಉಪಸ್ಥಿತಿವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment