Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಲ್ಲಾಪುರದಲ್ಲಿ ಕೊಲ್ಲಾಪುರ ಶ್ರೀಮಹಾಲಕ್ಷ್ಮಿ ದೇವಾಲಯ ಲೋಕಾರ್ಪಣೆ : ಗಣ್ಯರು ಭಾಗಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಸೆ. 29 : ದುಶ್ಚಟಗಳನ್ನು ತ್ಯಜಿಸಿ ಬದಲಾವಣೆಯ ಕಡೆ ಗಮನ ನೀಡಿದಾಗ ಮಾತ್ರ ಮಾದಿಗ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಕೇಂದ್ರ ಸಚಿವರಾದ ಎ. ನಾರಾಯಣಸ್ವಾಮಿ ಪ್ರತಿ ಪಾಡದಿಸಿದರು.

ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಕೊಲ್ಲಾಪುರ ಶ್ರೀಮಹಾಲಕ್ಷ್ಮಿ ದೇವಾಲಯದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು ಸರ್ಕಾರ ನಿಮ್ಮ ಉನ್ನತಿಯ ಬಗ್ಗೆ ಯೋಚಿಸುವುದಿಲ್ಲ ನಿಮ್ಮ ಬೆಳವಣಿಗೆಗೆ ನೀವೇ ಶಿಲ್ಪಿಗಳಾಗಬೇಕು ಕುಡಿತ, ಅನಕ್ಷರತೆ, ಮಾದಿಗ ಸಮುದಾಯಕ್ಕೆ ಶಾಪವಾಗಿದೆ. ನಾನು ಕೂಡ ದುಶ್ಚಟಕ್ಕೆ  ಒಳಗಾಗಿದ್ದಾರೆ ಹಮಾಲಿ ಕೆಲಸ ಮಾಡಿಕೊಂಡು ಬದುಕಬೇಕಿತ್ತು ಕೆಟ್ಟ ಚಟಗಳಿಂದ ದೂರ ಉಳಿದಿದ್ದಕ್ಕೆ  ರಾಜಕೀಯ ಅಧಿಕಾರ ಪಡೆಯಲು ಸಾಧ್ಯವಾಯಿತು ಎಂದು ಹೇಳಿದರು.

ನಾವು ಸಾಗುತ್ತಿರುವ ದಾರಿ ಸರಿಯೋ, ತಪ್ಪೋ ಎನ್ನುವುದನ್ನು ನಿರ್ಣಯಿಸುವ ವಿವೇಕ ಪ್ರತಿಯೊಬ್ಬ ಮನುಷ್ಯನಿಗೂ ಇರುತ್ತದೆ ಆದರೆ ನಾವು ಕೆಟ್ಟ ವಿಷಯಗಳಿಗೆ ಆದ್ಯತೆ ನೀಡಿ ಕುಟುಂಬವನ್ನು ಹಾಳು ಮಾಡಿಕೊಳ್ಳುತ್ತಿದ್ದೇವೆ ಎಂದು ವಿಷಾದಿಸಿದರು.

ಸಮಾರಂಭದ ಸಾನಿದ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಯವರು ಶಿಕ್ಷಣ ಪಡೆಯದ ಹೊರತು ವ್ಯಕ್ತಿಯ ಅಭಿವೃದ್ಧಿ ಸಾಧ್ಯವಿಲ್ಲ ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಮನೆಯ ಹಿರಿಯರು ಸರಿ ದಾರಿಯಲ್ಲಿ ಸಾಗಿದರೆ ಅದು ಕಿರಿಯರಿಗೆ ಮಾರ್ಗದರ್ಶನವಾಗುತ್ತದೆ ನೀವೇ ತಪ್ಪು ದಾರಿ ತುಳಿದರೆ ಕುಟುಂಬ ನಾಶವಾಗುತ್ತದೆ ಎಂದರು.

ಶಿಕ್ಷಣ ಯಾವುದೇ ಸಮುದಾಯಕ್ಕೆ ಸೀಮಿತವಲ್ಲ ಎಲ್ಲ ಜಾತಿ ವರ್ಗದವರಿಗೂ ಶಿಕ್ಷಣ ಪಡೆಯಲು ಸಾಧ್ಯವಿದೆ ಸಮುದಾಯದ ಯುವಕರು ಕೇವಲ ಹೊರಟ ಸಂಘರ್ಷಕ್ಕೆ ಆದ್ಯತೆ ನೀಡದೆ ದುಡಿಮೆಗೆ ಒತ್ತು ನೀಡಿ ಬಡತನದ ನೆಪದಲ್ಲಿ ಶಿಕ್ಷಣದಿಂದ ವಿಮುಖರಾದರೆ ನಮ್ಮ ಅವನತಿಗೆ ನಾವೇ ಕಾರಣರಾಗುತ್ತೇವೆ ಎಂದು ಶ್ರೀಗಳು ಎಚ್ಚರಿಸಿದರು.

ಗ್ರಾಮಗಳಲ್ಲಿ ಸೌಹಾರ್ದ ವಾತಾವರಣ ನಿರ್ಮಾಣವಾಗಲು ಎಲ್ಲಾ ಸಮುದಾಯಗಳೂ ಒಗ್ಗೂಡಿ ಸಾಗಬೇಕು ದೇವಾಲಯಗಳು ಧಾರ್ಮಿಕ ಶ್ರದ್ದಾ ಕೇಂದ್ರಗಳಾಗಬೇಕು, ಗ್ರಾಮಗಳಲ್ಲಿ ಎಲ್ಲಾ ಜಾತಿ ವರ್ಗಗಳ ಜನರು ಸೌಹಾರ್ದತೆಯಿಂದ ಬಾಳಬೇಕು ಎಂದು ಸ್ವಾಮೀಜಿ ತಿಳಿಸಿದರು. ದಲಿತರುಮತಾಂತರದಿಂದ ದೂರವಿರಬೇಕು ಮತಾಂತರವಾದರೆ ನೀವು ಧಾರ್ಮಿಕ ಅಲ್ಪ ಸಂಖ್ಯಾತರಾಗುತ್ತೀರಿ ಸರ್ಕಾರಿ ಸೌಲಭ್ಯದಿಂದ ವಂಚಿತರಾಗುತ್ತೀರಿ ಆದುದರಿಂದ ಜಾತಿ ಗಣತಿಯ ವೇಳೆ ಧರ್ಮದ ಕಾಲಂ ನಲ್ಲಿ ಹಿಂದೂ ಎಂದು ಜಾತಿ ಕಾಲಂನಲ್ಲಿ ಮಾದಿಗ ಎಂದು ಬರೆಸುವಂತೆ ಸಲಹೆ ನೀಡಿದರು.

ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ಮಾತನಾಡಿ ದೇವಾಲಗಳು ಮನಸ್ಸುಗಳನ್ನು ಬೆಸೆಯುವ ಕೇಂದ್ರಗಳಾಗಿವೆ ಆದರೆ ಮೂಢನಂಬಿಕೆಗೆ ಬಲಿಯಾಗಿ ಹಬ್ಬ ಜಾತ್ರೆ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಬಾರದು ಎಂದು ಗ್ರಾಮಸ್ಥರಿಗೆ ಕಿವಿ ಮಾತು ಹೇಳಿದರು.

ವಿಧಾನ ಪರಿಷತ್ ಸದಸ್ಯ ಕೆ ಎಸ್ ನವೀನ್ ಮಾತನಾಡಿ ದೇವಾಲಯಗಳು ಹಿಂದೂಗಳ ಐಕ್ಯತೆಯ ಕೇಂದ್ರಗಳಾಗಿವೆ. ಗ್ರಾಮಗಳ ಬಹುತೇಕೆ ವಿಷಯಗಳು ನಿರ್ಧಾರವಾಗುವುದು ದೇವಾಲಯಗಳಲ್ಲಿಯೇ ಅದ್ಯಾತ್ಮಿಕ, ಹಾಗೂ ಸಾಂಸ್ಕೃತಿಕ ವಾತಾವರಣ ನಿರ್ಮಿಸುವಲ್ಲಿ ದೇವಾಲಗಳ ಪಾತ್ರ ಅನನ್ಯ ಎಂದು ಹೇಳಿದರು.

ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ನಿರಂತರ ಶ್ರಮ ವಹಿಸಿದ ಶ್ರೀ ಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿ, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ,ಬಳ್ಳಾರಿ ಹೆಚ್ ಹನುಮಂತಪ್ಪ, ಬಿ ಪಿ ಪ್ರಕಾಶಮೂರ್ತಿ, ಹುಲ್ಲೂರು ಕುಮಾರಸ್ವಾಮಿ, ಹಾಗೂ ಖ್ಯಾತ ವೈದ್ಯರಾದ ಡಾ. ಈ. ಸತೀಶ್ ಇವರನ್ನು ಇದೇ ವೇಳೆ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ  ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ಶ್ರೀಮತಿ ಸೌಭಾಗ್ಯ ಸೌಭಾಗ್ಯ ಬಸವರಾಜನ್, ಬಿಜೆಪಿ ಜಿಲ್ಲಾಧ್ಯಕ್ಷೆ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ನರಸಿಂಹರಾಜು, ಶ್ರೀ ಮಾದಾರ ಚನ್ನಯ್ಯ ಸೇವಾ ಸಮಿತಿಯ  ಹೂಡಿ ಮಂಜುನಾಥ್.ಪರಶುರಾಮ್ ಹೊನ್ನಳ್ಳಿ, ಯೋಗೀಶ್ ಸೋರೆಕುಂಟೆ, ಸಂದೀಪ್ ಗುಂಡಾರ್ಪಿ, ಮಾದಾರಚನ್ನಯ್ಯ ನೌಕರರ ಸೇವಾಸಮಿತಿಯ ಸದಸ್ಯರು ಮುಖಂಡರಾದ ಮಾರಘಟ್ಟ ಜಯಪ್ಪ, ಬೊಮ್ಮೇನಹಳ್ಳಿ ಮಹಾಂತೇಶ್, ನಾಗರಾಜ್, ಅನಂತ್ ಲಕ್ಷ್ಮಿಸಾಗರ ದೇವರಾಜ್, ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಸಿಇಓ ಎಸ್. ರಾಘವೇಂದ್ರ, ವ್ಯವಸ್ಥಾಪಕ ಓ ಮಲ್ಲಿಕಾರ್ಜುನ್ ಜಾನುಕೊಂಡ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಸೇರಿದಂತೆ ಮಲ್ಲಾಪುರ ಗ್ರಾಮದ ಮುಖಂಡರು ಇದ್ದರು

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now