ಕೊಪ್ಪಳ.ಜೂನ್.25: ರೈತರ ಹಿತರಕ್ಷಣೆಯೇ ನಮ್ಮ ಸರ್ಕಾರದ ಪರಮೋಚ್ಚ ಧ್ಯೇಯವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ತುಂಗಭದ್ರಾ ಅಣೆಕಟ್ಟಿನಲ್ಲಿ ಎದುರಾಗಿದ್ದ ಗೇಟ್ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ, ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿ ಯಾವುದೇ ವಿಳಂಬವಿಲ್ಲದೆ ನೂತನ ಗೇಟ್ ಅಳವಡಿಸುವ ಕಾರ್ಯವನ್ನು ಯಶಸ್ವಿಯಾಗಿ ಪೂರೈಸಿದ್ದು, ಇಂದು ಅದನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಾಗಿದೆ.
“ನೇಗಿಲ ಕುಲದೊಳಗಡಗಿದೆ ಕರ್ಮ, ನೇಗಿಲ ಮೇಲೆಯೇ ನಿಂತಿದೆ ಧರ್ಮ”
ಇದನ್ನು ಓದಿರಾಜ್ಯದ ಸಚಿವರಿಗೆ ಉಸ್ತುವಾರಿ ಜಿಲ್ಲೆ ಹಂಚಿಕೆ; ಕೋಟೆನಾಡು ಚಿತ್ರದುರ್ಗಕ್ಕೆ ಡಾ. ಜಿ. ಪರಮೇಶ್ವರ್ ಉಸ್ತುವಾರಿರೈತರ ಹಿತರಕ್ಷಣೆಯೇ ಪರಮೋಚ್ಚ ಧ್ಯೇಯ ಎಂದು ನಂಬಿರುವ ನಮ್ಮ ಸರ್ಕಾರ, ತುಂಗಭದ್ರಾ ಅಣೆಕಟ್ಟಿನ ಗೇಟ್ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿತ್ತು. ಯಾವುದೇ ವಿಳಂಬವಿಲ್ಲದೆ ಜಲಾಶಯಕ್ಕೆ ನೂತನ ಗೇಟ್ಗಳನ್ನು ಅಳವಡಿಸುವ ಕಾರ್ಯವನ್ನು… pic.twitter.com/RQjPbJ60RP
— DK Shivakumar (@DKShivakumar) June 25, 2026
ಹೊಸಪೇಟೆಯ ಟಿ.ಬಿ. ಡ್ಯಾಂನ ಗೇಟ್ ಸಂಖ್ಯೆ 18ರ ಬಳಿ ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಜಂಟಿ ಸಹಯೋಗದೊಂದಿಗೆ ಈ ಐತಿಹಾಸಿಕ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕೇಂದ್ರ ಜಲಶಕ್ತಿ ಸಚಿವರಾದ ಸಿ. ಆರ್. ಪಾಟೀಲ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರ ಘನ ಉಪಸ್ಥಿತಿಯಲ್ಲಿ ನೂತನವಾಗಿ ಅಳವಡಿಸಲಾದ 33 ಸ್ಪಿಲ್ವೇ ಗೇಟ್ಗಳನ್ನು ಜನತೆಗೆ ಸಮರ್ಪಿಸಲಾಯಿತು.
ಈ ಮಹತ್ವದ ಸಂದರ್ಭದಲ್ಲಿ ಸಚಿವರುಗಳಾದ ಹೆಚ್. ಕೆ. ಪಾಟೀಲ್, ಎನ್. ಎಸ್. ಬೋಸರಾಜು, ಶಿವರಾಜ್ ತಂಗಡಗಿ ಸೇರಿದಂತೆ ಹಲವು ಶಾಸಕರು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













