ಬೆಳಗಾವಿ: ಚುನಾವಣೆಗಳು ಮುಗಿದ ಮೇಲೆ ಜನ ಸಾಮಾನ್ಯರಿಗೆ ಈ ಬೆಲೆ ಏರಿಕೆಯ ಬಗ್ಗೆಯೇ ಹೆಚ್ಚು ತಲೆ ಬಿಸಿ ಮಾಡಿಕೊಳ್ಳುವಂತ ಪರಿಸ್ಥಿತಿಗಳು ಯಾವಾಗಲೂ ಸೃಷ್ಠಿಯಾಗುತ್ತವೆ. ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ – ಡಿಸೇಲ್ ದರ ಏರಿಕೆಯಾಯ್ತು. ಅದರ ಬೆನ್ನಲ್ಲೇ ಈಗ ಹಾಲಿನ ದರವೂ ಏರಿಕೆಯಾಗಿದೆ. ಹಾಲನ್ನು ಹೆಚ್ಚು ಮಾಡಿ ದರವನ್ನು ಹೆಚ್ಚಳ ಮಾಡಲಾಗಿದೆ. ಇದು ಸಾಮಾನ್ಯರಿಗೆ ಹೊರೆಯಾದಂತೆ ಆಗಿದೆ.
ಈ ಬಗ್ಗೆ ಮಾತನಾಡಿರುವ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು, ರೈತರಿಗೂ ಈ ಮಧ್ಯೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದೇ ಸರ್ಕಾರ ಬಂದರೂ ಬೆಲೆ ಏರಿಕೆ ಆಗಿಯೇ ಆಗುತ್ತದೆ. ಯಾಕಂದ್ರೆ ಅಭಿವೃದ್ಧಿ ಕೆಲಸಗಳನ್ನು ಮಾಡುವುದಕ್ಕೆ ಹೀಗೆ ಬೆಲೆ ಏರಿಕೆ ಮಾಡಲಾಗುತ್ತದೆ ಎಂದಿದ್ದಾರೆ.
ಇನ್ನು ಇದೆ ವೇಳೆ ರೈತರ ಬಗ್ಗೆಯೂ ಮಾತನಾಡಿ, ರೈತರಿಗೆ ಕೊಡುವ ಸಬ್ಸಿಡಿ ಹಾಗೂ ಅನುದಾನದಲ್ಲೂ ಏರಿಕೆಯಾಗಯತ್ತದೆ ಎಂದು ಹೇಳಿದ್ದಾರೆ. ಅವೈಜ್ಞಾನಿಕವಾಗಿ ಬೆಲೆ ಏರಿಕೆ ಮಾಡಿದರೆ ತಪ್ಪು ಎಂದು ಹೇಳಬಹುದು. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುದಾನ ಕೂಡ ಕೊಟ್ಟಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ದರ ಕಡಿಮೆ ಇದೆ. ಹಾಲನ್ನು ಹೆಚ್ಚಳ ಮಾಡಿರುವ ಕಾರಣ ದರವನ್ನು ಹೆಚ್ಚಳ ಮಾಡಲಾಗಿದೆ ಎಂದಿದ್ದಾರೆ.
ಇದೇ ವೇಳೆ ರಾಹುಲ್ ಗಾಂಧಿ ಅವರುಗೆ ಕಾಣಿಕೆ ನೀಡಲು ದರ ಏರಿಕೆ ಮಾಡಿದ್ದಾರೆ ಎಂಬ ವಿಪಕ್ಷಗಳ ಆರೋಪದ ಬಗ್ಗೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿಯೂ ಆಡಳಿತ ಮಾಡಿದೆ. ಆಗ ಎಷ್ಟು ಕೋಟಿ ಕೊಟ್ಟಿದೆ..? ಬಿಜೆಪಿ ಅಧಿಕಾರದಲ್ಲಿದ್ದಾಗ ಯಡಿಯೂರಪ್ಪ ಎಷ್ಡು ಕೋಟಿ ಕೊಟ್ಟಿದ್ದಾರೆ. ಆದರೆ ನಾವೂ ಆ ರೀತಿ ಮಾಡಿಲ್ಲ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











