Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅಡಿಕೆ ಮತ್ತು ಕೊಬ್ಬರಿ ಬೆಲೆಯಲ್ಲಿ ಏರಿಕೆ ; ರೈತರಲ್ಲಿ ಮೂಡಿದ ಸಂತಸ

---Advertisement---

ಅಡಿಕೆ ಬೆಳೆಗಾರರು ತಮ್ಮ ಅಡಿಕೆ ಬೆಳೆಯನ್ನು ಸಾಕಷ್ಟು ಕಷ್ಟಪಟ್ಟು ಉಳಿಸಿಕೊಂಡಿರುತ್ತಾರೆ. ರೋಗಗಳಿಂದ ಅಡಿಕೆಯನ್ನ ಕಾಪಾಡಿಕೊಳ್ಳಬೇಕು, ಮಳೆ ಇಲ್ಲದೆ ಒಣಗಿದಾಗ ಅವುಗಳನ್ನ ಕಾಪಾಡಬೇಕು. ಇಷ್ಟೆಲ್ಲಾ ಕಾಳಜಿ ಮಾಡಿ ಬೆಳೆ ನೋಡಿಕೊಂಡರು ಕೆಲವೊಮ್ಮೆ ಅಡಿಕೆ ಬೆಲೆ ಪಾತಾಳಕ್ಕೆ ಕುಸಿದು ಬಿಡುತ್ತದೆ. ಸದ್ಯ ಅಡಿಕೆ ಹಾಗೂ ಕೊಬ್ಬರಿ ಬೆಳೆಗಾರರಿಗೆ ಸಂತಸಕರ ದಿನ ಬಂದಿದೆ. ಅದುವೇ ಬೆಲೆ ಏರಿಕೆಯಾಗಿದ್ದು, ಮುಂದೆ ಇನ್ನು ಜಾಸ್ತಿಯಾಗುವ ನಿರೀಕ್ಷೆ ಇದೆ.

ಸದ್ಯ ಅಡಿಕೆ ಧಾರಣೆಯನ್ನು ನೋಡುವುದಾದರೆ, ಶಿವಮೊಗ್ಗದಲ್ಲಿ ರಾಶಿ ಅಡಿಕೆ ಬೆಲೆ ಕ್ವಿಂಟಲ್ ಗೆ ಕನಿಷ್ಠ 40,689 ಇದ್ದರೆ ಗರಿಷ್ಠ ಬೆಲೆ 54,900 ರೂಪಾಯಿಗೆ ಮಾರಾಟವಾಗಿದೆ. ಗೊರಬಲುವಾಡಿಕೆ ಬೆಲೆ ಕ್ವಿಂಟಾಲ್ ಗೆ 22,309 ರೂಪಾಯಿಯಂತೆ ಮಾರಾಟವಾಗಿದೆ‌. ಯಲ್ಲಾಪುರ ಅಡಿಕೆ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಅಡಿಕೆ ಕನಿಷ್ಠ 40,689 ರೂಪಾಯಿ ಇದ್ದು, ಗರಿಷ್ಠ 54,900 ರೂಪಾಯಿಗೆ ಮಾರಾಟವಾಗಿದೆ. ಇನ್ನು ಸಿದ್ದಾಪುರದಲ್ಲಿ ತಟ್ಟಿಬೆಟ್ಟೆ ಅಡಿಕೆ ಗರಿಷ್ಠ 36,119 ರೂಪಾಯಿಗೆ ಮಾರಾಟವಾಗಿದೆ. ರಾಶಿ ಅಡಿಕೆ 47,299 ರೂಪಾಯಿಗೆ ಹೋಗಿದೆ. ಇದು ಅಡಿಕೆ ಬೆಳೆಗಾರರಿಗೆ ಖುಷಿ ಕೊಟ್ಟಿದ್ದರೆ, ಕೊಬ್ಬರಿ ಶೇಖರಿಸಿದವರಿಗೂ ಸಂತಸದ ಸುದ್ದಿ ಸಿಕ್ಕಿದೆ.

ಕಳೆದ ಕೆಲವು ತಿಂಗಳಿನಿಂದ ಕೊಬ್ಬರಿ ಬೆಲೆಯಲ್ಲಿ ಇಳಿಕೆಯಾಗುತ್ತಲೆ ಇತ್ತು. ಇದರಿಂದ ರೈತ ಕೂಡ ಕಂಗಾಲಾಗಿದ್ದ. ಇದೀಗ ಕೊಭರಿ ಬೆಲೆಯಲ್ಲೂ ಏರಿಕೆಯಾಗಿದೆ. ತಿಪಟೂರು ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ಒಂದು ಕ್ವಿಂಟಾಲ್ ಗೆ ಕನಿಷ್ಠ 17 ಸಾವಿರ ರೂಪಾಯಿ ಇದ್ದರೆ ಗರಿಷ್ಠ 19 ಸಾವಿರಕ್ಕೆ ಮಾರಾಟವಾಗಿದೆ. ಹಾಗೇ ಅರಸೀಕೆರೆ ಮಾರುಕಟ್ಟೆಯಲ್ಲಿ 16 ಸಾವಿರ ರೂಪಾಯಿಗೆ ಕ್ವಿಂಟಾಲ್ ಕೊಬ್ಬರಿ ಮಾರಾಟವಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...