Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಹೊಸ ವರ್ಷಕ್ಕೆ ನಿರ್ಬಂಧ ಹೇರಲಾಗುತ್ತಾ..? ಸಚಿವರು ಹೇಳಿದ್ದೇನು..?

---Advertisement---

 

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ JN1 ಕೊರೊನಾ ವೈರಸ್ ತಳಿ ಎಲ್ಲರನ್ನು ಆತಂಕಗೊಳಿಸಿದೆ. ದಿನೇ ದಿನೇ ಪ್ರಕರಣಗಳು ಕೂಡ ಹೆಚ್ಚಾಗುತ್ತಲೇ ಇವೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಮುಂಜಾಗ್ರತ ಕ್ರಮಗಳನ್ನು ಫಾಲೋ ಮಾಡುವುದಕ್ಕೆ ಸೂಚನೆ ಕೂಡ ನೀಡಲಾಗಿದೆ. ಹೊಸ ವರ್ಷಾಚರಣೆ ಬೇರೆ ಹತ್ತಿರ ಬರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಬಹುದಾ ಎಂಬ ಪ್ರಶ್ನೆ ಕಾಡುತ್ತಿತ್ತು. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

Jn1 ತಳಿಯ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಮಾರ್ಗಸೂಚಿ ಪ್ರಕಟವಾಗಿಲ್ಲ. ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವ ಬಗ್ಗೆ ಈವರೆಗೂ ತೀರ್ಮಾನ ತೆಗೆದುಕೊಂಡಿಲ್ಲ. ಇಂದಿನ ಸಭೆಯಲ್ಲಿ ಸಮಿತಿಯ ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸುತ್ತೇವೆ. ಜನ ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಜಾರಿ ಮಾಡುತ್ತಿಲ್ಲ. ಆ ಮಟ್ಟಕ್ಕೆ ಭಯ ಪಡುವ ಅಗತ್ಯವಿಲ್ಲ. ಪಾಸಿಟಿವ್ ಬಂದವರನ್ನು ಐಸೋಲೇಟ್ ಮಾಡಲಾಗುತ್ತಿದೆ ಎಂದಿದ್ದಾರೆ.

ಕೋವಿಡ್ ಸಂಬಂಧ ರಚಿಸಲಾಗಿರುವ ಕ್ಯಾಬಿನೆಟ್ ಉಪಸಮಿತಿ ಸಭೆಯಲ್ಲಿ JN.1 ಪ್ರಕರಣಗಳು ಸೇರಿದಂತೆ, ಕೋವಿಡ್ ನಿಯಂತ್ರಣ ಹಾಗೂ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು.‌ ಸದ್ಯಕ್ಕೆ ಯಾವುದೇ ಹೊಸ ನಿರ್ಬಂಧವಿಲ್ಲ. ಈಗಾಗಲೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿಯನ್ನ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಉತ್ತಮ ಎಂಬುದು ನಮ್ಮ ಸಲಹೆ. ಇನ್ನು 60 ವರ್ಷ ಮೇಲ್ಪಟ್ಟವರು, ಇತರ ಕಾಯಿಲೆ ಹೊಂದಿದವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment