Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಆತಂಕ ಸೃಷ್ಟಿ, ಜನರಿಗೆ ಎಚ್ಚರಿಕೆ ನೀಡಿದ ಇಲಾಖೆ..!

---Advertisement---

 

ಬೆಂಗಳೂರು: ಮಳೆಗಾಲ ಶುರುವಾಯ್ತು ಎಂದರೆ ಹಲವು ರೀತಿಯ ಕಾಯಿಲೆಗಳು ಹಿಂದೆಯೇ ಹುಡುಕಿಕೊಂಡು ಬರುತ್ತವೆ. ಅದರಲ್ಲೂ ನೀರು, ಚರಂಡಿಗಳಲ್ಲಿ ಅಡಗಿದ್ದ ಸೊಳ್ಳೆಗಳಿಂದಾಗಿ ಡೆಂಗ್ಯೂ, ಮಲೇರಿಯಾ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಇದರಿಂದ ಜನ ಕೂಡ ಎಚ್ಚರಿಕೆಯಿಂದ ಇರಬೇಕಾಗುತ್ತದೆ.

ಈಗಾಗಲೇ ಬೆಂಗಳೂರು ನಗರದಲ್ಲಿ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಾ ಇದಾವೆ. ಕಳೆದ ಮೂರು ವಾರದಲ್ಲಿ ಡೆಂಗ್ಯೂ ಪ್ರಕರಣ 1,036ಕ್ಕೆ ತಲುಪಿವೆ. ಕಳೆದ ಆರು ತಿಂಗಳಿನಿಂದ ನಗರದಲ್ಲಿ ಡೆಂಗ್ಯೂ 2,447 ಪ್ರಕರಣ್ಳು ವರದಿಯಾಗಿವೆ. ಕಳೆದ ವರ್ಷ ಜೂನ್ ಅಂಕಿ ಅಂಶಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಎರಡು ಪಟ್ಟು ಜಾಸ್ತಿಯಾಗಿದೆ. ಇದು ಜನರಲ್ಲೂ ಆತಂಕ ಸೃಷ್ಟಿಸಿದೆ.

ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೂ ಡೆಂಗ್ಯೂ ಇರುವುದು ದೃಢಪಟ್ಟಿದೆ. ಫ್ರೀಡಂ ಪಾರ್ಕ್ ನಲ್ಲಿ ಕಾರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದ ಇವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿತ್ತು. ಅಲ್ಲಿಯೇ ಸೊಳ್ಳೆ ಕಚ್ಚಿರಬಹುದೆಂಬ ಅನುಮಾನ ಮೂಡಿದೆ. ಈಗಾಗಲೇ ಬೆಂಗಳೂರಿ‌ಲ್ಲಿ ಬಿಬಿಎಂಪಿ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ತೆಗೆದುಕೊಂಡಿದೆ. ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವುದಕ್ಕೆ ಸ್ಪ್ರೇ ಮಾಡಲಾಗುತ್ತಿದೆ‌. ಫಾಗಿಂಗ್ ಕೂಡ ಮಾಡುತ್ತಿದೆ.

ಜನರು ಕೂಡ ಸೊಳ್ಳೆಗಳಿಂದ ತಪ್ಪಿಸಿಕೊಳ್ಳಲು, ಡೆಂಗ್ಯೂ ಬಾರದಂತೆ ನೋಡಿಕೊಳ್ಳಲು ಸ್ವಚ್ಛತೆಯನ್ನು ಕಾಪಾಡಬೇಕಾಗಿದೆ. ನೀರು ನಿಲ್ಲದಂತೆ ನೋಡಿಕೊಳ್ಳಬೇಕಾಗುತ್ತದೆ. ಅಕ್ಕ ಪಕ್ಕ ಹಳೆ ನೀರು ನಿಂತು, ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರವಹಿಸಬೇಕಾಗುತ್ತದೆ. ಬಾಗಿಲು, ಕಿಟಕಿಗಳನ್ನು ಮುಚ್ಚುವುದು ಅಥವಾ ಪರದೆ ಬಳಕೆ ಮಾಡಿಕೊಳ್ಳುವುದು. ಹೆಚ್ಚು ರೋಗ ನಿರೋಧಕ ಆಹಾರವನ್ನು ಸೇವಿಸುವುದು. ಸೊಳ್ಳೆಗಳು ವಾಸಕ್ಕೆ ಅವಕಾಶ ಮಾಡಿಕೊಡದೆ ಇರುವುದು. ಹೀಗೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment