Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡೆಂಗ್ಯೂ ಹೆಚ್ಚಳ : ಟಾಸ್ಕ್ ಫೋರ್ಸ್ ರಚಿಸಲು ಸಿಎಂ ಸೂಚನೆ

---Advertisement---

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನೇ ದಿನೇ ಹೆಚ್ಚಳವಾಗುತ್ತಿದೆ. ಸಾವುಗಳ ಪ್ರಮಾಣವೂ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಹೀಗಾಗಿ ಸಿಎಂ ಇಂದಿನ ಸಭೆಯಲ್ಲೂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು, ಜಿಪಂಚಾಯತ್ ಸಿಇಒಗಳು ಹಾಗೂ ಡಿಹೆಚ್ಒಗಳಿಗೆ ಡರಂಗ್ಯೂ ಹರಡದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಡೆಂಗ್ಯೂ ತಡೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಬೇಕೆಂದು ತಿಳಿಸಿದ್ದಾರೆ.

ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ ಹೈ ಅಲರ್ಟ್ ಆಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬರಬೇಕಿದೆ. ಏನು ಮಾಡಬೇಕು, ಎಷ್ಟು ಹಣದ ಅಗತ್ಯವಿದೆ ತಿಳಿಸಿ. ತಕ್ಷಣ ಹಣ ಬಿಡುಗಡರಯಾಗುತ್ತದೆ. ಆದರೆ ಡೆಂಗ್ಯೂ ನಿಯಂತ್ರಣಕ್ಕೆ ಬರಬೇಕು. ಹರಡದಂತೆ ನೋಡಿಕೊಳ್ಳಬೇಕು. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯಮ್ನು ಘೋಷಿಸುವ ಅಗತ್ಯವಿಲ್ಲ ಎಂದು ಆರೋಗ್ಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲೂ ಡೆಂಗ್ಯೂ ಪ್ರಕರಣಗಳನ್ನು ತಡೆಯಲು ವಿಶೇಷ ವಾರ್ಡ್ ರಚಿಸಬೇಕು. ಮೆಡಿಕಲ್ ಕಾಲೇಜುಗಳಲ್ಲಿಯೂ ಚಿಕಿತ್ಸೆಯ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ವ್ಯವಸ್ಥೆ ಕಲ್ಪಿಸಬೇಕು.

ಡೆಂಗ್ಯೂ ಪಾಸಿಟಿವ್ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು. ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು. ಪ್ರಸ್ತುತ ಸಾಲಿನಲ್ಲಿ 215 ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲು ಅನುಮೋದನೆ ನೀಡಲಾಗಿದೆ. 42 ಕಡೆಗಳಲ್ಲಿ ಕಟ್ಟಡ ಗುರುತಿಸಲಾಗಿದೆ. ಈಗಾಗಲೇ 503 ನಮ್ಮ ಕ್ಲಿನಿಕ್ ಗಳು ಕಾರ್ಯ ನಿರ್ವಹಿಸುತ್ತಿವೆ. ನಮ್ಮ ಕ್ಲಿನಿಕ್ ಗಳಲ್ಲಿ ಲಭ್ಯವಿರುವ ಮಾಹಿತಿಯನ್ನು ಪ್ರಚುರ ಪಡಿಸುವ ಕೆಲಸವಾಗಬೇಕು ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...