ಅಡಿಕೆಧಾರಣೆ ಹೆಚ್ಚಳ : ರೈತರಲ್ಲಿ ಸಂತಸ

 

ಶಿವಮೊಗ್ಗ: ಅಡಿಕೆ ಬೆಳೆಯಿಂದ ಒಳ್ಳೆ ಲಾಭವೇನೋ ಬರುತ್ತೆ. ಆದರೆ ಅದನ್ನ ಯಾವುದೇ ರೋಗ ಬರದಂತೆ ಕಾಪಾಡುವುದೇ ದೊಡ್ಡ ಸವಾಲಿನ ಕೆಲಸ. ಮಲೆನಾಡಿನ ಭಾಗದ ಹೆಚ್ವಿನ ರೈತರು ಅಡಿಕೆ ಬೆಳೆಯನ್ನೇ ನಂಬಿಕೊಂಡಿದ್ದಾರೆ. ಆದರೆ ಕಳೆದ ಕೆಲವು ದಿನಗಳಿಂದ ಅಡಿಕೆಗೆ ಕೊಳೆ ರೋಗ, ಎಲೆ ಚುಕ್ಕಿ ರೋಗ ಬಂದಿತ್ತು. ಇದರಿಂದ ಕಂಗೆಟ್ಟಿದ್ದ ರೈತರು ಇದೀಗ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಹೆಚ್ಚಾಗಿದೆ.

ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾದ ಪರಿಣಾಮ ಅಡಿಕೆ ಬೆಳೆಯ ಫಸಲು ನಿರೀಕ್ಷಿಸಿದ ಮಟ್ಟಿಗೆ ರೈತರ ಕೈ ಸೇರಲಿಲ್ಲ. ಈ ಕಾರಣದಿಂದಾನೇ ಮಾರುಕಟ್ಟೆಗೂ ಅಡಿಕೆ ಕೊರತೆ ಎದುರಾಗಿತ್ತು. ಆದ್ದರಿಂದ ವಿವಿಧ ಮಾದರಿಯ ಕ್ವಿಂಟಾಲ್ ಅಡಿಕೆ ಧಾರಣೆ 50-62 ಸಾವಿರ ರೂಪಾಯಿ ತನಕ ಇದ್ದು ರೈತರು ಸಂತಸಗೊಂಡಿದ್ದಾರೆ. ಆದರೆ ಮಲೆನಾಡು ಭಾಗದಲ್ಲಿ ರೈತರು ಫಸಲಿನ ಕೊರತೆ ಎದುರಿಸುತ್ತಿದ್ದು, ದರ ಹೆಚ್ಚಿದ್ದರೂ ಮಾರಾಟ ಮಾಡುವುದಕ್ಕೆ ಅಡಿಕೆ ಲಭ್ಯವಿಲ್ಲ. ಇಂದಿನ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆ ಹೀಗಿದೆ ನೋಡಿ.

ಶಿವಮೊಗ್ಗದ ಅಡಿಕೆ ಧಾರಣೆ ಬೆಟ್ಟೆ ಅಡಿಕೆ 45,699-55,399 ರೂಪಾಯಿ ಇದೆ. ಗೊರಬಲು ಅಡಿಕೆ 18,100-26,009 ರೂಪಾಯಿ ಇದೆ ಮತ್ತು ಸರಕು 52,999-62,100 ರೂಪಾಯಿ ತನಕ ಇದೆ. ಮಲೆನಾಡು ಭಾಗದಲ್ಲು ಮೂರನೇ ಹಂತದ ಕೊಯ್ಲು ಅಂತಿಮ ಹಂತದಲ್ಲಿದೆ. ಇನ್ನು 15 ದಿನಗಳಲ್ಲಿ ಕೊಯ್ಲು ಸಂಪೂರ್ಣವಾಗಿ ಮುಗಿದು ಹೋಗುತ್ತದೆ. ಈ ಬಾರಿ ಮಲೆನಾಡು ಭಾಗದಲ್ಲಿ ಮಾತ್ರವಲ್ಲ ಬಯಲು ಸೀಮೆಯಲ್ಲೂ ಅಡಿಕೆ ಧಾರಣೆ ಕಡಿಮೆಯಾಗಿದೆ. ಹೀಗಾಗಿ ಅಡಿಕೆ ಧಾರಣೆ ಒಂದೇ ರೀತಿಯಲ್ಲಿ ಇದೆ. ಇದು ರೈತರಿಗೆ ನೆಮ್ಮದಿಯನ್ನೇ ತಂದಿದೆ. ಫಸಲು ಕಡಿಮೆ ಎಂದು ಬೇಸರ ಮಾಡಿಕೊಂಡಿದ್ದ ರೈತರಿಗೆ ಅಡಿಕೆ ಧಾರಣೆ‌ಕೊಂಚ ಸಮಾಧಾನ ತಂದಿದೆ.

suddionenews

Recent Posts

ಗೋಮಾತೆಯನ್ನು ಕಡಿದವರ ಕೈ ಕಡಿಯುವ ಶಪಥ ಮಾಡಿದ ಕೆ.ಎಸ್.ಈಶ್ವರಪ್ಪ

ವಿಜಯಪುರ: ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಮಾಡಿದ್ದು, ಈ ವೇಳೆ ತಮ್ಮ ಭಾಷಣದಲ್ಲಿ ಧರ್ಮ, ದೇಶದ ಬಗ್ಗೆ ಕೆ.ಎಸ್.ಈಶ್ವರಪ್ಪ ಮಾತನಾಡಿದ್ದಾರೆ. ಜೀವನದಲ್ಲಿ…

2 hours ago

ಮಹಾಕುಂಭಮೇಳ : ಉತ್ತರ ಪ್ರದೇಶ ಸಿಎಂ ಭೇಟಿಯಾದ ವಚನಾನಂದ ಶ್ರೀಗಳು

ಪ್ರಯಾಗ್ ರಾಜ್: 144 ವರ್ಷಗಳಿಗೊಮ್ಮೆ ಬರುವ ಮಹಾ ಕುಂಭಮೇಳವನ್ನು ಕಣ್ತುಂಬಿಕೊಳ್ಳುವುದಕ್ಕೆ ದೇಶದ ಜನ ಪ್ರಯಾಗ್ ರಾಜ್ ಗೆ ಭೇಟಿ ನೀಡುತ್ತಾ…

3 hours ago

ಸವಿತಾ ಸಮಾಜವನ್ನು ಪರಿಶಿಷ್ಟ ಜಾತಿಗಳ ಪಟ್ಟಿ ಸೇರಿಸಬೇಕು : ಎನ್.ಡಿ.ಕುಮಾರ್

ಚಿತ್ರದುರ್ಗ. ಫೆ.04 : ಸವಿತಾ ಸಮಾಜ ಬಾಂಧವರು ಶ್ರಮ ಹಾಗೂ ಕಾಯಕ ಜೀವಿಗಳಾಗಿದ್ದಾರೆ. ಆಧುನಿಕ ಯುಗದಲ್ಲಿ ಪ್ರತಿಯೊಬ್ಬರೂ ಸುಂದರವಾಗಿ ಕಾಣುತ್ತಿದ್ದಾರೆ…

4 hours ago

ಶುರುವಾದ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಜಾತ್ರೆ : ಫೆಬ್ರವರಿ 13 ರಂದು ಬ್ರಹ್ಮ ರಥೋತ್ಸವ

  ಹಿರಿಯೂರು : ನಗರದ ದಕ್ಷಿಣ ಕಾಶಿಯೆಂದು ಹೆಸರಾಗಿರುವ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವದ ಜಾತ್ರೆ ನಿನ್ನೆಯಿಂದ (ಫೆಬ್ರವರಿ.…

5 hours ago

ಫೆ. 7 ರಿಂದ ಅಚ್ಚುಕಟ್ಟು ಪ್ರದೇಶಕ್ಕೆ ವಿವಿ ಸಾಗರ ನೀರು

ಹಿರಿಯೂರು: ತಾಲ್ಲೂಕಿನ ವಾಣಿ ವಿಲಾಸ ಜಲಾಶಯದಿಂದ ರೈತರ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಿ ಎಂದು ರೈತರ ಒತ್ತಾಯದ ಮೇರೆಗೆ ಸಚಿವ…

5 hours ago

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 04 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಮಂಗಳವಾರ, ಫೆಬ್ರವರಿ. 04 ) ಹತ್ತಿ ಮಾರುಕಟ್ಟೆ ಇದ್ದು,…

6 hours ago