Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

SC, ST ಮೀಸಲಾತಿ ಹೆಚ್ಚಳ: ಕಾಂಗ್ರೆಸ್ ಬದ್ಧತೆಗೆ ಸಲ್ಲುವ ಶ್ರೇಯಸ್ಸು : ಹೆಚ್.ಸಿ. ಮಹದೇವಪ್ಪ

Facebook
Twitter
Telegram
WhatsApp

ಬೆಂಗಳೂರು: ಇಂದು ಸರ್ವ ಪಕ್ಷಗಳ ಸಭೆಯಲ್ಲಿ SC/ST ಮೀಸಲಾತಿ ಹೆಚ್ಚಳದ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಟ್ವೀಟ್ ಮಾಡಿ, ಸ್ವಾಗತಿಸಿದ್ದಾರೆ.

SC ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 15 ರಿಂದ ಶೇ 17 ಕ್ಕೆ ಹಾಗೂ ST ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ನಿರ್ಧರಿಸಿರುವ ಸರ್ವಪಕ್ಷ ಸಭೆಯ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ.

ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿದ್ದಾಗ SC/ST ಸಮುದಾಯದ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂಬ ಕಾರಣಕ್ಕಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಯಿತು.

terms of reference ಅನ್ನು ಹಾಕಿದ ನಂತರದಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಇಡೀ ರಾಜ್ಯವನ್ನು ಪ್ರವಾಸ ಮಾಡಿ, ವಸ್ತು ನಿಷ್ಠವಾದ ವರದಿಯನ್ನು ಸಿದ್ದಪಡಿಸಿ ಅದನ್ನು ಸರ್ಕಾರಕ್ಕೆ ಸಲ್ಲಿಸಿದರು. ನಂತರ ಈ ವರದಿಯನ್ನು ಮತ್ತೊಮ್ಮೆ ಕೂಲಂಕುಷವಾಗಿ ವಿಶ್ಲೇಷಣೆ ಮಾಡಿ ಅದನ್ನು ಜಾರಿಗೊಳಿಸುವ ಹೊತ್ತಿಗೆ ಸರ್ಕಾರ ಬದಲಾಯಿತು.

ಆದರೆ ಇದೀಗ ನಮ್ಮ ಸರ್ಕಾರದ ಅವಧಿಯಲ್ಲಿ ಬಹಳಷ್ಟು ಕಾಳಜಿ ವಹಿಸಿ ಸಿದ್ದಪಡಿಸಲಾದ ನಾಗಮೋಹನ್ ದಾಸ್ ಅವರ ವರದಿಯನ್ನು ಆಧರಿಸಿ SC/ ST ಮೀಸಲಾತಿಯನ್ನು ಹೆಚ್ಚಳ ಮಾಡುವುದಕ್ಕೆ ಸರ್ವಪಕ್ಷಗಳ ಸಭೆಯಲ್ಲಿ ಸಮ್ಮತಿ ದೊರೆತಿರುವುದು ನಿಜಕ್ಕೂ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದ ಕಾಂಗ್ರೆಸ್ ನ ಬದ್ಧತೆಗೆ ಸಲ್ಲುವಂತಹ ಶ್ರೇಯವಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!