Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಜೆಟ್ ನಲ್ಲಿ ಮದ್ಯದ ಬೆಲೆ ಹೆಚ್ಚಳ..!

Facebook
Twitter
Telegram
WhatsApp

 

 

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅವರು 15ನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬಸವಾದಿ ಶರಣ ಕಾಯಕ, ದಾಸೋಹ ತತ್ವ ನಮಗೆ ಪ್ರೇರಣೆ ಎಂದು ಹೇಳುವ ಮೂಲಕ ಸದನದಲ್ಲಿ ಬಜೆಟ್ ಮಂಡನೆ ಮಾಡಿದ್ದಾರೆ. ಆರಂಭದಲ್ಲಿ ಡಾ.ರಾಜ್‍ಕುಮಾರ್ ಅವರ ಆಗದು ಎಂದು ಕೈ ಕಟ್ಟಿ ಕುಳಿತರೆ ಹಾಡು ಹಾಡುವ ಮೂಲಕ ಬಜೆಟ್ ಘೋಷಣೆ ಶುರು ಮಾಡಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ 3,71,383 ಕೋಟಿಯಾಗಿದೆ.

ಮದ್ಯ ಪ್ರಿಯರಿಗೆ ಈ ಬಾರಿಯ ಬಜೆಟ್ ನಲ್ಲೂ ಶಾಕ್ ನೀಡಲಾಗಿದೆ. ಮದ್ಯದ ಬೆಲೆಯನ್ನು ಈ ಬಾರಿಯೂ ಹೆಚ್ಚಳ ಮಾಡಲಾಗಿದೆ. ಇದು ಎರಡನೇ ಬಾರಿಗೆ ಮದ್ಯದ ಬೆಲೆ ಹೆಚ್ಚಳವಾಗಿದ್ದು, ಮದ್ಯ ಪ್ರಿಯರಿಗೆ ಬೇಸರ ತರಿಸಿದೆ.

ಮದ್ಯದ ದರ ಹೆಚ್ಚಿಸಲು ಸರ್ಕಾರ ನಿರ್ಧಾರ ಮಾಡಿದ್ದು, 2024-26ರ ಬಜೆಟ್ ಮಂಡನೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡಲಾಗಿದೆ. ಸರ್ಕಾರ ಈಗಾಗಲೇ ಎರಡು ಬಾರಿ ಮದ್ಯದ ದರ ಏರಿಕೆ ಮಾಡಿದ್ದು, ಈಗ ಮತ್ತೆ ಹೆಚ್ಚಳ ಮಾಡಿದೆ. ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಇನ್ನು ಅಬಕಾರಿ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣ ಮಾಡಲು ನಿರ್ಧಾರ ಮಾಡಲಾಗಿದೆ.

2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ ಅವಕಾರಿ ತೆರಿಗೆಯಿಂದ 28,181 ಕೋಟಿ ಸ್ವೀಕಾರವಾಗಿದೆ. 2024-25 ರ ಸಾಲಿಗೆ 38,525 ಕೋಟಿ ರಾಜಸ್ವ ಸಂಗ್ರಹಣೆಯ ಗುರಿಯನ್ನು ಹೊಂದಿದೆ. ಹೀಗಾಗಿ ಮದ್ಯದ ದರ ಹೆಚ್ಚಳ ಮಾಡುವ ನಿರ್ಧಾರ ಮಾಡಿದೆ ರಾಜ್ಯ ಸರ್ಕಾರ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

error: Content is protected !!