Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ಚಿನ್ನದ ಬೆಲೆಯಲ್ಲಿ ಹೆಚ್ಚಳ : ಏರಿಕೆಯಾಗಿದ್ದು ಎಷ್ಟು..?

---Advertisement---

ಬೆಂಗಳೂರು: ಚಿನ್ನ ಬೆಳ್ಳಿ ಬೆಲೆ ಮತ್ತೆ ಏರಿಕೆಯತ್ತಲೇ ಮುಖ ಮಾಡಿದೆ. ಗುರುವಾರವಷ್ಟೇ ಗ್ರಾಂಗೆ ಹತ್ತು ರೂಪಾಯಿ ಏರಿಕೆಯಾಗಿತ್ತು. ಈಗ ಮತ್ತೆ ಇಂದು ಒಂದು ರೂಪಾಯಿ ಏರಿಕೆಯಾಗಿದೆ. ಈ ವಾರಪೂರ್ತಿ ಚಿನ್ನದ ಬೆಲೆಯಲ್ಲಿ ಏರಿಕೆಯತ್ತಲೇ ಮುಖ ಮಾಡುತ್ತಿದೆ. ಬೆಳ್ಳಿ ಬೆಲೆಯಲ್ಲೂ ಕಡಿಮೆ ಏನು ಇಲ್ಲ. ಏರಿಕೆಯನ್ನೇ ಕಂಡಿದೆ‌. ಇಂದು ಹತ್ತು ಪೈಸೆಯಷ್ಟು ಏರಿಕೆಯಾಗಿದೆ.

ಹಾಗಾದ್ರೆ ಇಂದು ಬೆಂಗಳೂರು ನಗರದಲ್ಲಿ ಚಿನ್ನದ ಬೆಲೆ ಎಷ್ಡಿದೆ ಎಂಬುದನ್ನು ನೋಡೋಣಾ:
22 ಕ್ಯಾರಟ್ ನ ಹತ್ತು ಗ್ರಾಂ ಚಿನ್ನದ ಬೆಲೆ ಈಗ 71,410 ರೂಪಾಯಿ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 77,900 ರೂಪಾಯಿ ಆಗಿದೆ‌ 100 ಗ್ರಾಂ ಬೆಳ್ಳಿ ಬೆಲೆ 9,210 ರೂಪಾಯಿ ಆಗಿದೆ.

ಇನ್ನು ಭಾರತದ ಬೇರೆ ಬೇರೆ ನಗರದಲ್ಲಿ ಚಿನ್ನ ಬೆಳ್ಳಿ ಬೆಲೆ ಎಷ್ಟಿದೆ ಎಂಬುದನ್ನು ನೋಡುವುದಾದರೆ:
ಬೆಂಗಳೂರು, ಚೆನ್ನೈ, ಮುಂಬೈ, ಕೊಲ್ಕತ್ತಾ, ಕೇರಳ, ಭುವನೇಶ್ವರ ನಗರದಲ್ಲಿ ಹತ್ತು ಗ್ರಾಂ ಚಿನ್ನದ ದರ 71,410 ರೂಪಾಯಿ ಇದೆ. ದೆಹಲಿ, ಅಹ್ಮದಾಬಾದ್, ಜೈಪುರ, ಲಕ್ನೋ ನಗರ ಭಾಗದಲ್ಲಿ ದರ ಏರಿಳಿತವಾಗಿದೆ. ಬೆಳ್ಳಿ ಬೆಲೆಯಲ್ಲಿ 100 ಗ್ರಾಂಗೆ ಬೆಂಗಳೂರು, ಮುಂಬೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋದಲ್ಲಿ 9,21೦ ರೂಪಾಯಿ ಇದೆ. ಉಳಿದಂತೆ ಚೆನ್ನೈ, ಭುವನೇಶ್ವರ, ಜೇರಳದಲ್ಲಿ ಬೆಳ್ಳಿ ಬೆಲೆ 10,110 ರೂಪಾಯಿ ಇದೆ. ವಿದೇಶಗಳಲ್ಲಿ ಚಿನ್ನದ ಬೆಲೆ ಕೊಂಚ ಕಡಿಮೆ ಇದೆ. ಮಲೇಷ್ಯಾ 69,500, ದುಬೈ 68,470, ಅಮೆರಿಕಾ 66,050, ಸಿಂಗಾಪುರ 68,670 ರೂಪಾಯಿ ಇದೆ. ಆದರೆ ಭಾರತದಲ್ಲಿರುವವರು ವಿದೇಶದಿಂದ ಹೆಚ್ಚಿನ ಮಟ್ಟಕ್ಕೆ ಚಿನ್ನವನ್ನು ಖರೀದಿ ಮಾಡಿಕೊಂಡು ಬರುವುದಕ್ಕೆ ಆಗಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment