Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೇದಾವತಿ ನದಿ ಹರಿವಿನಲ್ಲಿ ಹೆಚ್ಚಳ: ನದಿ ಪಾತ್ರದ ಜನರು ಎಚ್ಚರಿಕೆ ವಹಿಸಲು ಸೂಚನೆ

Facebook
Twitter
Telegram
WhatsApp

ಚಿತ್ರದುರ್ಗ,(ಅಕ್ಟೋಬರ್ 20) :  ಕಳೆದ ಎರಡು ವಾರಗಳಿಂದ ವಾಣಿ ವಿಲಾಸ ಸಾಗರ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ.  ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಅಕ್ಟೋಬರ್ 20 ರಂದು ವಿ.ವಿ.ಸಾಗರ ನೀರಿನ ಮಟ್ಟ 133,50 ಅಡಿಗೆ ಮುಟ್ಟಿದೆ. ಸದ್ಯ 10,452 ಕ್ಯೂಸೆಕ್ಸ್ ನೀರಿನ ಒಳಹರಿವಿದೆ.  7862 ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ.  ಈ ಪ್ರಮಾಣ ಇನ್ನೂ ಹೆಚ್ಚಾಗುವ ಮುನ್ಸೂಚನೆಯಿದೆ. ವೇದಾವತಿ ನದಿ ಪಾತ್ರದ ಮೂಲಕ ಹೆಚ್ಚಿನ ನೀರು ಹರಿಯುತ್ತಿದೆ.

ಹಿರಿಯೂರು ಮತ್ತು ಚಳ್ಳಕೆರೆ ತಾಲ್ಲೂಕಿನಲ್ಲಿ ನದಿ ಇಕ್ಕೆಲಗಳಲ್ಲಿ ಬರುವ ಗ್ರಾಮಗಳಾದ ವಾಣಿವಿಲಾಸಪುರ, ಅರಮನೆಹಟ್ಟಿ, ಕುರುಬರಹಳ್ಳಿ, ಅಮ್ಮನಹಟ್ಟಿ, ಕಾತ್ರಿಕೇನಹಳ್ಳಿ , ಹೊಸ ಕಾತ್ರಿಕೇನಹಳ್ಳಿ,  ಕೂನಿಕೆರೆ, ಲಕ್ಕವ್ವನಹಳ್ಳಿ , ಹಿರಿಯೂರು, ಮಾರುತಿನಗರ, ರಂಗನಾಥಪುರ, ಉಪ್ಪಳಗೆರೆ, ಟಿ.ನಾಗೇನಹಳ್ಳಿ , ಯಳನಾಡು , ಕೊಡ್ಲಹಳ್ಳಿ , ಲಂಬಾಣಿಹಟ್ಟಿ, ಬ್ಯಾಡರಹಳ್ಳಿ ದೇವರಕೊಟ್ಟ, ತೊರೆ ಓಬೇನಹಳ್ಲಿ, ಕಂಬತ್ತನಹಳ್ಳಿ ,ಬಿ ದರಕೆರೆ, ಸಂಗೇನಹಳ್ಳಿ, ಶಿಡ್ಲಯ್ಯನಕೋಟೆ ಜನರು ಆಸ್ತಿ ಪಾಸ್ತಿ ಸಂರಕ್ಷಣೆ ಹಾಗೂ ಜಾನುವಾರುಗಳ ಸಂರಕ್ಷಣೆಗೆ ಎಚ್ಚರಿಕೆ ವಹಿಸುವಂತೆ ಹಾಗೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಬೇಕು.

ಜಲಾಶಯದ ಕೋಡಿಯಿಂದ ಹೊರ ಬರುವ ಹೆಚ್ಚಿನ ಪ್ರಮಾಣದ ನೀರು ಹೊಸದುರ್ಗ ರಸ್ತೆಯ ಮೇಲೆ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ.  ಭಾಗಶಃ ಉಳಿದ ಹೊಸದುರ್ಗ ಡಾಂಬರ್ ರಸ್ತೆ ಯಾವುದೇ ಕ್ಷಣದಲ್ಲಿ ಕೊಚ್ಚಿಕೊಂಡು ಹೋಗುವ ಸಂಭವವಿದೆ. ಆದುದರಿಂದ ಮಾರಿಕಣಿವೆ ಕಡೆಯಿಂದ ಹಾಗೂ ಹಾರನಕಣಿವೆ ಕಡೆಯಿಂದಾಗಲಿ ಸಾರ್ವಜನಿಕರು ಮುಳ್ಳು ತಂತಿ ಬೇಲಿ ದಾಟದೇ ನೀರಿಗೆ ಇಳಿಯಬಾರದು. ವಿ.ವಿ.ಸಾಗರ ಜಲಾಶಯ ಮತ್ತು ವಿ.ವಿ.ಪುರ ನಡುವೆನ ಲೋಕೋಪಯೋಗಿ ಇಲಾಖೆಯ ಸಂಪರ್ಕ ಸೇತುವೆ ಮೇಲೆ  ದೊಡ್ಡ ಗುಂಡಿಗಳು ಬಿದ್ದುವೆ. ಸೇತುವೆ ದುರಸ್ಥಿಯಲ್ಲಿದೆ. ತಾತ್ಕಲಿಕವಾಗಿ ಸೇತುವೆ ಮೇಲೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಇವುಗಳಿಂದಾಗಿ ವಿ.ವಿ.ಸಾಗರ ಜಲಾಶಯಕ್ಕೆ ಬರುವ ಪ್ರವಾಸಿಗರು ಮುನ್ನೆಚ್ಚರಿಕೆ ವಹಿಸುವಂತೆ ವಿಶ್ವೇಶ್ವರಯ್ಯ ಜಲ ನಿಗಮದ ವಿ.ವಿ. ಸಾಗರ ಉಪವಿಭಾಗದ  ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!