Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೆಚ್ಚಾದ ಡಿವೋರ್ಸ್ : ದೇವಸ್ಥಾನಗಳಲ್ಲಿ ಮದುವೆ ಮಾಡಿಸದೆ ಇರಲು ಅರ್ಚಕರ ನಿರ್ಧಾರ..!

---Advertisement---

 

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮದುವೆಗಿಂತ ಡಿವೋರ್ಸ್ ಸಂಖ್ಯೆಯೇ ಹೆಚ್ಚಾಗ್ತಾ ಇದೆ. ಹೀಗಾಗಿಯೇ ದೇವಸ್ಥಾನದ ಅರ್ಚಕರು ಮದುವೆ ಮಾಡಿಸಬಾರದೆಂದು ನಿರ್ಧಾರ ಮಾಡಿದ್ದಾರೆ.‌ ಯಾಕಂದ್ರೆ ಡಿವೋರ್ಸ್ ಗೆ ಅಂತ ಜೋಡಿಗಳು ಕೋರ್ಟ್ ಗೆ ಹೋದ್ರೆ ಮದುವೆ ಮಾಡಿಸಿದ ಅರ್ಚಕರನ್ನು ಸಾಕ್ಷಿಗಾಗಿ ಕರೆಯುತ್ತಿದ್ದಾರೆ. ಇದರಿಂದ ನೊಂದಿರುವ ಅರ್ಚಕರು ದೇವಸ್ಥಾನಗಳಲ್ಲಿ ಇನ್ಮುಂದೆ ಮದುವೆ ಬೇಡ ಎಂದೇ ನಿರ್ಧಾರ ಮಾಡಿದ್ದಾರೆ.

ಬೆಂಗಳೂರಿನ ಬಹುತೇಕ ದೇವಸ್ಥಾನಗಳಲ್ಲಿ ಮದುವೆ ಮಾಡಿಸುವುದನ್ನು ನಿಲ್ಲಿಸಲಾಗಿದೆ. ಸೋಮೇಶ್ಚರ ದೇವಸ್ಥಾನ ಸೇರಿದಂತೆ ರಾಜ್ಯದ ಮುಜರಾಯಿ ಇಲಾಖೆಯಡಿ ಬರುವ ದೇವಸ್ಥಾನಗಳಲ್ಲಿ ಮದುವೆಗಳನ್ನು ನಿಲ್ಲಿಸಲಾಗಿದೆ. ಪ್ರಸ್ತುತ, ತಹಶಿಲ್ದಾರ್ ಸಮ್ಮುಖದಲ್ಲಿ ನೋಂದಣಿ ಬಳಿಕ ಹಾರ ಬದಲಾವಣೆಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಈ ಹಿನ್ನೆಲೆ ಅರ್ಚಕರೊಬ್ಬರು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಬಳಿ ಮನವಿ ಮಾಡಿಕೊಂಡಿದ್ದು, ದೇವಸ್ಥಾನದಲ್ಲಿ ಮದುವೆಯಾದ ದಂಪತಿ ವಿಚ್ಛೇಧನ ಅಥವಾ ಇತರೆ ಗಂಭೀರ ಸಮಸ್ಯೆಗಳಿಗೆ ಒಳಗಾದಾಗ ಮದುವೆ ಮಾಡಿಸಿದ ಅರ್ಚಕರನ್ನು ಕೋರ್ಟಚ ಮೆಟ್ಟಿಲೇರಿಸುತ್ತಾರೆ. ಆದರೆ ವಿವಿದೆಡೆಯ ಹಲವು ಭಕ್ತಾಧಿಗಳು ಇದೇ ದೇವಸ್ಥಾನದಲ್ಲಿ ಮದುವೆಯಾಗುವ ಹರಕೆ ಹೊತ್ತಿರುತ್ತಾರೆ. ಹೀಗಾಗಿ ಅರ್ಚಕರಿಗೆ ತೊಂದರೆಯಾಗದಂತೆ ಮುಜರಾಯಿ ಇಲಾಖೆ ಕೆಲ ಷರತ್ತುಗಳನ್ನು ವಿಧಿಸಿ, ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಒಪ್ಪಿಗೆ ನೀಡಬೇಕೆಂದು ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಡಿವೋರ್ಸಗ ಹೆಚ್ಚಾಗಿರೋದು ಪಾಪ ಅರ್ಚಕರಿಗೆ ಎಂಥಾ ಪರಿಸ್ಥಿತಿಯನ್ನ ತಂದೊಡ್ಡಿದೆ ಎಂಬುದು ಈ ಮನವಿಯಿಂದಾನೇ ತಿಳಿಯುತ್ತಿದೆ. ಎಷ್ಟೋ ಪ್ರೇಮಿಗಳಿಗೆ ಇದು ಸಂಕಷ್ಟಕ್ಕೆ ದೂಡಿದಂತ ನಿರ್ಧಾರವಾಗಿದೆ. ಮನೆಯವರು ಒಪ್ಪದೆ ಇದ್ದಾಗ ಆತ್ಮೀಯರ ಜೊತೆಗೆ ಬಂದು, ದೇವರ ಸನ್ನಿಧಿಯಲ್ಲಿ ಮದುವೆಯಾಗುವುದು ಪ್ರತೀತಿ. ಆದರೆ ಇನ್ಮುಂದೆ ಅದಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now