Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಣಿ ವಿಲಾಸ ಜಲಾಶಯಕ್ಕೆ ಹೆಚ್ಚಿನ ಭದ್ರತೆ : ಪ್ರವೇಶ ನಿಷೇಧ

---Advertisement---

ಸುದ್ದಿಒನ್, ಹಿರಿಯೂರು, ಮೇ. 09 : ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಸಂಘರ್ಷ ಹಿನ್ನೆಲೆಯಲ್ಲಿ ವಾಣಿ ವಿಲಾಸ ಜಲಾಶಯಕ್ಕೆ ಭದ್ರತೆ ಒದಗಿಸಲಾಗಿದ್ದು, ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ವಿವಿ ಸಾಗರ ಡ್ಯಾಂ ಎಲ್ಲಾ ಗೇಟ್ ಗಳನ್ನು ಬಂದ್ ಮಾಡಲಾಗಿದೆ. ಜೊತೆಗೆ ಐಬಿ ರೂಂಗಳನ್ನು ಸಹ ಬಂದ್ ಮಾಡಿ, ಪ್ರವೇಶ ನಿರ್ಬಂಧಿಸಲಾಗಿದೆ. ಗೇಟ್ ಗೆ ಬೀಗ ಹಾಕಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.

ವಿಶ್ವೇಶ್ವರಯ್ಯ ಜಲ ನಿಗಮ ವಿವಿ ಸಾಗರ ಉಪ ವಿಭಾಗದ ಸಹಾಯಕ ಇಂಜಿನಿಯರ್ ಜಯಕುಮಾರ್ ಮಾತನಾಡಿ ದೇಶದಲ್ಲಿನ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಆಣೆಕಟ್ಟುಗಳಿಗೆ ಭದ್ರತೆ ಒದಗಿಸಬೇಕೆಂಬ ಜಲ ಸಂಪನ್ಮೂಲ ಇಲಾಖೆಯ ಆದೇಶದಂತೆ ತಾಲೂಕಿನ ವಿವಿ ಸಾಗರ ಜಲಾಶಯಕ್ಕೂ ಭದ್ರತೆ ಒದಗಿಸಲಾಗಿದೆ. ಜಲಾಶಯಕ್ಕೆ ಪೊಲೀಸ್ ಬಂದೋಬಸ್ತ್ ನೀಡಲಾಗಿದ್ದು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...