Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು : ನಗರದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿ : ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸೂಚನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.08 : ರಾಜ್ಯದೆಲ್ಲೆಡೆ ಡೆಂಗ್ಯೂ ಜ್ವರ ಕಾಣಿಸಿಕೊಳ್ಳುತ್ತಿರುವುದರಿಂದ ನಗರದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವಂತೆ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.

ಸಂತೆಹೊಂಡದಲ್ಲಿ ಸೋಮವಾರ ಗಪ್ಪಿ ಹಾಗೂ ಗಾಂಬೂಸಿಯ ಮೀನು ಮರಿಗಳನ್ನು ಬಿಟ್ಟು ನಂತರ ಮಾತನಾಡಿದ ಅವರು ನಗರದ 35 ವಾರ್ಡ್‍ಗಳಲ್ಲಿಯೂ ಸಂಚರಿಸಿ ಸ್ವಚ್ಚತೆಯನ್ನು ಕಾಪಾಡಬೇಕು. ಚರಂಡಿಗಳನ್ನು ಸ್ವಚ್ಚಗೊಳಿಸಿ ಫಾಗಿಂಗ್ ಯಂತ್ರಗಳ ಮೂಲಕ ಸೊಳ್ಳೆಗಳನ್ನು ನಾಶಪಡಿಸಬೇಕು. ಎಲ್ಲೆಲ್ಲಿ ಪುಷ್ಕರಣಿಗಳಿವೆಯೋ ಅಲ್ಲೆಲ್ಲಾ ಮೀನು ಮರಿಗಳನ್ನು ಬಿಡುವಂತೆ ತಿಳಿಸಿದರು.

ನಗರಸಭೆ ಪೌರಾಯುಕ್ತರಾದ ರೇಣುಕಾರವರು ಗಪ್ಪಿ ಹಾಗೂ ಗಾಂಬೂಸಿಯ ಮೀನುಗಳನ್ನು ಹೊಂಡದಲ್ಲಿ ಬಿಡುವುದರಿಂದ ಲಾರ್ವಗಳನ್ನು ತಿಂದು ಸೊಳ್ಳೆಗಳ ಸಂತತಿ ಕಡಿಮೆ ಮಾಡುತ್ತವೆ ಎಂದರು.
ಪರಿಸರ ಇಂಜಿನಿಯರ್ ಜಾಫರ್, ನಗರಸಭೆ ಹೆಲ್ತ್ ಇನ್ಸ್‍ಪೆಕ್ಟರ್‍ಗಳಾದ ಸರಳ, ಭಾರತಿ, ನಾಗರಾಜ್, ನಾಮ ನಿರ್ದೇಶನ ಸದಸ್ಯ ಹೆಚ್.ಶಬ್ಬೀರ್‍ಭಾಷ ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ಅ13 ರಂದು ನಾಟಕ ಪ್ರದರ್ಶನ : ರಾಜವೀರ ಮದಕರಿನಾಯಕ”ಕ್ಕೆ ಭರ್ಜರಿ‌ ತಾಲೀಮು

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 06 :  ಜಿಲ್ಲಾ ವಕೀಲರ ಸಂಘ ಚಿತ್ರದುರ್ಗ ಹಾಗೂ ಜಿಲ್ಲಾ ವಕೀಲರ ಸಾಂಸ್ಕೃತಿಕ ಬಳಗ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 13 ರಂದು ಮದಕರಿ ನಾಯಕ ಜಯಂತಿ ಹಾಗೂ ದಸರಾ

ಗಿಡಗಳನ್ನು ನೆಟ್ಟು ಸುಮ್ಮನಾದರೆ ಸಾಲದು ಅವುಗಳ ರಕ್ಷಣೆಯ ಜವಾಬ್ದಾರಿಯನ್ನು ಹೊರಬೇಕು : ಕವಿ ಕೊರ್ಲಕುಟೆ ಜೆ.ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 06 : ಗಿಡಗಳನ್ನು ಹಾಕಿ ಸುಮ್ಮನಾದರೆ ಸಾಲದು ಅವುಗಳ ರಕ್ಷಣೆಯ ಸಹ ಜವಾಬ್ದಾರಿ ಹೊರಬೇಕು

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಸಚಿವ ಡಿ ಸುಧಾಕರ್ ನಿವಾಸದ ಮುಂದೆ ಪ್ರತಿಭಟನೆ 

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 06 : ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ

error: Content is protected !!