Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಚ್ಚುತ್ತಿರುವ ಮಧುಮೇಹ ರೋಗಿಗಳು : ಚೀನಾದೊಂದಿಗೆ ಸ್ಪರ್ಧೆಗಿಳಿದ ಭಾರತ…!

Facebook
Twitter
Telegram
WhatsApp

ಮಧುಮೇಹ ರೋಗ ಸದ್ದಿಲ್ಲದೆ ತನ್ನ ವೇಗವನ್ನು ಹೆಚ್ಚಿಸಿದೆ. ವರ್ಷದಿಂದ ವರ್ಷಕ್ಕೆ ಮಧುಮೇಹ ಪೀಡಿತರ ಸಂಖ್ಯೆ ವಿಪರೀತವಾಗಿ ಹೆಚ್ಚುತ್ತಿದೆ. ಮಧುಮೇಹ ರೋಗಿಗಳ ಜನಸಂಖ್ಯೆಯಲ್ಲಿ ಚೀನಾ ಮತ್ತು ಭಾರತ ಹಠಕ್ಕೆ ಬಿದ್ದವರಂತೆ ಸ್ಪರ್ಧಿಸುತ್ತಿವೆ.

ಚೀನಾ 141 ಮಿಲಿಯನ್ ಮಧುಮೇಹ ರೋಗಿಗಳೊಂದಿಗೆ ವಿಶ್ವದ ಅಗ್ರಸ್ಥಾನದಲ್ಲಿದ್ದರೆ, 77 ಮಿಲಿಯನ್ ಮಧುಮೇಹ ರೋಗಿಗಳಿಂದ ಭಾರತ ಎರಡನೇ ಸ್ಥಾನದಲ್ಲಿದೆ.

2045 ರ ವೇಳೆಗೆ ನಮ್ಮ ದೇಶದಲ್ಲಿ ಮಧುಮೇಹ ಪೀಡಿತರ ಸಂಖ್ಯೆ 135 ಮಿಲಿಯನ್ ತಲುಪುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿಸಿದೆ.

ಮಹಿಳೆಯರಿಗಿಂತಲೂ (40 ಪ್ರತಿಶತ)
ಪುರುಷರಿಗೆ (60 ಪ್ರತಿಶತ)
ಹೆಚ್ಚು ಪರಿಣಾಮ ಬೀರುತ್ತಿದೆ.

2020 ರಲ್ಲಿ ದೇಶದಲ್ಲಿ 7 ಲಕ್ಷ ಜನರು ಮಧುಮೇಹದಿಂದ ಸಾವನ್ನಪ್ಪಿದ್ದಾರೆ.
ICMR ಅಂಕಿಅಂಶಗಳ ಪ್ರಕಾರ, ಕೇರಳವು ಶೇ. 19.8 ಪ್ರತಿಶತದಷ್ಟು ಮಧುಮೇಹ ರೋಗಿಗಳೊಂದಿಗೆ ದೇಶದಲ್ಲಿ ಅಗ್ರಸ್ಥಾನದಲ್ಲಿದೆ. ಆ ನಂತರದ ಸ್ಥಾನದಲ್ಲಿ ಚಂಡೀಗಢ ಶೇ.13.6 ತಮಿಳುನಾಡು 8.9  ಮತ್ತು ಆಂಧ್ರಪ್ರದೇಶ ಶೇ. 9 ರಷ್ಟು ನಂತರದ ಸ್ಥಾನದಲ್ಲಿವೆ.

ಮಧುಮೇಹ ಪೀಡಿತರ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ವಿವಿಧ ಅಂಶಗಳು ಕಾರಣವೆಂದು ಈಗಾಗಲೇ ಗುರುತಿಸಲಾಗಿದೆ. ಸ್ಥೂಲಕಾಯ, ದೈಹಿಕ ವ್ಯಾಯಾಮದ ಕೊರತೆ, ಜಂಕ್ ಫುಡ್ ಸೇವನೆ, ಸಮಯಕ್ಕೆ ಸರಿಯಾಗಿ ಊಟ ಮಾಡದಿರುವುದು, ಕೆಲಸದ ಒತ್ತಡ, ಜೀವನಶೈಲಿಯಲ್ಲಿನ ಬದಲಾವಣೆ, ಕುಟುಂಬದ ಆನುವಂಶಿಕತೆ ಪ್ರಮುಖ ಕಾರಣಗಳಾಗಿವೆ.

ಪ್ರತಿ ಇಬ್ಬರು ಮಧುಮೇಹಿಗಳಲ್ಲಿ ಒಬ್ಬರಿಗೆ ಈ ಕಾಯಿಲೆ ಇದೆ ಎಂದು ತಿಳಿದಿರುವುದಿಲ್ಲ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ. ಇದು ಕೂಡ ಮಧುಮೇಹ ರೋಗಿಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!