Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

IND vs AFG: ಎರಡು ಸೂಪರ್ ಓವರ್‌ಗಳ ರೋಚಕ ಪಂದ್ಯದಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು

Facebook
Twitter
Telegram
WhatsApp

 

ಸುದ್ದಿಒನ್, ಬೆಂಗಳೂರು, ಜನವರಿ.18 : ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ (ಜನವರಿ 17) ನಡೆದ ಅಫ್ಘಾನಿಸ್ತಾನ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 10 ರನ್ ಗಳ ಜಯ ಸಾಧಿಸಿದೆ. 

https://x.com/JioCinema/status/1747684671524057449?s=20

ಹೀಗಾಗಿ ರೋಹಿತ್ ಪಡೆ ಮೂರು ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಈ ರೋಚಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಅಫ್ಘಾನಿಸ್ತಾನಕ್ಕೆ 213 ರನ್ ಗಳ ಗುರಿ ನೀಡಿತು. ಬಳಿಕ ಅಫ್ಘಾನಿಸ್ತಾನ ನಿಗಧಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು. ಪಂದ್ಯ ಟೈ ಆಯಿತು. ಆ ಬಳಿಕ ಮೊದಲ ಸೂಪರ್ ಓವರ್ ನಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ 6 ಎಸೆತಗಳಲ್ಲಿ 16 ರನ್ ಗಳಿಸಿತು. ಗುರಿ ಬೆನ್ನತ್ತಿದ ಭಾರತ ಕೂಡ 6 ಎಸೆತಗಳಲ್ಲಿ 16 ರನ್ ಗಳಿಸಿತು. ಎರಡನೇ ಬಾರಿಗೆ ಪಂದ್ಯ ಟೈ ಆಯಿತು. ಇದರೊಂದಿಗೆ ಪಂದ್ಯ ಮತ್ತೊಮ್ಮೆ ಸೂಪರ್ ಓವರ್‌ ಆಡಬೇಕಾಯಿತು. ಈ ವೇಳೆ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಮೊದಲ ಐದು ಎಸೆತಗಳಲ್ಲಿ 2 ವಿಕೆಟ್ ಕಳೆದುಕೊಂಡು 11 ರನ್ ಗಳಿಸಿತ್ತು. ಈ ಮೂಲಕ ಅಫ್ಘಾನಿಸ್ತಾನಕ್ಕೆ 12 ರನ್ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಅಫ್ಘಾನಿಸ್ತಾನ ಮೊದಲ ಮೂರು ಎಸೆತಗಳಲ್ಲಿ 1 ರನ್ ಗಳಿಸಿ ಎರಡು ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ಭಾರತ 10 ರನ್‌ಗಳಿಂದ ರೋಚಕ ಗೆಲುವು ಸಾಧಿಸಿತು.

ರೋಹಿತ್-ರಿಂಕು 190 ರನ್‌ಗಳ ಜೊತೆಯಾಟ :

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ನಿಗಧಿತ 20 ಓವರ್‌ಗಳಲ್ಲಿ 213 ರನ್ ಗಳಿಸಿತ್ತು. ನಾಯಕ ರೋಹಿತ್ ಶರ್ಮಾ 121 ರನ್‌ಗಳ ಅಜೇಯ ಇನ್ನಿಂಗ್ಸ್‌ನೊಂದಿಗೆ ಐದನೇ ಟಿ20 ಶತಕವನ್ನು ಸಿಡಿಸಿದರು. ರಿಂಕು ಸಿಂಗ್ ಕೂಡ 39 ಎಸೆತಗಳಲ್ಲಿ 69 ರನ್ ಗಳಿಸಿ ಅಜೇಯರಾಗಿ ಉಳಿದರು. ರೋಹಿತ್ ಮತ್ತು ರಿಂಕು 190 ರನ್‌ಗಳ ದಾಖಲೆಯ ಜೊತೆಯಾಟ ನಡೆಸಿದರು. ಹೀಗಾಗಿ ಟೀಂ ಇಂಡಿಯಾ ಕೇವಲ 4 ವಿಕೆಟ್ ಕಳೆದುಕೊಂಡು ಅಫ್ಘಾನಿಸ್ತಾನಕ್ಕೆ 213 ರನ್ ಗಳ ಬೃಹತ್ ಗುರಿ ನೀಡಿತ್ತು.

ಈ ಗುರಿಯನ್ನು ಸಾಧಿಸುವ ಸಲುವಾಗಿ ಅಫ್ಘಾನಿಸ್ತಾನ ತಂಡದಲ್ಲಿ ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್ ಮತ್ತು ಗುಲ್ಬದಿನ್ ನೈಬ್ ಕ್ರಮವಾಗಿ 50, 50 ಮತ್ತು 55 ರನ್ ಗಳಿಸಿದರು. ಆಲ್ ರೌಂಡರ್ ಮೊಹಮ್ಮದ್ ನಬಿ 34 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು. ಇದರೊಂದಿಗೆ ಪಂದ್ಯ ಟೈ ಆಯಿತು. ನಂತರ ಎರಡು ಸೂಪರ್ ಓವರ್‌ಗಳ ರೋಚಕ ಪಂದ್ಯದಲ್ಲಿ ಭಾರತಕ್ಕೆ ಗೆಲುವು ಲಭಿಸಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!